
ಬೆಂಗಳೂರು (ಡಿ.15): ತಾಂತ್ರಿಕ ದೋಷದಿಂದ ಪೀಣ್ಯ ನಿಲ್ದಾಣದಲ್ಲಿ ಮೆಟ್ರೋ ರೈಲು ಕೆಟ್ಟು ನಿಂತಿದ್ದು ಪ್ರಯಾಣಿಕರು ಪರದಾಡುತ್ತಿದ್ದಾರೆ. ಬೆಳಗ್ಗೆ 10 ಗಂಟೆಯ ವೇಳೆಗೆ ರೈಲು ಕೆಟ್ಟು ನಿಂತಿದ್ದು ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ಸದ್ಯ ಯಶವಂತಪುರ – ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮಾತ್ರ ಮೆಟ್ರೋ ಸಂಚಾರ ನಡೆಸುತ್ತಿದ್ದು ಪೀಣ್ಯ – ನಾಗಸಂದ್ರ ರೈಲು ಸಂಚಾರ ಸ್ಥಗಿತಗೊಂಡಿದೆ. ಮುಂದಿನ 2 ಗಂಟೆಯ ಒಳಗಡೆ ತಾಂತ್ರಿಕ ದೋಷವನ್ನು ಸರಿಪಡಿಸಲಾಗುವುದು ಎಂದು ಬಿಎಂಆರ್ಸಿಎಲ್ ತಿಳಿಸಿದೆ.
ಚಾಲಕ ರಹಿತ ನಮ್ಮ ಮೆಟ್ರೋ ರೈಲು ಆರಂಭಕ್ಕೆ ತಯಾರಿ, ಚೀನಾದ ಎಂಜಿನೀಯರ್ಸ್ಗೆ ಭಾರತ ವೀಸಾ!
ಮೆಟ್ರೋ ಸ್ಥಗಿತದಿಂದಾಗಿ ಪ್ರಯಾಣಿಕರು ಪರದಾಟವನ್ನು ಅನುಭವಿಸಿದರು. ಸದ್ಯ ಯಶವಂತಪುರ – ಸಿಲ್ಕ್ ಇನ್ಸ್ಟಿಟ್ಯೂಟ್ವರಗೆ ಮಾತ್ರ ಮೆಟ್ರೋ ಸಂಚಾರಿಸುತ್ತಿದೆ. ನಾಗಸಂದ್ರದಿಂದ ಯಶವಂತಪುರ ಹಾಗೂ ಯಶವಂತಪುರದಿಂದ ನಾಗಸಂದ್ರದ ಎರಡು ಕಡೆಯಿಂದಲೂ ಮೆಟ್ರೋ ರೈಲು ಸಂಚಾರವಿಲ್ಲ. ಹೀಗಾಗಿ ಮೆಟ್ರೋ ರೈಲಿಗಾಗಿ ಕಾದು ಪ್ರಯಾಣಿಕರು ಸಂಚಾರವಿಲ್ಲದೆ ವಾಪಸ್ ಆಗುತ್ತಿದ್ದಾರೆ. ಬೆಳಗ್ಗೆ 10:18ಕ್ಕೆ ರೈಲು ಹಳಿಯಲ್ಲಿ ಕಾಣಿಸಿಕೊಂಡ ಸಮಸ್ಯೆಯಿಂದ ಮೆಟ್ರೋ ಓಡಾಟದಲ್ಲಿ ವ್ಯತ್ಯಯ ಉಂಟಾಗಿದೆ. ಗಂಭೀರ ಸಮಸ್ಯೆ ಏನಿಲ್ಲ ಶೀಘ್ರವೇ ಸೇವೆ ಆರಂಭಿಸುತ್ತೇವೆ ಎಂದಿದ್ದಾರೆ.
ನಮ್ಮ ಮೆಟ್ರೋದಲ್ಲಿ ಸಮಸ್ಯೆ ಆಯ್ತಾ? ತುರ್ತು ಎಚ್ಚರಿಕೆ ಗಂಟೆ ಬಳಸಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ