
ಮಂಗಳೂರು (ಮೇ.21): ಮಸೀದಿಯಲ್ಲಿ ಸ್ಥಳಾವಕಾಶದ ಕೊರತೆಯಿತ್ತು. ರಸ್ತೆಯಲ್ಲಿ ನಮಾಜ್ ಮಾಡಿದ್ರು. ಇದೊಂದು ಅನಗತ್ಯ ವಿಚಾರ. ನಮಗೆ ದೇವರು ಒಬ್ಬನೇ ನಮ್ಮ ದೇವರು ಬೇರೆ ಅಲ್ಲ, ನಿಮ್ಮ ದೇವರು ಬೇರೆಯಲ್ಲ ಎಂದು ಮಾಜಿ ಸಚಿವ ರಾಮನಾಥ್ ರೈ ತಿಳಿಸಿದರು.
ಮಂಗಳೂರು ರಸ್ತೆಯಲ್ಲೇ ನಮಾಜ್ ಮಾಡಿದ ಪ್ರಕರಣ ಸಂಬಂಧ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಹಿಂದೂ ಮುಸ್ಲಿಂ ಕ್ರಿಶ್ಚಿಯನ್ ಕಾರ್ಯಕ್ರಮಗಳು ನಡೆಯುತ್ತವೆ. ಸಣ್ಣ ಸಮಸ್ಯೆಯನ್ನು ಇಷ್ಟೊಂದು ರಂಪಾಟ ಮಾಡಿದ್ದು ಸರಿಯಲ್ಲ. ಅಲ್ಪಸಂಖ್ಯಾತ ಮತೀಯವಾದ ಬಹುಸಂಖ್ಯಾತ ಮತೀಯವಾದವನ್ನು ಕಾಂಗ್ರೆಸ್ ಒಪ್ಪಲ್ಲ. ಏನೋ ಒಂದು ಗಳಿಗೆಯಲ್ಲಿ ಈ ಘಟನೆ ನಡೆದುಹೋಗಿದೆ. ಅದನ್ನ ಸರಿ ಮಾಡಿಕೊಂಡು ಪ್ರಕರಣ ರದ್ದುಗೊಳಿಸುವುದನ್ನ ಮಾಡಲಾಗಿದೆ. ಈ ಹಿಂದೆಯೂ ಈ ರೀತಿ ಸುಮೊಟೊ ಪ್ರಕರಣ ಆಗಿಲ್ಲ. ಇದಕ್ಕಿಂತ ದೊಡ್ಡ ಪ್ರಚೋದನಕಾರಿ ಮಾತುಗಳನ್ನು ಈ ಜಿಲ್ಲೆಯಲ್ಲಿ ಮಾತನಾಡಿದ್ದಾರೆ. ಮಸೀದಿಯಲ್ಲಿ ಜಾಗ ಇಲ್ಲದಾಗ ಹೊರಗೆ ಬರುವುದು ಸಹಜ ಇದನ್ನ ದೊಡ್ಡದು ಮಾಡಬಾರದು. ಆದರೆ ಮತೀಯ ಸಾಮರಸ್ಯಕ್ಕೆ ತೊಂದರೆಯಾಗಿ ಘರ್ಷಣೆ ಆಗಬೇಕೆಂದು ಈ ರೀತಿ ಮಾಡಲಾಗಿದೆ ಎಂದರು.
ಮಂಗಳೂರು: ನಡುರಸ್ತೆಯಲ್ಲೇ ನಮಾಜ್ಗೆ ಕುಳಿತ ಯುವಕರು; ವಾಹನ ಮುಂದೆ ಸಾಗದೇ ಯೂಟರ್ನ್!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ