ಹಾಸನ: ಮಕ್ಕಳಿಂದ ಸಿಗದ ಪ್ರೀತಿ: ವೃದ್ಧಾಶ್ರಮದಿಂದ ಬಂದು ಸಾವಿಗೆ ಶರಣಾದ ದಂಪತಿ

Published : Feb 25, 2026, 12:48 PM IST
hasana elderly couple takes their own life

ಸಾರಾಂಶ

ಹಾಸನದಲ್ಲಿ, ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ವೃದ್ಧ ದಂಪತಿ ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಡಗಿನ ಸ್ಥಿತಿವಂತ ದಂಪತಿ, ತಮ್ಮ ಇಬ್ಬರು ಗಂಡು ಮಕ್ಕಳಿಗೆ ಕಾಫಿ ತೋಟ ಸೇರಿದಂತೆ ಆಸ್ತಿ ನೀಡಿದ್ದರೂ, ವೃದ್ಧಾಪ್ಯದಲ್ಲಿ ಆಸರೆಯಾಗದ ಕಾರಣ ಈ ದುರಂತ ನಿರ್ಧಾರ ಕೈಗೊಂಡಿದ್ದಾರೆ.

ಸಾವಿಗೆ ಶರಣಾದ ವೃದ್ಧ ದಂಪತಿ

ಮಕ್ಕಳಿಗಾಗಿ ಕಾಫಿತೋಟ ಮನೆ ಸೇರಿದಂತೆ ಬೇಕಾದಷ್ಟು ಆಸ್ತಿ ಮಾಡಿಟ್ಟರು ಮಕ್ಕಳು ತಮ್ಮನ್ನು ಸರಿಯಾಗಿ ನೋಡುತ್ತಿಲ್ಲ ಎಂದು ಮಾನಸಿಕ ಖಿನ್ನತೆಗೊಳಗಾಗಿ ವೃದ್ಧ ದಂಪತಿ ಸಾವಿಗೆ ಶರಣಾದ ಘಟನೆ ಹಾಸನದಲ್ಲಿ ಕೆಲ ದಿನಗಳ ಹಿಂದೆ ನಡೆದಿದೆ. ಮಕ್ಕಳ ನಿರ್ಲಕ್ಷ್ಯದ ಕಾರಣದಿಂದ ವೃದ್ಧದಂಪತಿ ವೃದ್ಧಾಶ್ರಮವನ್ನು ಸೇರಿದ್ದರು. ಆದರೆ ಅಲ್ಲೂ ಅವರಿಗೆ ನೆಮ್ಮದಿ ಸಿಗದೇ ಅಲ್ಲಿಂದ ಹೊರಟು ಬಂದು ಸಾವಿಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.

ಮೃತರನ್ನು ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಅರೇ ಹೊಸೂರು ಗ್ರಾಮದ 80 ವರ್ಷದ ಡೇನಿಯಲ್ ಹಾಗೂ 73 ವರ್ಷದ ಮೇರಿ ಎಂದು ಗುರುತಿಸಲಾಗಿದೆ. ಇವರು ಹಾಸನದ ಕರಿಗೌಡ ಕಾಲೋನಿಯಲ್ಲಿ ರೈಲು ಹಳಿಗೆ ಹಾರಿ ಸಾವಿಗೆ ಶರಣಾಗಿದ್ದಾರೆ. ಈ ದಂಪತಿಗೆ ನೆಲ್ಸನ್ ಹಾಗೂ ವಿಲ್ಸನ್ ಎಂಬ ಇಬ್ಬರು ಗಂಡು ಮಕ್ಕಳಿದ್ದು, ಮಕ್ಕಳಿಗಾಗಿ ಮನೆ ಕಾಫಿ ತೋಟ ಸೇರಿದಂತೆ ಚೆನ್ನಾಗಿ ಆಸ್ತಿ ಮಾಡಿದ್ದು, ಸ್ಥಿತಿವಂತರಾಗಿದ್ದರು. ಆದರೆ ವೃದ್ಧಾಪ್ಯದಲ್ಲಿ ಮಕ್ಕಳು ತಮ್ಮನ್ನು ಚೆನ್ನಾಗಿ ಮಾತನಾಡಿಸುತ್ತಿಲ್ಲ, ತಮ್ಮ ಕಷ್ಟ ಸುಖ ವಿಚಾರಿಸುತ್ತಿಲ್ಲ ಎಂದು ಮನನೊಂದ ದಂಪತಿ ಈ ಆಘಾತಕಾರಿ ನಿರ್ಧಾರ ಕೈಗೊಂಡಿದ್ದಾರೆ.

ಇದನ್ನೂ ಓದಿ: ಪುತ್ತೂರು ಬಿಜೆಪಿ ನಾಯಕನ ಪುತ್ರನಿಂದ ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ: ಆತ್ಮ*ಹತ್ಯೆಗೆ ಯತ್ನಿಸಿದ ಮಗುವಿನ ತಾಯಿ

ಆಸ್ತಿಯ ಜೊತೆ ಮಕ್ಕಳಿಗೆ ಒಳ್ಳೆಯ ಶಿಕ್ಷಣವನ್ನು ಪೋಷಕರು ನೀಡಿದ್ದರು. ಆದರೆ ಶಿಕ್ಷಣ ಸಂಸ್ಕಾರ ಕಲಿಸುವುದಿಲ್ಲ ಎಂಬುದು ನಿಜವಾಗಿದೆ., ಇಬ್ಬರು ಗಂಡು ಮಕ್ಕಳಿಗೂ ತುಂಬಾ ಚೆನ್ನಾಗಿ ಮದುವೆಯನ್ನು ಮಾಡಿದ್ದರು. ಆದರೆ ವಯಸ್ಸಾದ ಕಾಲದಲ್ಲಿ ಮಕ್ಕಳ ನಿರ್ಲಕ್ಷ್ಯ ಅವರನ್ನು ಈ ರೀತಿಯ ಕೆಟ್ಟ ನಿರ್ಧಾರ ತೆಗೆದುಕೊಳ್ಳುವಂತೆ ಮಾಡಿದೆ.

ಕೆಲವು ದಿನಗಳ ಹಿಂದಷ್ಟೇ ಅವರು ಕೊಡಗಿನ ವಿರಾಜಪೇಟೆಯ ವೃದ್ಧಾಶ್ರಮಕ್ಕೆ ಸೇರಿದ್ದರು. ಆದರೆ ಶನಿವಾರ ರಾತ್ರಿ ಅಲ್ಲಿಂದ ಹೊರಟು ಬಂದ ದಂಪತಿ ಹಾಸನಕ್ಕೆ ಬಂದು ಅಲ್ಲಿ ಕರಿಗೌಡ ಕಾಲೋನಿಯಲ್ಲಿ ಸಾವಿಗೆ ಶರಣಾಗಿದ್ದಾರೆ. ಘಟನೆಯ ಬಳಿಕ ಅವರ ಗಂಡು ಮಕ್ಕಳು ಶವವನ್ನು ನಿರಾಕರಿಸಲು ಯತ್ನಿಸಿದ್ದಾರೆ ಎಂದು ವರದಿಯಾಗಿದೆ. ಆದರೆ ನಂತರ ಪೊಲೀಸರು ತೀವ್ರ ತರಾಟೆಗೆ ತೆಗೆದುಕೊಂಡ ನಂತರ ಮೃತದೇಹಗಳನ್ನು ಸ್ವೀಕರಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ವಯಸ್ಸು 90 ಆದ್ರೂ ತರುಣರ ನಾಚಿಸುವಂತೆ ಬಿಂದಾಸ್ ಆಗಿ ಕಾರು ಡ್ರೈವ್ ಮಾಡ್ತಾರೆ ಈ ಅಜ್ಜಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಜೀಂ ಪ್ರೇಮ್‌ಜಿ ವಿವಿಯಲ್ಲಿ ದೇಶವಿರೋಧಿ ಚಟುವಟಿಕೆ ಆರೋಪ, ಪ್ರತಿಭಟಿಸಿದ ಎಬಿವಿಪಿ ವಿದ್ಯಾರ್ಥಿಗಳು ಅರೆಸ್ಟ್
ಪುತ್ತೂರು ಬಿಜೆಪಿ ನಾಯಕನ ಪುತ್ರನಿಂದ ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ: ಆತ್ಮ*ಹತ್ಯೆಗೆ ಯತ್ನಿಸಿದ ಮಗುವಿನ ತಾಯಿ