ಮೈಸೂರು ರಾಜಮನೆತನಕ್ಕೆ ರಾಜ್ಯ ಸರ್ಕಾರದಿಂದ ಕಿರುಕುಳ : ಹೆಚ್‌ಡಿಕೆ ಗಂಭೀರ ಆರೋಪ

Published : Oct 29, 2024, 04:31 AM IST
ಮೈಸೂರು ರಾಜಮನೆತನಕ್ಕೆ ರಾಜ್ಯ ಸರ್ಕಾರದಿಂದ ಕಿರುಕುಳ : ಹೆಚ್‌ಡಿಕೆ ಗಂಭೀರ ಆರೋಪ

ಸಾರಾಂಶ

ಮೈಸೂರು ರಾಜ ಮನೆತನದ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಹಗೆತನ ಸಾಧಿಸುತ್ತಿದ್ದು, ರಾಜ್ಯದ ಅಭಿವೃದ್ಧಿಗೆ ಮಹೋನ್ನತ ಕೊಡುಗೆ ನೀಡಿರುವ ಆ ಕುಟುಂಬಕ್ಕೆ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

Channapattana By-election 2024: ಮೈಸೂರು ರಾಜ ಮನೆತನದ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಹಗೆತನ ಸಾಧಿಸುತ್ತಿದ್ದು, ರಾಜ್ಯದ ಅಭಿವೃದ್ಧಿಗೆ ಮಹೋನ್ನತ ಕೊಡುಗೆ ನೀಡಿರುವ ಆ ಕುಟುಂಬಕ್ಕೆ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. 

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಕೂಡ್ಲೂರು ಗ್ರಾಮದಲ್ಲಿ ಸೋಮವಾರ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಮೈಸೂರಿನ ಶ್ರೀ ಚಾಮುಂಡೇಶ್ವರಿ ತಾಯಿ ಒಡೆಯರ್ ಮನೆತನದ ಆರಾಧ್ಯದೈವ. ಅವರ ಮನೆತನದಿಂದ ದೇವರನ್ನು ದೂರ ಮಾಡುವ ದುಷ್ಕೃತ್ಯವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದರು.

2 ಬಾರಿ ಸೋತ ನನ್ನ ಮಗನನ್ನ ಈ ಸಾರಿ ಗೆಲ್ಲಿಸುವಂತೆ ಹಾಸನಾಂಬೆಯಲ್ಲಿ ಬೇಡಿಕೊಂಡಿದ್ದೇನೆ: ಕುಮಾರಸ್ವಾಮಿ

ಚಾಮುಂಡೇಶ್ವರಿ ಕ್ಷೇತ್ರದ ಉಸ್ತುವಾರಿಯನ್ನು ರಾಜಮನೆತನ ಬಹಳ ಉತ್ತಮವಾಗಿ ನಿರ್ವಹಣೆ ಮಾಡುತ್ತಿತ್ತು. ಕ್ಷೇತ್ರದ ಅಭಿವೃದ್ಧಿಗೆ ಒಡೆಯರ್ ಕುಟುಂಬ ಸಾಕಷ್ಟು ಕೆಲಸ ಮಾಡಿದೆ. ಅಂತಹ ಕುಟುಂಬಕ್ಕೆ ಧಕ್ಕಿದ್ದ ದೇವರ ಸೇವೆ ಅವಕಾಶವನ್ನು ಸಿದ್ದರಾಮಯ್ಯ ಸರ್ಕಾರ ಕಿತ್ತುಕೊಂಡು ಇನ್ನಿಲ್ಲದ ಕಿರುಕುಳ ಕೊಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ರಾಜ ವಂಶಸ್ಥ, ಸಂಸದ ಯದುವೀರ್ ಒಡೆಯರ್ ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಿರಿಯಾನಿ ಹೋಟೆಲ್ ಕುಟುಂಬದ ಸಾಮೂಹಿಕ ಆತ್ಮ*ಹತ್ಯೆ ಕೇಸಿಗೆ ಟ್ವಿಸ್ಟ್; ವಿಷ ಸೇವಿಸದ ಅಜ್ಜಿ ಸತ್ತಿದ್ಹೇಗೆ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!