
ಮೈಸೂರು (ಅ.28): ಮುಡಾ ಹಗರಣ ಸಂಬಂಧ ಒಂದು ತಿಂಗಳಿಂದ ವಿಚಾರಣೆ ಮಾಡುತ್ತಿರುವ ಲೋಕಾಯುಕ್ತ ಪೊಲೀಸರು ಒಬ್ಬರನ್ನೂ ಬಂಧಿಸಿಲ್ಲ ಎಂದು ಸಿಎಂ ವಿರುದ್ಧದ ಲೋಕಾಯುಕ್ತ ತನಿಖೆ ಬಗ್ಗೆ ದೂರುದಾರ ಸ್ನೇಹಮಯಿ ಕೃಷ್ಣ ಬೇಸರ ವ್ಯಕ್ತಪಡಿಸಿದ್ದಾರೆ.
ಇಂದು ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ದೂರುದಾರ ಸ್ನೇಹಮಯಿ ಕೃಷ್ಣ ಅವರು, ಇವರು ಕೇವಲ ಎರಡು-ಮೂರು ಸಾವಿರ ಲಂಚ ಪಡೆದವರನ್ನ ಬಂಧಿಸೋಕೆ ಇರೋದ? ಲೋಕಾಯುಕ್ತದಿಂದ ಈ ರೀತಿ ವಿಚಾರಣೆಯಿಂದಾಗಿ ಆರೋಪಿಗಳೆಲ್ಲ ಹೊರಗೆ ಬಂದು ಏನೇನೋ ಮಾತಾಡುವಂತೆ ಆಗಿದೆ. ಮುಡಾದ ಹಿಂದಿನ ಆಯುಕ್ತ ನಟೇಶ್ ನನಗೆ ಕಾನೂನು ತಿಳಿವಳಿಕೆ ಇಲ್ಲ ಎಂದಿದ್ದಾರೆ. ಆ ಅಯೋಗ್ಯನಿಗೆ ನಾನು ಸವಾಲು ಹಾಕುತ್ತೇನೆ. ಆತನ ಬಳಿ ಇರುವ ದಾಖಲೆಗಳನ್ನು ತೆಗೆದುಕೊಂಡು ಬರಲಿ. ಪಾರ್ವತಿ ಅವರಿಗೆ ನೀಡಿರುವ ಮಂಜೂರಾತಿ ಪತ್ರದಲ್ಲಿ ನಟೇಶ್ ಕ್ರಮ ಸಂಖ್ಯೆ ಯಾಕೆ ಹಾಕಿಲ್ಲ? 2015ರ ಕಾಯ್ದೆ ಪ್ರಕಾರ ಎಂದಿದ್ದಾರೆ. ಅಂದರೆ 2015ರ ಕಾಯ್ದೆಯಲ್ಲಿ 50-50 ನಿಯಮ ಜಾರಿ ಅಂತಾ ಎಲ್ಲಿ ಇದೆ. ಸುಪ್ರೀಂಕೋರ್ಟ್ ಆದೇಶ ಅನುಸಾರ ಅಂತೆಲ್ಲ ಮಾತಾಡಿದ್ದಾರೆ. ಕೇವಲ ಪಾರ್ವತಿ ಅವರಿಗೆ ನೀಡಿರುವ 14 ಸೈಟ್ ಮಾತ್ರವಲ್ಲ. ನಟೇಶ್ ಹಾಗೂ ದಿನೇಶ್ಕುಮಾರ್ ಕಾಲದಲ್ಲಿ ನೀಡಲಾದ ಅಕ್ರಮ ನಿವೇಶನಗಳ ದಾಖಲಾತಿ ಸಮೇತ ದೂರು ನೀಡಿದ್ದೇನೆ. ಇಷ್ಟಾದರೂ ಈ ಲೋಕಾಯುಕ್ತರು ಈ ವರೆಗೆ ಯಾರನ್ನೂ ಯಾಕೆ ಬಂಧಿಸಿಲ್ಲ? ಎಂದು ಕಿಡಿಕಾರಿದರು.
ವಕ್ಫ್ ಆಸ್ತಿ ನೋಟಿಸ್: ದೀಪಾವಳಿ ಆಚರಿಸದಿರಲು ವಿಜಯಪುರ ರೈತರ ನಿರ್ಧಾರ
ಲೋಕಾಯುಕ್ತ ಎಸ್ಪಿ ಭೇಟಿ ಮಾಡಿ ಈ ಬಗ್ಗೆ ಮಾಹಿತಿ ಪಡೆಯುತ್ತೇನೆ. ನಟೇಶ್ ಹಾಗೂ ದಿನೇಶ್ಕುಮಾರ್ ಬಂಧಿಸುವಂತೆ ದೂರು ನೀಡುತ್ತೇನೆ. ಯಾರನ್ನೂ ಬಂಧಿಸದೆ ಈಗೇ ಮುಂದುವರಿದರೆ ಎಸ್ಪಿ ವಿರುದ್ಧವೇ ದೂರು ಕೊಡುತ್ತೇನೆ. ಲೋಕಾಯುಕ್ತ ಎಸ್ಪಿ ಉದೇಶ್ ವಿರುದ್ಧ ಹೈಕೋರ್ಟ್ ನಲ್ಲಿ ದೂರು ದಾಖಲಿಸುತ್ತೇನೆ. ಇವರು ಇರೋದು ಯಾಕೆ? ಇಷ್ಟೆಲ್ಲ ಸಾಕ್ಷ್ಯ ಸಮೇತ ದೂರು ಕೊಟ್ಟರೂ ಯಾಕೆ ಬಂಧಿಸಲಾಗುತ್ತಿಲ್ಲ? ತಿಂಗಳಿಂದ ವಿಚಾರಣೆ ಮಾಡಿ ಏನು ಕ್ರಮ ಕೈಗೊಂಡಿದ್ದಾರೆ? ಮೂರು ನಾಲ್ಕು ಸಾವಿರ ಲಂಚ ಪಡೆದ ಅಧಿಕಾರಿಗಳನ್ನು ತಕ್ಷಣ ಹೋಗಿ ಬಂಧಿಸುತ್ತೀರಿ, ಮುಡಾದಲ್ಲಿ ಇಷ್ಟೆಲ್ಲ ಹಗರಣ ನಡೆದಿದ್ರೂ, ಅದರ ಬಗ್ಗೆ ಸಾಕ್ಷ್ಯ ಸಮೇತ ದೂರು ನೀಡಿದ್ದರೂ ಕ್ರಮಕೈಗೊಂಡಿಲ್ಲ ಯಾಕೆ? ಎಂದು ಕಿಡಿಕಾರಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ