
ಬೆಂಗಳೂರು(ಡಿ.23): ಕೋವಿಡ್-19ರ ರೋಗ ಲಕ್ಷಣಗಳಾದ ಜ್ವರ, ಶೀತ, ಕೆಮ್ಮು, ಗಂಟಲು ಕೆರೆತ ಮತ್ತು ಉಸಿರಾಟದ ಸಮಸ್ಯೆಗಳಿರುವ ವ್ಯಕ್ತಿಗಳು ಮಾರುಕಟ್ಟೆ, ಅಂಗಡಿ, ಮಳಿಗೆಗಳಿಗೆ ಭೇಟಿ ನೀಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರೋಗ ಲಕ್ಷಣ ರಹಿತರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕೋವಿಡ್-19ರ ಎರಡನೇ ಅಲೆಯನ್ನು ತಡೆಯುವ ನಿಟ್ಟಿನಲ್ಲಿ ಮಾರುಕಟ್ಟೆ ಮತ್ತು ಅಂಗಡಿ ಮಳಿಗೆಗಳ ನಿರ್ವಹಣೆಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾರ್ಗಸೂಚಿಯೊಂದನ್ನು ಹೊರಡಿಸಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿ ಗರಿಷ್ಠ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.
ಬ್ರಿಟನ್ ವೈರಸ್ ಭೀತಿ: ಮತ್ತೆ ಲಾಕ್ಡೌನ್ ಆಗುತ್ತಾ?
ಅಂಗಡಿ ಮಳಿಗೆಗಳ ಪ್ರವೇಶ ದ್ವಾರದಲ್ಲೇ ಎಲ್ಲ ಉದ್ಯೋಗಿಗಳು ಮತ್ತು ಗ್ರಾಹಕರಿಗೆ ಥರ್ಮಲ್ ಸ್ಕ್ಯಾನ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಮುಖಗವಸು ಅಥವಾ ಫೇಸ್ ಕವರ್ ಧರಿಸಿರಲೇಬೇಕು. ಆರು ಅಡಿ ಅಂತರದ ಪಾಲನೆ ಆಗುವಂತೆ ವ್ಯವಸ್ಥೆ ಮಾಡಿಕೊಳ್ಳಬೇಕು. ಆನ್ಲೈನ್ ವ್ಯವಹಾರಕ್ಕೆ ಉತ್ತೇಜನ ನೀಡಬೇಕು. ಪಾಳಿಯಂತೆ ಅಂಗಡಿ ಮುಂಗಟ್ಟು ತೆರೆಯುವುದು ಮತ್ತು ಅಂಗಡಿಗಳು ತೆರೆಯುವ ಅವಧಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಲೋಚಿಸಬೇಕು. ಅನಧಿಕೃತ ಪಾರ್ಕಿಂಗ್ಗೆ ಅವಕಾಶ ನೀಡಬಾರದು. ಜನ ಸಂದಣಿಯಾಗದಂತೆ ನೋಡಿಕೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ