
ಕಲಬರುಗಿ (ಏ.11): ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮರಳು ದಂಧೆ ನಡೆಯುತ್ತಿದ್ದು ಇದಕ್ಕೆಲ್ಲಾ ಕಡಿವಾಣ ಹಾಕುವ ನಿಟ್ಟಿನಲ್ಲಿ ಏಪ್ರಿಲ್ 30 ರೊಳಗೆ ಹೊಸ ಮರಳು ನೀತಿ ಜಾರಿ ಮಾಡಲಾಗುತ್ತಿದೆ.
ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿ ಮಾಡುತ್ತಿರುವುದಾಗಿ ಕಲಬುರಗಿಯಲ್ಲಿಂದು ಗಣಿ ಸಚಿವ ಮುರಗೇಶ ನಿರಾಣಿ ತಿಳಿಸಿದ್ದಾರೆ.
ಈ ಮರಳು ಪೂರೈಕೆ ಮಾಡುವವರಿಗೆ ಸಚಿವ ನಿರಾಣಿ ಖಡಕ್ ಎಚ್ಚರಿಕೆ ..
ಫ್ರೀ ಸ್ಯಾಂಡ್ ಪಾಲಿಸಿ ಇದೇ 30 ರಿಂದ ರಾಜ್ಯಾದ್ಯಂತ ಜಾರಿ ಮಾಡಲಾಗುತ್ತದೆ. 10 ಲಕ್ಷ ರು. ಒಳಗಿನ ಮನೆ ನಿರ್ಮಾಣಕ್ಕೆ 100 ರೂಪಾಯಿಗೆ ಒಂದು ಟನ್ ಮರಳು ನೀಡಲಾಗುತ್ತದೆ.
ರಾಜ್ಯಲದಲ್ಲಿ ನಡೆಯುತ್ತಿರುವ ಮರಳು ಅಕ್ರಮ ತಡೆಗಟ್ಟುವ ಉದ್ದೇಶದಿಂದ ನೂತನ ಮರಳು ನೀತಿ ಜಾರಿ ಮಾಡಲಾಗುತ್ತದೆ ಎಂದು ಸಚಿವ ಮುರಗೇಶ ನಿರಾಣಿ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ