ಶಕ್ತಿಸೌಧದಲ್ಲೇ ಪಾಕಿಸ್ತಾನ ಪರ ಘೋಷಣೆ! ಸ್ವಯಂಪ್ರೇರಿತ ಕೇಸ್‌ ದಾಖಲಿಸಿದ ವಿಧಾನಸೌಧ ಪೊಲೀಸರು!

Published : Feb 28, 2024, 12:11 AM IST
ಶಕ್ತಿಸೌಧದಲ್ಲೇ ಪಾಕಿಸ್ತಾನ ಪರ ಘೋಷಣೆ! ಸ್ವಯಂಪ್ರೇರಿತ ಕೇಸ್‌ ದಾಖಲಿಸಿದ ವಿಧಾನಸೌಧ ಪೊಲೀಸರು!

ಸಾರಾಂಶ

ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಮಂಗಳವಾರ ಸಂಜೆ ಪ್ರಕಟವಾಗಿದ್ದು, ಕಾಂಗ್ರೆಸ್‌ನ ಮೂವರು ಹಾಗೂ ಬಿಜೆಪಿಯ ಒಬ್ಬರು ಜಯಗಳಿಸಿದ್ದಾರೆ.

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಮಂಗಳವಾರ ಸಂಜೆ ಪ್ರಕಟವಾಗಿದ್ದು, ಕಾಂಗ್ರೆಸ್‌ನ ಮೂವರು ಹಾಗೂ ಬಿಜೆಪಿಯ ಒಬ್ಬರು ಜಯಗಳಿಸಿದ್ದಾರೆ.

ಗೆಲುವಿನ ಬಳಿಕ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಅವರ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತವಾಗಿ ಕೇಸ್ ದಾಖಲಿಸಿದ್ದಾರೆ.

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ದೇಶದ್ರೋಹಿಗಳನ್ನು ಮೊದಲು ಒದ್ದು ಒಳಗೆ ಹಾಕಿ: ಪ್ರಹ್ಲಾದ ಜೋಶಿ ಆಗ್ರಹ

ವಿಧಾನಸೌಧದಲ್ಲಿ ಕರ್ತವ್ಯದಲ್ಲಿದ್ದ ಸಹಾಯಕ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಶಿವಕುಮಾರ್‌ ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಐಪಿಸಿ ಸೆಕ್ಷನ್ 153 ಬಿ(ರಾಷ್ಟ್ರೀಯ ಸಮಗ್ರತೆ ಧಕ್ಕೆ ತರುವ ಹೇಳಿಕೆ) 505 (ಸಾರ್ವಜನಿಕ ಕೇಡಿಗೆ ಕಾರಣವಾಗುವ ಹೇಳಿಕೆ) ಆರೋಪದ ಅಡಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ: ಬಾಂಬೆಯ ತಾಜ್ ಹೋಟೆಲ್‌ನಲ್ಲಿ ಆದಂತಹ ಭಯ ನನಗೆ ಆಗ್ತಿದೆ: ಆರ್ ಅಶೋಕ್

ಇನ್ನು ವಿಧಾನಸಭೆ ವಿಪಕ್ಷ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಶಾಸಕರಾದ ಡಾ. ಭರತ್ ಶೆಟ್ಟಿ, ಹರೀಶ್ ಪೂಂಜ, ಜ್ಯೋತಿ ಗಣೇಶ್ ಅವರನ್ನೊಳಗೊಂಡ ಬಿಜೆಪಿ ನಿಯೋಗ ಈ ಸಂಬಂಧ ವಿಧಾ‌ನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಅಲ್ಲದೇ ಪಾಕ್​ ಪರ ಘೋಷಣೆ ಕೂಗಿದವರನ್ನು ಕೂಡಲೇ ಬಂಧಿಸಬೇಕೆಂದು ಠಾಣೆ ಮುಂದೆಯೇ ಪ್ರತಿಭಟನೆ ನಡೆಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

State News Live: ರಂಗಭೂಮಿ ಬದಲಾಗುತ್ತಿದೆ, ಹೊಸ ಯೋಚನೆ ಜೊತೆ ಹಣವೂ ಹುಟ್ಟುತ್ತಿದೆ - ರಾಜೇಶ್‌ ನಟರಂಗ
Dr ಹಾಗೂ Profಗೆ ಇದೀಗ Tr ಹೊಸ ಸೇರ್ಪಡೆ, ರಾಜ್ಯದ ಶಿಕ್ಷಕರಿಗೆ ಇನ್ನು Tr ವಿಶೇಷಣದ ಗೌರವ