‘ಸ್ವಾತಂತ್ರ್ಯ ಹೋರಾಟದ ಬಗ್ಗೆ ಗೊತ್ತಿಲ್ಲದ ಅಜ್ಞಾನಿ ಸಿದ್ದರಾಮಯ್ಯ’

Published : Oct 19, 2019, 08:27 AM IST
‘ಸ್ವಾತಂತ್ರ್ಯ ಹೋರಾಟದ ಬಗ್ಗೆ ಗೊತ್ತಿಲ್ಲದ ಅಜ್ಞಾನಿ ಸಿದ್ದರಾಮಯ್ಯ’

ಸಾರಾಂಶ

ಸಿದ್ದರಾಮಯ್ಯ ಸ್ವಾತಂತ್ರ್ಯ ಹೋರಾಟದ ಬಗ್ಗೆ ತಿಳಿವಳಿಕೆ ಇಲ್ಲದ ನಂಬರ್‌ ಒನ್‌ ಅಜ್ಞಾನಿ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ವಾಗ್ದಾಳಿ ನಡೆಸಿದ್ದಾರೆ.   

ಬೆಂಗಳೂರು [ಅ.19]:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾತಂತ್ರ್ಯ ಹೋರಾಟದ ಬಗ್ಗೆ ತಿಳಿವಳಿಕೆ ಇಲ್ಲದ ನಂಬರ್‌ ಒನ್‌ ಅಜ್ಞಾನಿ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ಅವರಲ್ಲಿ ಸ್ವಾತಂತ್ರ್ಯ ಹೋರಾಟದ ಅಜ್ಞಾನ ತುಂಬಿ ತುಳುಕುತ್ತಿದೆ. ಅವರಿಗೆ ದೇಶದ ಸ್ವಾತಂತ್ರ್ಯ ಹೋರಾಟ ಇತಿಹಾಸ ಗೊತ್ತಿಲ್ಲ. ವೀರ ಸಾವರ್ಕರ್‌ ಈ ದೇಶದ ದೊಡ್ಡ ಸ್ವಾತಂತ್ರ್ಯ ಹೋರಾಟಗಾರ. ಅವರ ಇಡೀ ಕುಟುಂಬ ಸ್ವಾತಂತ್ರ್ಯಕ್ಕಾಗಿ ಬಲಿದಾನವಾಗಿದೆ. ಸಾವರ್ಕರ್‌ ಹಾಗೂ ಅವರ ಮೂವರು ಸಹೋದರು ಒಂದೇ ಜೈಲಿನಲ್ಲಿ ಇರುತ್ತಾರೆ. ಜೈಲಿನಲ್ಲಿ ಎಣ್ಣೆ ತೆಗೆಯುವ ಗಾಣಕ್ಕೆ ಎತ್ತಿನ ಬದಲು ಸಾವರ್ಕರ್‌ ಅವರನ್ನು ಕಟ್ಟಿಹಿಂಸಿಸಲಾಗುತ್ತದೆ. ಸಿದ್ದರಾಮಯ್ಯ ಅವರಿಗೆ ಈ ಮಹಾನ್‌ ವೀರನ ಇತಿಹಾಸ ಗೊತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ವಾಜಪೇಯಿ ಪ್ರಧಾನಿಯಾಗಿದ್ದಾಗ ಅಂಡಮಾನ್‌ ಮತ್ತು ನಿಕೋಬಾರ್‌ನಲ್ಲಿ ಸಾವರ್ಕರ್‌ ಸ್ಮರಣಾರ್ಥ ಪ್ರತಿಮೆ ನಿರ್ಮಿಸಿದ್ದರು. ನಂತರ ಯುಪಿಎ ಸರ್ಕಾರ ಬಂದಾಗ ಕಾಂಗ್ರೆಸ್‌ನವರು ಆ ಪ್ರತಿಮೆಯಲ್ಲಿ ಕೆಡವಿದ್ದರು. ಕಾಂಗ್ರೆಸ್‌ನವರಿಗೆ ದೇಶ ಭಕ್ತಿ ಗಂಧಗಾಳಿ ಇಲ್ಲ. ದೇಶ ದ್ರೋಹ ತುಂಬಿ ತುಳುಕುತ್ತಿದೆ. ಕಾಶ್ಮೀರ ವಿಚಾರ, ನಕ್ಸಲ್‌, ಭಯೋತ್ಪಾದನೆ, ಕಪ್ಪು ಹಣ, ಪಾಕಿಸ್ತಾನ, ಅಂಬೇಡ್ಕರ್‌, ಗಾಂಧೀಜಿ ವಿಚಾರದಲ್ಲಿ ಕಾಂಗ್ರೆಸ್‌ ದೇಶದ್ರೋಹಿಯಾಗಿದೆ. ದೇಶದ ಸ್ವಾತಂತ್ರ್ಯ ಹೋರಾಟಗಾರರ ಪೈಕಿ ‘ಸ್ವಾತಂತ್ರ್ಯ ವೀರ’ ಎಂದು ಕರೆಯುವುದು ಸಾವರ್ಕರ್‌ಗೆ ಮಾತ್ರ. 

ಕಾಂಗ್ರೆಸ್‌ನವರು ಮಹಾತ್ಮ ಗಾಂಧಿ ಮಾತ್ರ ಸ್ವಾತಂತ್ರ್ಯ ಹೋರಾಟಗಾರ ಎಂದು ತಿಳಿದುಕೊಂಡಿದ್ದಾರೆ. ಆದರೆ, ಈಗ ಆ ಗಾಂಧೀಜಿ ವಿಚಾರಗಳಿಗೂ ಎಳ್ಳು ನೀರು ಬಿಟ್ಟಿದ್ದಾರೆ ಎಂದು ಅವರು ಪತ್ರಿಕಾ ಹೇಳಿಕೆ ಮೂಲಕ ಟೀಕಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!
ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!