ರಾಜ್ಯದ ಇಬ್ಬರು ಶಿಕ್ಷಕರಿಗೆ ರಾಷ್ಟ್ರ ಪ್ರಶಸ್ತಿ

Published : Aug 22, 2020, 08:51 AM IST
ರಾಜ್ಯದ  ಇಬ್ಬರು ಶಿಕ್ಷಕರಿಗೆ ರಾಷ್ಟ್ರ ಪ್ರಶಸ್ತಿ

ಸಾರಾಂಶ

 2020ರ ಸಾಲಿನ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪ್ರಕಟಿಸಲಾಗಿದ್ದು, ಕರ್ನಾಟಕದ ಇಬ್ಬರು ಸೇರಿ ಒಟ್ಟು 47 ಮಂದಿ ಶಿಕ್ಷಕರಿಗೆ ಪ್ರಶಸ್ತಿ ಲಭಿಸಿದೆ. 

ನವದೆಹಲಿ (ಆ.22): 2020ರ ಸಾಲಿನ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪ್ರಕಟಿಸಲಾಗಿದ್ದು, ಕರ್ನಾಟಕದ ಇಬ್ಬರು ಸೇರಿ ಒಟ್ಟು 47 ಮಂದಿ ಶಿಕ್ಷಕರಿಗೆ ಪ್ರಶಸ್ತಿ ಲಭಿಸಿದೆ. 

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ‘ನಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’ಯ ಶಿಕ್ಷಕ ಯಾಕೂಬ್‌.ಎಸ್‌ ಹಾಗೂ ಕಲಬುರಗಿ ಜಿಲ್ಲೆಯ ಅಫ್ಜಲ್‌ಪುರ ತಾಲೂಕಿನ ‘ಬಂದರವಾಡ ಹಿರಿಯ ಪ್ರಾಥಮಿಕ ಶಾಲೆ’ಯ ಶಿಕ್ಷಕಿ ಸುರೇಖಾ ಜಗನ್ನಾಥ್‌ ಅವರಿಗೆ ಈ ಗೌರವ ಲಭಿಸಿದೆ. ಕೇಂದ್ರ ಶಿಕ್ಷಣ ಸಚಿವಾಲಯ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ವಿಜೇತರನ್ನು ಆಯ್ಕೆ ಮಾಡಿದೆ.

ಸಮೀಕ್ಷೆಯಿಂದ ಬಯಲಾಯ್ತು ಆನ್‌ಲೈನ್ ಶಿಕ್ಷಣದ ಅಸಲಿ ಮುಖ: ವಿದ್ಯಾರ್ಥಿಗಳಿಗೆ ತುಂಬಲಾರದ ನಷ್ಟ!.. 

ದೇಶದ ಎಲ್ಲಾ ರಾಜ್ಯ, ಕೇಂದ್ರಾಡಳಿತ ಪ್ರದೇಶ ಹಾಗೂ ಸಂಸ್ಥೆಗಳಿಂದ ಒಟ್ಟು 153 ಶಿಕ್ಷಕರ ಹೆಸರನ್ನು ಶಿಫಾರಸ್ಸು ಮಾಡಲಾಗಿದ್ದು, ಈ ಪೈಕಿ ಆಯ್ಕೆ ಸಮಿತಿ 47 ಶಿಕ್ಷಕರ ಹೆಸರನ್ನು ಅಂತಿಮಗೊಳಿಸಿದೆ. ಪ್ರತೀ ಬಾರಿ ಸೆ.5ರ ಶಿಕ್ಷಕರ ದಿನದಂದು ಈ ಪ್ರಶಸ್ತಿ ನೀಡಲಾಗುತ್ತಿದ್ದು, ಈ ವರ್ಷದ ಬಗ್ಗೆ ಯಾವುದೇ ಮಾಹಿತಿ ಇಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

KSRTC ಪ್ರಯಾಣಿಕರಿಗೆ ಬಿಗ್ ಶಾಕ್! ಇಂಧನ ಬೆಲೆ ಏರಿಕೆ ನೆಪ, ಶೀಘ್ರ ಬಸ್‌ ದರ ಹೆಚ್ಚಳ, ಸಾರಿಗೆ ಸಚಿವ ಮಹತ್ವದ ಸುಳಿವು
80ನೇ ಸ್ವಾತಂತ್ರ್ಯ ದಿನ: 72,000 ಸರ್ಕಾರಿ ನೌಕರಿ, ಉಚಿತ ಕೋಡಿಂಗ್, AI ವಿವಿ ಘೋಷಿಸಿದ ಸಿಎಂ ಡಿ.ಕೆ.ಶಿವಕುಮಾರ್!