
ಬೆಂಗಳೂರು[ಜ.08]: ವಿವಿಧ ಕಾರ್ಮಿಕ ಸಂಘಟನೆಗಳು ಬೇಡಿಕೆಗಳ ಈಡೇರಿಕೆಗಾಗಿ ಜನವರಿ 8 ಹಗೂ 9ರಂದು ಬಂದ್ಗೆ ಕರೆ ಕೊಟ್ಟಿವೆ. ಈ ಬಂದ್ಗೆ ಹಲವಾರು ಸಂಘಟನೆಗಳು ಬೆಂಬಲ ಸೂಚಿಸಿದ್ದವು, ಹೀಗಾಗಿ ಜನ ಸಮಾನ್ಯರಲ್ಲಿ ಕೊಂಚ ಗೊಂದಲವೇರ್ಪಟ್ಟಿತ್ತು. ಆದರೀಗ ರಾಜ್ಯದಲ್ಲಿ ಬಂದ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಎಂದಿನಂತೆ ಸಂಚಾರ ನಡೆಸುತ್ತಿದ್ದು, ಪ್ರಯಾಣಿಕರಿಗೆ ಹಾಗೂ ಉದ್ಯೋಗಿಗಳಿಗೆ ಕೊಂಚ ಸಮಾಧಾನ ನೀಡಿದೆ. ಇನ್ನು ವಿವಿಧ ಭಾಗಗಳಿಂದ ಬಂದ ಪ್ರಯಾಣಿಕರಿಗೂ ಇದು ನೆಮ್ಮದಿ ನೀಡಿದೆ.
ಪ್ರಯಾಣಿಕರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಮೆಟ್ರೋ ರೈಲು ಅಧಿಕಾರಿಗಳು ಸಂಚಾರವ್ನನು ಹೆಚ್ಚಿಸುವ ಚಿಂತನೆ ನಡೆಸಿದ್ದಾರೆ. ಇತ್ತ ಬಿಎಂಟಿಸಿ ಬಸ್ಗಳೂ ಓಡಾಟ ನಡೆಸಿವೆ, ಆದರೆ ಬಸ್ ಸಂಖ್ಯೆ ಸಾಮಾನ್ಯ ದಿನಕ್ಕಿಂತ ಕೊಂಚ ಕಡಿಮೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ