ಯಡಿಯೂರಪ್ಪ ಸರ್ಕಾರಕ್ಕೆ ಮತ್ತೊಂದು ಸಂಕಟ: ಬಿಸಿ ತುಪ್ಪವಾದ ಮರಾಠ ನಿಗಮ ರಚನೆ

Published : Nov 26, 2020, 09:22 AM ISTUpdated : Nov 26, 2020, 09:25 AM IST
ಯಡಿಯೂರಪ್ಪ ಸರ್ಕಾರಕ್ಕೆ ಮತ್ತೊಂದು ಸಂಕಟ: ಬಿಸಿ ತುಪ್ಪವಾದ ಮರಾಠ ನಿಗಮ ರಚನೆ

ಸಾರಾಂಶ

ಸಿಎಂ ಯಡಿಯೂರಪ್ಪ ಭೇಟಿಯಾಗಲಿರುವ ನೇಕಾರ ಸಮುದಾಯದ ನಿಯೋಗ| ನೇಕಾರ ಅಭಿವೃದ್ಧಿ ನಿಗಮದ ಬಗ್ಗೆ ಸಿಎಂ ಜೊತೆ ಚರ್ಚೆ| ನೇಕಾರ ಅಭಿವೃದ್ಧಿ ನಿಗಮ ರಚನೆ ಬಗ್ಗೆ ಸಮುದಾಯದ ಸಿಎಂಗೆ ಮುಖಂಡರಿಂದ ಒತ್ತಡ| 

ಬೆಂಗಳೂರು(ನ.26): ರಾಜ್ಯ ಸರ್ಕಾರಕ್ಕೆ ನಿಗಮ ರಚನೆಯ ತಲೆ ಬಿಸಿ ಇನ್ನೂ ನಿಂತಿಲ್ಲ. ಹೌದು, ಮರಾಠಾ, ಲಿಂಗಾಯತ ವೀರಶೈವ ನಿಗಮ ರಚನೆಗೆ ಸರ್ಕಾರ ಅನುಮೋದನೆ ನೀಡಿದ ಬೆನ್ನಲ್ಲೇ ಬೇರೆ ಬೇರೆ ಸಮುದಾಯದಗಳಿಂದ ತಮ್ಮ ಸಮುದಾಯಕ್ಕೂ ನಿಗಮ ರಚನೆ ಮಾಡಿ ಎಂಬ ಒತ್ತಡ ಹೆಚ್ಚಾಗುತ್ತಿದೆ.

ಈಗಾಗಲೇ ಮರಾಠ ನಿಗಮ ರಚನೆ ಮಾಡಿದ್ದರಿಂದ ಕರ್ನಾಟಕ ಬಂದ್‌ಗೆ ಕನ್ನಡ ಪರ ಸಂಘಟನೆಗಳು ಕರೆ ಕೊಟ್ಟಿವೆ. ಇದೆಲ್ಲದರ ನಡುವೆ ನೇಕಾರ ಸಮುದಾಯದಿಂದಲೂ ತಮಗೂ ನೇಕಾರ ಅಭಿವೃದ್ಧಿ ನಿಗಮ ರಚನೆ ಮಾಡಿ ಎಂದು ಒತ್ತಡ ಹೇರುತ್ತಿವೆ. 

ಮರಾಠ ನಿಗಮ ವಿರೋಧಿಸಿ ಡಿ. 5 ರಂದು ಕರ್ನಾಟಕ ಬಂದ್

ಇಂದು ನೇಕಾರ ಸಮುದಾಯದ ಸ್ವಾಮಿಜೀಗಳು ಮತ್ತು ಜನಪ್ರತಿನಿದಿಳಿಂದ ಸಿಎಂ ಯಡಿಯೂರಪ್ಪ ಅವರನ್ನ ಭೇಟಿ ಮಾಡಿ ಮನವಿ ಸಲ್ಲಿಸಲು ಸಜ್ಜಾಗಿದ್ದಾರೆ. ನೇಕಾರ ಅಭಿವೃದ್ಧಿ ನಿಗಮದ ಬಗ್ಗೆ ಸಿಎಂ ಜೊತೆ ಚರ್ಚೆ ನಡೆಸಲು ಸಂಜೆ ಗೃಹ ಕಚೇರಿಯಲ್ಲಿ ಸಮಯ ಕೂಡ ನಿಗದಿಯಾಗಿದೆ.

ಸಂಜೆ 5.45 ಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ನೇಕಾರ ಸಮುದಾಯದ ನಿಯೋಗ ಸಿಎಂ ಯಡಿಯೂರಪ್ಪ ಅವರನ್ನ ಭೇಟಿಯಾಗಲಿದ್ದಾರೆ. ಭೇಟಿ ವೇಳೆ ನೇಕಾರ ಅಭಿವೃದ್ಧಿ ನಿಗಮ ರಚನೆ ಬಗ್ಗೆ ಸಮುದಾಯದ ಮುಖಂಡರು ಒತ್ತಡ ಹಾಕಲಿದ್ದಾರೆ ಎಂದು ಹೇಳಲಾಗುತ್ತಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

KSRTC ಪ್ರಯಾಣಿಕರಿಗೆ ಬಿಗ್ ಶಾಕ್! ಇಂಧನ ಬೆಲೆ ಏರಿಕೆ ನೆಪ, ಶೀಘ್ರ ಬಸ್‌ ದರ ಹೆಚ್ಚಳ, ಸಾರಿಗೆ ಸಚಿವ ಮಹತ್ವದ ಸುಳಿವು
80ನೇ ಸ್ವಾತಂತ್ರ್ಯ ದಿನ: 72,000 ಸರ್ಕಾರಿ ನೌಕರಿ, ಉಚಿತ ಕೋಡಿಂಗ್, AI ವಿವಿ ಘೋಷಿಸಿದ ಸಿಎಂ ಡಿ.ಕೆ.ಶಿವಕುಮಾರ್!