
ಉತ್ತರ ಕನ್ನಡ, ಕಾರವಾರ (ಸೆ.30): ಈದ್ ಮಿಲಾದ್ ಹಬ್ಬದಂದು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಪ್ರಕರಣದಲ್ಲಿ ಶಿರಸಿ ಮೂಲದ ಆರೋಪಿಯನ್ನು ಬಂಧಿಸಿದ ಪೊಲೀಸರು.
ಶಿರಸಿಯ ರಾಮನಬೈಲ್ ನಿವಾಸಿ ಉಮರ್ ಫಾರೂಕ್ (38) ಬಂಧಿತ ಆರೋಪಿ.
ಈದ್ ಮಿಲಾದ್ ಹಬ್ಬದಂದು ರಾಷ್ಟ್ರ ಧ್ವಜಕ್ಕೆ ಅವಮಾನ. ರಾಷ್ಟ್ರಧ್ವಜದ ಮೇಲೆ ಗುಂಬಜ್ ಹಾಗೂ ಮುಸ್ಲಿಂ ಧರ್ಮದ ಘೋಷಣೆ ಬರೆದ ಚಿತ್ರ ಅಂಟಿಸಿದ್ದ ಭೂಪ. ಅಶೋಕ ಚಕ್ರವಿರುವ ಸ್ಥಳದಲ್ಲಿ ಗುಂಬಜ್ ಹಾಗೂ ಘೋಷಣೆ ಬರೆದು ಆ ಧ್ವಜವನ್ನು ತನ್ನ ಮನೆಯ ಬಳಿ ಒಂದು ಕಂಬಕ್ಕೆ ಕಟ್ಟಿದ್ದ ವಿಕೃತಿ ಮೆರೆದಿದ್ದ ಭೂಪ.
ರಾಷ್ಟ್ರಧ್ವಜಕ್ಕೆ ಅವಮಾನ: ಮಮತಾ ಬ್ಯಾನರ್ಜಿ ವಿರುದ್ಧ ತನಿಖೆಗೆ ಕೋರ್ಟ್ ಆದೇಶ
ಈ ಘಟನೆಯ ವಿಡಿಯೋ ಎಲ್ಲೆಡೆ ವೈರಲ್ ಆಗಿ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ರಾಷ್ಟ್ರಧ್ವಜಕ್ಕೆ ಅವಮಾನ ತಡೆಗಟ್ಟುವಿಕೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿರುವ ಪೊಲೀಸರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ