ಗ್ರಾಪಂ ಚುನಾವಣೆ ನಂತರ ಹೊಸ ರೇಶನ್‌ ಕಾರ್ಡ್‌

Kannadaprabha News   | Asianet News
Published : Dec 09, 2020, 07:46 AM IST
ಗ್ರಾಪಂ ಚುನಾವಣೆ ನಂತರ ಹೊಸ ರೇಶನ್‌ ಕಾರ್ಡ್‌

ಸಾರಾಂಶ

ಗ್ರಾಮ ಪಂಚಾಯತ್ ಚುನಾವಣೆ ಬಳಿಕ ಹೊಸ ರೇಶನ್ ಕಾರ್ಡ್ ವಿತರಣೆ ಮಾಡುವ ಬಗ್ಗೆ ಸಚಿವರು ಮಾಹಿತಿ ನೀಡಿದ್ದಾರೆ

ಬೆಂಗಳೂರು (ಡಿ.09): ಗ್ರಾಮ ಪಂಚಾಯತ್‌ ಚುನಾವಣೆ ಮುಗಿದ ಬಳಿಕ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲು ಕ್ರಮ ಕೈಗೊಳ್ಳುವುದಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಗೋಪಾಲಯ್ಯ ಭರವಸೆ ನೀಡಿದರು.

ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯರಾದ ಧರ್ಮಸೇನ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೋವಿಡ್‌ ಹಿನ್ನೆಲೆಯಲ್ಲಿ ಕಳೆದ ವರ್ಷ ಸಲ್ಲಿಸಲಾಗಿದ್ದ 1.88 ಲಕ್ಷ ಅರ್ಜಿಗಳು ವಿಲೇವಾರಿಗೆ ಬಾಕಿ ಉಳಿದಿವೆ. ಪ್ರತಿ ಮನೆಗಳಿಗೆ ಹೋಗಿ ಅಧಿಕಾರಿಗಳು ಪರಿಶೀಲನೆ ನಡೆಸಬೇಕಿದೆ. ಹೀಗಾಗಿ ತಾತ್ಕಾಲಿಕವಾಗಿ ತಡೆಹಿಡಿಯಲಾಗಿತ್ತು. ಗ್ರಾಮ ಪಂಚಾಯತ್‌ ಚುನಾವಣೆ ಮುಗಿದ ಬಳಿಕ ಬಾಕಿ ಉಳಿದ ಅರ್ಜಿ ವಿಲೇವಾರಿ ಮಾಡಲಾಗುವುದು ಎಂದು ಹೇಳಿದರು.

ಹೊಸ ರೇಶನ್‌ ಕಾರ್ಡ್‌ ವಿತರಣೆ ಮತ್ತೆ ಶುರು ...

ಇದೇ ವೇಳೆ ಕಾಂತರಾಜು ಅವುರ, ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸುವ ಮೂಲಕ ಹೊಸ ಕುಟುಂಬಗಳಿಗೆ ಪರಿತರ ಸೌಲಭ್ಯ ಸಿಗುವಂತೆ ಮಾಡಬೇಕು ಎಂದು ಮನವಿ ಮಾಡಿದರು. ಗ್ರಾಮಪಂಚಾಯತಿ ಚುನಾವಣೆ ಮುಗಿದ ಕೂಡಲೇ ಎರಡ್ಮೂರು ತಿಂಗಳಲ್ಲಿ ಕಳೆದ ವರ್ಷ ಸಲ್ಲಿಸಲಾದ ಅರ್ಜಿಗಳನ್ನು ವಿಲೇವಾರಿ ಮಾಡುತ್ತೇವೆ. ನಂತರ ತಕ್ಷಣವೇ ಹೊಸ ಅರ್ಜಿಗಳನ್ನು ಆಹ್ವಾನಿಸಲು ಇಲಾಖೆ ಕ್ರಮಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ