ಪ್ರಾಣಿ ಪ್ರಿಯರಿಗೀಗ ಹೊಸ ಡೆಸ್ಟಿನೇಷನ್‌! ಕಲಬುರಗಿಯಲ್ಲಿ ಅತ್ಯಾಕರ್ಷಕ ಮೃಗಾಲಯ ಲೋಕಾರ್ಪಣೆ, ಎಷ್ಟು ಬಗೆಯ ಪ್ರಾಣಿ-ಪಕ್ಷಿಗಳಿವೆ ಗೊತ್ತಾ?

Kannadaprabha News   | Kannada Prabha
Published : May 19, 2026, 07:53 AM IST
New Destination for Animal Lovers Spectacular Zoo Inaugurated in Kalaburagi Check Details

ಸಾರಾಂಶ

ಕಲಬುರಗಿಯ ಚಿತ್ತಾಪುರದಲ್ಲಿ ಮಾಡಬೂಳದಲ್ಲಿ 35 ಕೋಟಿ ರೂ. ವೆಚ್ಚದ 43 ಎಕರೆ ವಿಸ್ತೀರ್ಣದ ನೂತನ ಮೃಗಾಲಯ ಲೋಕಾರ್ಪಣೆಗೊಂಡಿದೆ. ಇದು ಕಲ್ಯಾಣ ಕರ್ನಾಟಕದ ಎರಡನೇ, ರಾಜ್ಯದ ಒಂಬತ್ತನೇ ಮೃಗಾಲಯವಾಗಿದೆ. ಇದರ ಪ್ರಮುಖ ಉದ್ದೇಶ ವನ್ಯಜೀವಿ ಸಂರಕ್ಷಣೆ, ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ಹಾಗೂ ಪ್ರವಾಸೋದ್ಯಮ ಉತ್ತೇಜನ

ಕಲಬುರಗಿ (ಮೇ.19) ಪರಿಸರ ಸಮತೋಲನ ಕಾಪಾಡುವ ನಿಟ್ಟಿನಲ್ಲಿ ಪ್ರಾಣಿ, ಪಕ್ಷಿ, ಸಸ್ಯ, ಕೀಟ ಪ್ರಬೇಧಗಳ ಸಂರಕ್ಷಣೆ ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಕಲಬುರಗಿ ಅತ್ಯಾಕರ್ಷಕ ಮೃಗಾಲಯವು ವನ್ಯಜೀವಿಗಳ ಮೇಲಿನ ಕಾಳಜಿ ಹೆಚ್ಚಿಸುವುದರ ಜೊತೆಗೆ ಪ್ರದೇಶದ ಪರಿಸರ ಪ್ರೇಮಿ, ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಹಾಗೂ ಪ್ರವಾಸಿ ತಾಣವಾಗಿ ಇದು ರೂಪಗೊಳ್ಳಲಿದೆ ಎಂದು ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.

ಜಿಲ್ಲಾಡಳಿತ, ಅರಣ್ಯ ಇಲಾಖೆ, ಕೆ.ಕೆ.ಆರ್.ಡಿ.ಬಿ. ಮಂಡಳಿ ಹಾಗೂ ಮೂರ್ತಿ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಸೋಮವಾರ ಚಿತ್ತಾಪುರ ತಾಲೂಕಿನ ಮಾಡಬೂಳ ಗ್ರಾಮದಲ್ಲಿ ಸುಮಾರು 43 ಎಕರೆ ಪ್ರದೇಶದ ವಿಸ್ತೀರ್ಣದಲ್ಲಿ 35 ಕೋಟಿ ರು. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿರುವ ಕಲಬುರಗಿ ಮೃಗಾಲಯವನ್ನು

ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ನಮ್ಮ‌ ಸರ್ಕಾರ ಬಂದ ಮೇಲೆ ನೆನೆಗುದ್ದಿಗೆ ಬಿದಿದ್ದ ಈ ಕಾರ್ಯಕ್ಕೆ ಸಚಿವ ಪ್ರಿಯಾಂಕ್‌ ಖರ್ಗೆ ಅವರು ವಿಶೇಷ ಆಸಕ್ತಿ ವಹಿಸಿ ಚುರುಕು‌ಗೊಳಿಸಿದ ಪರಿಣಾಮ‌ ಇಂದಿಲ್ಲಿ ಕಲ್ಯಾಣ ಕರ್ನಾಟಕ ಭಾಗದ ಹಂಪಿ ಹೊರತುಪಡಿಸಿದರೆ ಎರಡನೇ ಮೃಗಾಲಯ ಪ್ರದೇಶಕ್ಕೆ ಲೋಕಾರ್ಪಣೆ ಮಾಡಲಾಗಿದ್ದು, ಎಲ್ಲಾ ವಯೋಮಾನದವರಿಗೆ ಜನಾಕರ್ಷಣೆಯಾಗಲಿದೆ ಎಂದರು.

ಕೆ.ಕೆ.ಆರ್.ಡಿ.ಬಿ. ಮಂಡಳಿ‌ಯಿಂದ 29 ಕೋಟಿ ರು., ಮೃಗಾಲಯ ಪ್ರಾಧಿಕಾರದಿಂದ 6 ಕೋಟಿ ರು. ಹಾಗೂ ಇನ್ಫೋಸಿಸ್ ಸಂಸ್ಥೆಯ 3.20 ಕೋಟಿ ರು. ನೆರವಿನಿಂದ ಇಂದಿಲ್ಲಿ ಸುಂದರ‌ ಮೃಗಾಲಯ ಸ್ಥಾಪನೆಯಾಗಿದೆ. ಕಲಬುರಗಿ ಮೃಗಾಲಯ ರಾಜ್ಯದ 9ನೇ ಮೃಗಾಲಯವಾಗಿದ್ದು, ದೇಶದಲ್ಲಿ ಮೃಗಾಲಯ ಸಂಖ್ಯೆಯಲ್ಲಿ ರಾಜ್ಯ ಮುಂಚೂಣಿಯಲ್ಲಿದೆ ಎಂದ ಅವರು, 2022ರ ಪ್ರಾಣಿ‌ ಜನಗಣತಿ ಪ್ರಕಾರ ರಾಜ್ಯದಲ್ಲಿ 6,395 ಆನೆ, 563 ಹುಲಿಗಳಿವೆ ಎಂದರು.

ನೂತನ ಮೃಗಾಲಯದಲ್ಲಿ 56 ವಿವಿಧ ಪ್ರಭೇದದ ಪ್ರಾಣಿ-ಪಕ್ಷಿಗಳು ವೀಕ್ಷಣೆಗೆ ಲಭ್ಯ ಇರಲಿವೆ. ಎರಡು ಸಿಂಹಗಳನ್ನು ಬನ್ನೇರುಘಟ್ಟದಿಂದ ಈಗಾಗಲೇ ತರಲಾಗಿದೆ. ಮೊಸಳೆ, ನರಿ, ಇತ್ಯಾದಿ ಪ್ರಾಣಿಗಳು ನೋಡಲು ಸಿಗುತ್ತಿವೆ. ಮುಂಬರುವ ದಿನಗಳಲ್ಲಿ ಬೇರೆ ಬೇರೆ ಪ್ರಭೇದ ಪ್ರಾಣಿ, ಪಕ್ಷಿಗಳನ್ನು ತರಿಸಲಾಗುವುದು ಎಂದರು.

ಕ.ಕ ಭಾಗದಲ್ಲಿ ಹಸಿರು ಹೊದಿಕೆ ಹೆಚ್ಚಿಸಲು ಕ್ರಮ: ಕಲ್ಯಾಣ ಕರ್ನಾಟಕ ಭಾಗದ ಲಭ್ಯ ಹಸಿರು ಹೊದಿಕೆ ಕೊರತೆ ಇದೆ. ಕಲಬುರಗಿ, ಬೀದರ್‌, ಯಾದಗಿರಿ, ರಾಯಚೂರು ಹೀಗೆ ಜಿಲ್ಲೆಗಳಲ್ಲಿ‌ ಶೇ.5ಕ್ಕಿಂತ ಕಡಿಮೆ ಅರಣ್ಯ ಪ್ರದೇಶ ಹೊಂದಿದೆ. ಈ ಬಗ್ಗೆ ಕೆ‌.ಕೆ.ಆರ್.ಡಿ.ಬಿ ಸಭೆಯಲ್ಲಿ ಚರ್ಚಿಸಿ ಅಗತ್ಯ ಅನುದಾನ ಬಿಡುಗಡೆಗೆ ಕ್ರಮವಹಿಸಲಾಗುವುದು ಎಂದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಳೆದ‌ ಮೂರು ವರ್ಷದಲ್ಲಿ‌ ಕಲ್ಯಾಣ ಕರ್ನಾಟಕ ಭಾಗದಲ್ಲಿ 11 ಲಕ್ಷ ಸಸಿ ನೆಡಲಾಗಿದೆ. ಅವುಗಳನ್ನು ಸುಮಾರು‌ ಶೇ.80 ನೆಟ್ಟ ಸಸಿಗಳು ಬದುಕುಳಿದಿವೆ ಎಂದರು.

ಅರಣ್ಯ‌ಇಲಾಖೆಯಲ್ಲಿ ಪಶುವೈದ್ಯಕೀಯ ಸಿಬ್ಬಂದಿ‌ ಹೆಚ್ಚಿಸಲು ಸಿಎಂ ಅವರು ಅರಣ್ಯ ಇಲಾಖೆಗೆ ಅನುಮತಿ‌ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಅರಣ್ಯ ಇಲಾಖೆಗೆ ಅಗತ್ಯವಿರುವ ಸಿಬ್ಬಂದಿ ನೇಮಕಾತಿಗೆ ಅಗತ್ಯ ಕ್ರಮವಹಿಸಲಾಗುವುದು ಎಂದು‌ ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಅರಣ್ಯ ಭೂಮಿ ಒತ್ತುವರಿ ತೆರವಿಗೆ ಕ್ರಮ: ರಾಜ್ಯದ ಅರಣ್ಯ ಭೂಮಿ ತೆರವಿಗೆ ಕ್ರಮವಹಿಸಲಾಗಿದ್ದು, ರಾಜ್ಯದಲ್ಲಿ ಈಗಾಗಲೇ 10,000 ಕೋಟಿ ರು. ಮೌಲ್ಯದ ಬೆಂಗಳೂರು ಒಂದರಲ್ಲೇ 250 ಎಕರೆ ಅರಣ್ಯ ಭೂಮಿ ತೆರವು ಮಾಡಲಾಗಿದೆ. ಸುಮಾರು 1 ಕೋಟಿ ಎಕರೆ ಅರಣ್ಯ, ಕಂದಾಯ ಒತ್ತುವರಿ ಜಮೀನು ತೆರವು ಹಂತ ಹಂತವಾಗಿ ನಡೆಯಲಿದೆ ಎಂದರು.ಕಾರ್ಯಕ್ರಮದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ, ಸಚಿವ ಡಾ. ಶರಣಪ್ರಕಾಶ ಪಾಟೀಲ, ಕರ್ನಾಟಕ‌ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಕೆ.ರಂಗಸ್ವಾಮಿ, ಶಾಸಕರಾದ ಅಲ್ಲಮಪ್ರಭು ಪಾಟೀಲ, ಎಂ.ವೈ.ಪಾಟೀಲ, ವಿಪ ಸದಸ್ಯ ಜಗದೇವ ಗುತ್ತೇದಾರ, ಬಿ.ಜಿ.ಪಾಟೀಲ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ, ಕೆ.ಕೆ.ಆರ್.ಟಿ.ಸಿ. ಅಧ್ಯಕ್ಷ‌ ಅರುಣಕುಮಾರ ಪಾಟೀಲ, ಕಲಬುರಗಿ ಕಾಡಾ ಅಧ್ಯಕ್ಷ ಡಾ.ಎಂ.ಎ.ರಶೀದ್, ಕರ್ನಾಟಕ‌ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಶರಣಕುಮಾರ ಮೋದಿ, ಅರಣ್ಯ ಪಡೆ ಮುಖ್ಯಸ್ಥರು ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಮೀನಾಕ್ಷಿ ನೇಗಿ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಕುಮಾರ ಪುಷ್ಕರ್, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರವಿಶಂಕರ‌ ಎಸ್. ಎಸ್., ಕಲಬುರಗಿ ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ, ಜಿಲ್ಲಾಧಿಕಾರಿ ಇಕ್ರಮ್ ಶರೀಫ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ, ಎಸ್.ಪಿ. ಅಡ್ಡೂರು ಶ್ರೀನುವಾಸುಲು, ಜಿಪಂ ಸಿ.ಇ.ಓ ಭಂವರ್ ಸಿಂಗ್ ಮೀನಾ, ಕಲಬುರಗಿ‌ ಮಹಾನಗರ ಪಾಲಿಕೆ ಡಿ.ಸಿ.ಎಫ್ ಸುಮಿತ್ ಪಾಟೀಲ, ಇನ್ಫೋಸಿಸ್ ಸಂಸ್ಥೆಯ ಪ್ರತಿನಿಧಿ ಪ್ರಿಯಾ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಬಸವರಾಜ‌ ಎಸ್. ಡಾಂಗೆ, ಸುನೀಲಕುಮಾರ್, ವಲಯ ಅರಣ್ಯಾಧಿಕಾರಿಗಳಾದ ನಾಗೇಶ, ವಿಜಯ ಕುಮಾರ ಸೇರಿದಂತೆ ಅರಣ್ಯ ಇಲಾಖೆಯ ಅನೇಕ ಅಧಿಕಾರಿ-ಸಿಬ್ಬಂದಿಗಳಿದ್ದರು.

ಬೆಳಿಗ್ಗೆ 9.30ರಿಂದ ಸಂಜೆ 5.30ರವರೆಗೆ ವೀಕ್ಷಣೆಗೆ ಲಭ್ಯ

ಮೃಗಾಲಯವು ಬೆಳಿಗ್ಗೆ 9.30ರಿಂದ ಸಂಜೆ 5.30ರವರೆಗೆ ತೆರೆಯಲಿದ್ದು, ಪ್ರಾಣಿ-ಪಕ್ಷಿಗಳ ವೀಕ್ಷಣೆಗೆ ಲಭ್ಯವಾಗಿರಲಿದೆ. ಪ್ರತಿ ಮಂಗಳವಾರ ರಜೆ ಇರಲಿದೆ. 12 ವರ್ಷ ಮೇಲ್ಪಟ್ಟವರಿಗೆ 75 ರು., 12 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ 40 ರು. ಹಾಗೂ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ 25 ರು. ಟಿಕೆಟ್ ದರ ನಿಗದಿ ಮಾಡಲಾಗಿದೆ. ಮೃಗಾಲಯದ ಟಿಕೆಟ್ ಕೌಂಟರ್‌ನಲ್ಲಿಯೆ ಟಿಕೆಟ್ ಪಡೆದು ವೀಕ್ಷಣೆ ಮಾಡಬಹುದಾಗಿದೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Karnataka News Live ರಾಜ್ಯ ಸರ್ಕಾರದ ಸಾಧನಾ ಸಮಾವೇಶ; ಗಿನ್ನೆಸ್ ದಾಖಲೆ ಸೇರೋದು ಫಿಕ್ಸ್!
ಅಂಗವಿಕಲರ ಬಸ್‌ ಪಾಸ್ ದುರುಪಯೋಗ; ಮಂಡ್ಯದ ಸರ್ಕಾರಿ ಶಿಕ್ಷಕಿಗೆ 1 ವರ್ಷ ಜೈಲು ಶಿಕ್ಷೆ!