
ಶಿವಮೊಗ್ಗ (ಮಾ.18): ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗಕ್ಕೆ ಚುನಾವಣಾ ಪ್ರಚಾರ ಕಾರ್ಯಕ್ರಮಕ್ಕೆ ಆಗಮಿಸಲಿದ್ದು, ಒಟ್ಟು 43 ಜನರಿಗೆ ವೇದಿಕೆ ಮೇಲೆ ಆಸೀನರಾಗಲು ಅವಕಾಶ ನೀಡಲಾಗಿದೆ. ಮೈತ್ರಿ ಪಕ್ಷದ (ಜೆಡಿಎಸ್) ಶಾಸಕಿ ಶಾರದಾ ಪುರಿನಾಯ್ಕ ಅವರಿಗೆ ವೇದಿಕೆ ಮೇಲೆ ಅವಕಾಶ ಕೊಡಲಾಗಿದ್ದರೂ, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರಿಗೆ ಮಾತ್ರ ಸ್ಥಾನವನ್ನು ಕಲ್ಪಿಸಿಲ್ಲ.
ಶಿವಮೊಗ್ಗದಲ್ಲಿ ನಡೆಯುವ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ನಾನು ಹೋಗುವುದಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದರು. ಆದರೆ, ಮುಖ್ಯವಾಗಿ ರಾಜ್ಯ ಬಿಜೆಪಿ ನಾಯಕರೇ ಮೋದಿ ಕಾರ್ಯಕ್ರಮದ ವೇದಿಕೆಯಲ್ಲಿ ಭಾಗವಹಿಸಲು ಕುರ್ಚಿಯನ್ನು ಮೀಸಲಿಟ್ಟಿಲ್ಲ. ಇನ್ನು ಮೋದಿ ಕಾರ್ಯಕ್ರಮದ ಪಟ್ಟಿಯನ್ನು ಬಿಟುಗಡೆ ಮಾಡಲಾಗಿದ್ದು, 43 ನಾಯಕರು ವೇದಿಕೆಯನ್ನು ಹಂಚಿಕೊಳ್ಳಲಿದ್ದಾರೆ ಎಂದು ಪಟ್ಟಿ ಸಿದ್ಧಪಡಿಸಲಾಗಿದೆ. ಅದರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದಿಂದ ಜೆಡಿಎಸ್ ಶಾಸಕಿ ಶಾರದಾ ಪುರಿನಾಯ್ಕ ಅವರಿಗೂ ವೇದಿಕೆಯಲ್ಲಿ ಕೂರಲು ಕುರ್ಚಿ ಮೀಸಲಿಡಲಾಗಿದೆ. ಆದರೆ, ಈಶ್ವರಪ್ಪ ಅವರಿಗೆ ಮಾತ್ರ ಕುರ್ಚಿಯನ್ನು ಮೀಸಲಿಟ್ಟಿಲ್ಲ ಎಂದು ತಿಳಿದುಬಂದಿದೆ.
ಕಾಂಗ್ರೆಸ್ನಿಂದ ನನಗೆ ಆಫರ್ ಬಂದಿದೆ, ನಾಳೆಯೇ ನನ್ನ ನಿಲುವನ್ನು ತಿಳಿಸ್ತೇನೆ; ಸಂಸದ ಡಿ.ವಿ. ಸದಾನಂದಗೌಡ
ಪ್ರಧಾನಿ ಮೋದಿ ಜೊತೆ ಮೊದಲ ಸಾಲಿನಲ್ಲಿ ವೇದಿಕೆ ಹಂಚಿಕೊಳ್ಳಲಿರುವ ಗಣ್ಯರ ವಿವರ ಇಲ್ಲಿದೆ ನೋಡಿ..
ಮೇಲಿನ 18 ಜನರನ್ನು ಒಳಗೊಂಡು ಒಟ್ಟು 43 ಗಣ್ಯರು ವೇದಿಕೆಯಲ್ಲಿ ಕೂರಲು ಅವಕಾಶ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ