
ನವದೆಹಲಿ(ನ.27): ಅಂತಾರಾಜ್ಯ ಪೆನ್ನಾರ್ ನದಿ ವಿವಾದಕ್ಕೆ ಸಂಬಂಧಿಸಿ ತಮಿಳುನಾಡು ಮತ್ತು ಕರ್ನಾಟಕ ಸರ್ಕಾರಗಳ ನಡುವಿನ ಮಧ್ಯಸ್ಥಿಕೆ ಯಶಸ್ವಿಯಾಗಿಲ್ಲ ಎಂದು ಸಂಧಾನ ಸಮಿತಿಯು ಮಂಗಳವಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ. ಈ ಮೂಲಕ ತಮಿಳುನಾಡಿನ ಬಿಗಿಪಟ್ಟಿನಿಂದಾಗಿ ಪೆನ್ನಾರ್ ನದಿ ವಿವಾದದ ವಿಚಾರ ಸಂಬಂಧ ನ್ಯಾಯಾಧಿಕರಣ ರಚನೆಯಾಗುವ ಸಾಧ್ಯತೆ ಇದೆ. ಈ ಕುರಿತು ವಿಚಾರಣೆ ನಡೆಸಿದ ನ್ಯಾ. ಋಷಿಕೇಷ್ ರಾಯ್ ಮತ್ತು ನ್ಯಾ.ಎಸ್.ವಿ.ಎನ್.ಭಟ್ಟಿ ಅವರಿದ್ದ ಪೀಠವು ಎರಡು ವಾರದಲ್ಲಿ ವರದಿ ಸಲ್ಲಿಸುವಂತೆ ಸಂಧಾನ ಸಮಿತಿಗೆ ಸೂಚಿಸಿದೆ.
ಪೆನ್ನಿಯಾರ್ ನದಿ ನೀರು ಹಂಚಿಕೆ ವಿವಾದ ಮತ್ತು ಚೆಕ್ ಡ್ಯಾಮ್ ನಿರ್ಮಾಣದ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರವು ಆಕ್ಷೇಪ ವೆತ್ತಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಆ ವೇಳೆ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ಸರ್ಕಾರವು ತಮಿಳುನಾಡಿನಲ್ಲಿ ರಚನೆಯಾದ ಹೊಸ ಸರ್ಕಾರದ ಜತೆಗೆ ಮಾತುಕತೆ ಮೂಲಕ ವಿವಾದ ಇತ್ಯರ್ಥ ಪಡಿಸುವ ಇಂಗಿತ ವ್ಯಕ್ತಪಡಿಸಿತ್ತು. ಆದರೆ, ಇದೀಗ ಸಂಧಾನ ಸಮಿತಿಯು ವಿಫಲವಾಗಿರುವ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಧಿಕರಣ ರಚನೆಯಾಗುವ ಸಾಧ್ಯತೆ ಹೆಚ್ಚಾಗಿದೆ.
Kodagu: ಕಾವೇರಿ ನ್ಯಾಯ ಸಮ್ಮತ ತೀರ್ಪಿಗಾಗಿ ನೂತನ ಕಾನೂನು ಹೋರಾಟ ಸಮಿತಿ ಅಸ್ಥಿತ್ವಕ್ಕೆ!
ಮೇಕೆದಾಟು ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಸಿದ್ಧ: ಸಚಿವ ಡಿ.ಕೆ. ಶಿವಕುಮಾರ್
ಕನಕಪುರ: ಕಾವೇರಿ ನದಿ ತೀರದ ಜನರ ಬದುಕು ಹಸನಗೊಳಿಸಲು ಹಾಗೂ ಬೆಂಗಳೂರು ಜನತೆಗೆ ಕುಡಿಯುವ ನೀರು ಪೂರೈಸಲು ಅನುಕೂಲವಾಗುವಂತೆ ಮೇಕೆದಾಟು ಯೋಜನೆ ನಮ್ಮ ರಾಜ್ಯಕ್ಕೆ ಅನಿವಾರ್ಯವಾಗಿದ್ದು ನ್ಯಾಯಾಲಯದಲ್ಲಿ ಹೋರಾಟ ಮಾಡಿಯಾದರೂ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದರು.
ತಾಲೂಕಿನ ಹಾರೋಬೆಲೆ ಹತ್ತಿರದ ಮೂಲೆಗುಂದಿಯಲ್ಲಿ ಕಾವೇರಿ ನೀರಾವರಿ ನಿಗಮ ನಿಯಮಿತದಿಂದ ಅರ್ಕಾವತಿ ಜಲಾಶಯ ಬಲದಂಡೆ ಏತ ನೀರಾವರಿ ಯೋಜನೆಯ ಪುನಃಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿ ಮಾತನಾಡಿದ ಅವರು, ಮೇಕೆದಾಟು ಯೋಜನೆ ರಾಜ್ಯಕ್ಕೆ ಅಗತ್ಯವಾಗಿದ್ದು ನ್ಯಾಯಾಲಯದಲ್ಲಿ ಹೋರಾಟ ಮಾಡಿ ಯಾದರೂ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಸರ್ಕಾರ ಸಿದ್ಧವಿದೆ ಈ ಯೋಜನೆ ಅನುಷ್ಠಾನದಿಂದ ಜಿಲ್ಲೆ ಯ 550 ರಿಂದ 600 ಎಕರೆಯಷ್ಟು ಜಮೀನು ಮುಳುಗಡೆ ಆಗಬಹುದು ಅವರಿಗೆ ಪರ್ಯಾಯವಾಗಿ ಜಮೀನು ನೀಡಲಾಗುವುದು ಅಥವಾ ಕಳೆದುಕೊಳ್ಳುವ ಜಮೀನಿಗೆ ಉತ್ತಮ ಬೆಲೆ ನೀಡಲಾಗುವುದು ಎಂದು ಹೇಳಿದ್ದರು.
ಈ ಯೋಜನೆ ಅನುಷ್ಠಾನದಿಂದ ಕೆಲ ಅರಣ್ಯ ಪ್ರದೇಶವು ಮುಳುಗಡೆಯಾಗಬಹುದು, ಮಡಿವಾಳ, ಸಂಗಮದ ಗ್ರಾಮಗಳು ಮುಳುಗಡೆ ಆಗಿತೊಂದರೆ ಆಗಬಹುದಾಗಿದೆ ಆದರೂ ರಾಜ್ಯದ ಹಿತ ದೃಷ್ಟಿಯಿಂದ ಈ ಯೋಜನೆ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದರು.
ದಕ್ಷಿಣ ಗಂಗೆ ಕಾವೇರಿ ನದಿ ಸ್ವಚ್ಛತೆ, ಉಳಿವಿಗೆ ಅಖಿಲ ಭಾರತ ಸನ್ಯಾಸಿಗಳ ಪಣ!
ಅರ್ಕಾವತಿ ಜಲಾಶಯ ಬಲದಂಡೆ ಏತ ನೀರಾವರಿ ಯೋಜನೆಯ ಆರಂಭದಿಂದಲೂ ತಾವು ಸಾಕಷ್ಟು ಶ್ರಮಿಸಿರುವುದಾಗಿ ತಿಳಿಸಿದ ಉಪಮುಖ್ಯಮಂತ್ರಿಗಳು, ಈ ಯೋಜನೆಯ ಅನುಷ್ಠಾನದಲ್ಲಿ ಭೂಮಿ ಕಳೆದು ಕೊಂಡವರಿಗೆ ಉತ್ತಮ ಪರಿಹಾರ ಕಲ್ಪಿಸಿಕೊಡಲು ಅಂದಿನ ಮುಖ್ಯಮಂತ್ರಿಗಳಾಗಿದ್ದ ಎಸ್.ಎಂ. ಕೃಷ್ಣ ಅವರು ಪ್ರಯತ್ನಿಸಿದ್ದರು, ಈ ಯೋಜನೆಯ ಲಾಭ ಪಡೆ ಯುತ್ತಿರುವವರು ತಮ್ಮ ಬದುಕನ್ನು ಹಸನು ಮಾಡಿಕೊಳ್ಳ ಬೇಕು ಈ ಯೋಜನೆಯಿಂದ ಅಂತರ್ಜಲ ಮಟ್ಟ ಹೆಚ್ಚಲಿದ್ದು,ಕೃಷಿ, ಹೈನುಗಾರಿಕೆಗೆ ಉಪಯುಕ್ತವಾಗಿದೆ ಎಂದು ಹೇಳಿದ್ದರು.
ಶಿಂಷಾದಿಂದ ಸಾತನೂರು ಹೋಬಳಿ ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆ, ಹರಿಹರದ ಕೆಂಪೇಗೌಡನ ದೊಡ್ಡಿ ಕೆರೆ, ದೊಡ್ಡಾಲಳ್ಳಿಗೆ ಕೆರೆಗೂ ಕೂಡ ನೀರು ತುಂಬಿಸಲು ಯತ್ನಿಸಲಾಗುತ್ತಿದೆ, ಕೈಲಾಂಚ ಹೋಬಳಿ ಸೇರಿದಂತೆ ಮಾಗಡಿ, ಚನ್ನಪಟ್ಟಣ ಮಾಥೂರು ಕೆರೆಗೆ ನೀರು ತುಂಬಿಸುವ ಕೆಲಸ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ