ಬೆಂಗಳೂರಿಂದ ಪುಣೆಗೆ ಹೊಸ ಹೈಸ್ಪೀಡ್‌ ರೈಲು ಘೋಷಣೆ?

Kannadaprabha News   | Kannada Prabha
Published : Feb 05, 2026, 07:28 AM IST
high speed train project

ಸಾರಾಂಶ

ಮೊನ್ನೆ ತಾನೇ ಕೇಂದ್ರ ಬಜೆಟ್‌ನಲ್ಲಿ ದೇಶದಲ್ಲಿ ಒಟ್ಟು 7 ಹೈ ಸ್ಪೀಡ್ ರೈಲು ಕಾರಿಡಾರ್ ಘೋಷಿಸಿರುವ ಕೇಂದ್ರ ಸರ್ಕಾರದಿಂದ ಇದೀಗ ಕರ್ನಾಟಕಕ್ಕೆ ಮತ್ತೊಂದು ಹೈಸ್ಪೀಡ್ ರೈಲು ಕಾರಿಡಾರ್ ಕೊಡುಗೆಯ ಶುಭ ಸೂಚನೆ ಸಿಕ್ಕಿದೆ.

  ನವದೆಹಲಿ :  ಮೊನ್ನೆ ತಾನೇ ಕೇಂದ್ರ ಬಜೆಟ್‌ನಲ್ಲಿ ದೇಶದಲ್ಲಿ ಒಟ್ಟು 7 ಹೈ ಸ್ಪೀಡ್ ರೈಲು ಕಾರಿಡಾರ್ ಘೋಷಿಸಿರುವ ಕೇಂದ್ರ ಸರ್ಕಾರದಿಂದ ಇದೀಗ ಕರ್ನಾಟಕಕ್ಕೆ ಮತ್ತೊಂದು ಹೈಸ್ಪೀಡ್ ರೈಲು ಕಾರಿಡಾರ್ ಕೊಡುಗೆಯ ಶುಭ ಸೂಚನೆ ಸಿಕ್ಕಿದೆ.

ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಅವರ ಒತ್ತಾಸೆ ಮೇರೆಗೆ ಕರ್ನಾಟಕದಲ್ಲಿ ‘ಬೆಂಗಳೂರು ಮತ್ತು ಪುಣೆ’ ನಡುವೆ ಮತ್ತೊಂದು ಹೈ ಸ್ಪೀಡ್ ರೈಲು ಕಾರಿಡಾರ್‌ಗೆ ಚಿಂತನೆ ನಡೆದಿದ್ದು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಜೋಶಿ ಭೇಟಿ, ಮನವಿ:

ಬೆಂಗಳೂರು ಮತ್ತು ಪುಣೆ ನಡುವೆ ಹೈ ಸ್ಪೀಡ್ ರೈಲು ಕಾರಿಡಾರ್ ನಿರ್ಮಾಣಕ್ಕಾಗಿ ಬುಧವಾರ ವೈಷ್ಣವ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದು, ರೈಲ್ವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಜೋಶಿ ತಿಳಿಸಿದ್ದಾರೆ.

ಬೆಂಗಳೂರು-ಪುಣೆ ಮಧ್ಯೆ ಹೈ ಸ್ಪೀಡ್ ರೈಲು ಕಾರಿಡಾರ್

ಬೆಂಗಳೂರು-ಪುಣೆ ಮಧ್ಯೆ ಹೈ ಸ್ಪೀಡ್ ರೈಲು ಕಾರಿಡಾರ್ ನಿರ್ಮಾಣವಾದಲ್ಲಿ ಕರ್ನಾಟಕದ ಬಹುತೇಕ ಪ್ರದೇಶದ ಒಟ್ಟಾರೆ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಜೋಶಿ ಅವರು ರೈಲ್ವೆ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ಈ ರೈಲು ಕಾರಿಡಾರ್ ನಿರ್ಮಾಣದಿಂದ ಮಧ್ಯ ಕರ್ನಾಟಕ ಮತ್ತು ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಪ್ರಯೋಜನ ಆಗಲಿದೆ. ರಾಜ್ಯದ ಬೆಳಗಾವಿ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಅಲ್ಲದೇ ಪುಣೆಯಿಂದ ಕರ್ನಾಟಕದ ಆರೇಳು ಜಿಲ್ಲೆಗಳಿಗೆ ತ್ವರಿತ ಪ್ರಯಾಣ, ಸಂಪರ್ಕ ಸಾಧ್ಯವಾಗಲಿದೆ. ಹಾಗಾಗಿ ಇದೊಂದು ಹೊಸ ಹೈ ಸ್ಪೀಡ್ ರೈಲು ಕಾರಿಡಾರ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಜೋಶಿ ಅವರು ಒತ್ತಾಯಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಬಕಾರಿ ಹಗರಣ: ಸಚಿವ ರಾಜೀನಾಮೆಗೆ ಆಗ್ರಹಿಸಿ ರಾಜ್ಯಾದ್ಯಂತ ಹೋರಾಟಕ್ಕೆ ಸಜ್ಜಾದ ಬಿಜೆಪಿ!
ಮೈಕ್ರೋ ಫೈನಾನ್ಸ್‌ ಕಿರುಕುಳ: ಮೃತರ ಕುಟುಂಬಕ್ಕೆ ₹5 ಲಕ್ಷ?