
ಬೆಂಗಳೂರು[ಡಿ.20]: ನಗರದ ಎಂ.ಜಿ.ರಸ್ತೆಯ ಟ್ರಿನಿಟಿ ಮೆಟ್ರೋ ನಿಲ್ದಾಣ ಬಳಿ ಬಿರುಕು ಬಿಟ್ಟ ಪಿಲ್ಲರ್ ಬೀಮ್(ವಯಾಡಕ್ಟ್) ದುರಸ್ತಿ ಕಾರ್ಯದ ಹಿನ್ನೆಲೆಯಲ್ಲಿ ಡಿ.28ರಂದು ರಾತ್ರಿ 8ರಿಂದ ಡಿ.30ರವರೆಗೆ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ. ಅಂದು ಕೇಂದ್ರ ರೈಲ್ವೆ ಅಧಿಕಾರಿಗಳು ಮೆಟ್ರೋ ಪರಿಶೀಲನೆ ನಡೆಸಲಿದ್ದು, ದುರಸ್ತಿ ಕಾರ್ಯವೂ ನಡೆಯಲಿದೆ. ಈ ಕಾರಣದಿಂದ ಡಿ.28ರಂದು ರಾತ್ರಿ 8ರಿಂದ ಎಂ.ಜಿ.ರಸ್ತೆಯಿಂದ ಇಂದಿರಾನಗರದ ನಡುವಿನ ಮೆಟ್ರೋ ರೈಲು ಸಂಚಾರ ರದ್ದುಪಡಿಸಲಾಗಿದೆ.
ಡಿ.31ರಂದು ಎಂದಿನಂತೆ ನಮ್ಮ ಮೆಟ್ರೋ ರೈಲು ವಾಣಿಜ್ಯ ಸಂಚಾರ ನಡೆಸಲಿದೆ. ನೇರಳೆ ಮಾರ್ಗದಲ್ಲಿ ಮೈಸೂರು ರಸ್ತೆಯಿಂದ ಎಂ.ಜಿ.ರಸ್ತೆ ಮತ್ತು ಇಂದಿರಾ ನಗರದಿಂದ ಬೈಯಪ್ಪನಹಳ್ಳಿ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರಕ್ಕೆ ಅಡ್ಡಿ ಇಲ್ಲ. ಆದರೆ ಮೆಟ್ರೋ ರೈಲು 6ರಿಂದ 14 ನಿಮಿಷಗಳಿಗೆ ಒಂದರಂತೆ ಸಂಚರಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಚಿತ ಬಸ್ ಸೇವೆ:
ಮೆಟ್ರೋ ಪ್ರಯಾಣಿಕರ ಅನುಕೂಲಕ್ಕಾಗಿ ಡಿ.28ರಂದು ರಾತ್ರಿ 8ರಿಂದ 11ರವರೆಗೆ ಮತ್ತು ಡಿ.29 ಹಾಗೂ 30ರಂದು ಉಚಿತವಾಗಿ ಬಸ್ ಸೇವೆಗಳನ್ನು ಕಬ್ಬನ್ ಪಾರ್ಕ್ನಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವೆ (ಎರಡೂ ದಿಕ್ಕುಗಳಲ್ಲಿ) ಒದಗಿಸಲಿದೆ. ಡಿ.31ರಂದು ಬೆಳಗ್ಗೆ 5ಕ್ಕೆ ನೇರಳೆ ಮಾರ್ಗದಲ್ಲಿ ಎಂದಿನಂತೆ ಮೆಟ್ರೋ ಸಂಚಾರ ಮುಂದುವರೆಯಲಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ