
ಬೆಂಗಳೂರು(ಡಿ.22): ಕಳೆದೊಂದು ವರ್ಷದಿಂದ ಇಡೀ ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೋನಾ ವೈರಸ್ ಅಬ್ಬರ ಕಡಿಮೆಯಾಗುವ ಹಂತದಲ್ಲಿದೆ ಎನ್ನುವಾಗಲೇ ಇದರ ಹೊಸ ರೂಪಾಂತರ ಜಗತ್ತಿನ ನಿದ್ದೆಗೆಡಿಸಿದೆ. ಬ್ರಿಟನ್ನಲ್ಲಿ ಈ ಪ್ರಕರಣಗಳು ದಾಖಲಾದ ಬೆನ್ನಲ್ಲೇ ಭಾರತ ಸೇರಿ ವಿಶ್ವದ ಅನೇಕ ರಾಷ್ಟ್ರಗಳು ಅಲರ್ಟ್ ಆಗಿವೆ. ಯುಕೆಯಿಂದ ಬರುವ ವಿಮಾನಗಳನ್ನು ರದ್ದುಗೊಳಿಸಿವೆ. ಸದ್ಯ ರಾಜ್ಯದಲ್ಲೂ ಈ ಹೊಸ ವೈರಸ್ ತಡೆಯುವ ನಿಟ್ಟಿನಲ್ಲಿ ನೈಟ್ ಕರ್ಫ್ಯೂ ವಿಧಿಸಲು ಸರ್ಕಾರ ಚಿಂತನೆ ನಡೆಸಿದೆ.
"
ಹೌದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಮುಂಜಾಗರೂಕತೆ ದೃಷ್ಟಿಯಿಂದ ನೈಟ್ ಕರ್ಪ್ಯೂ ವಿಧಿಸುವ ಬಗ್ಗೆ ಮುನ್ಸೂಚನೆ ನೀಡಿದ್ದಾರೆ. ನಮ್ಮ ಸರ್ಕಾರಕ್ಕೆ ಜನರ ಆರೋಗ್ಯವೇ ಮುಖ್ಯ. ಅವರ ರಕ್ಷಣೆಗಾಗಿ ನೈಟ್ ಕರ್ಪ್ಯೂ ಜಾರಿಗೆ ತರುವ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡ್ತೀವಿ. ಕೇಂದ್ರ ಆರೋಗ್ಯ ಸಚಿವಾಲಯ ನೈಟ್ ಕರ್ಪ್ಯೂ ವಿಧಿಸುವ ಅಧಿಕಾರ ರಾಜ್ಯಗಳಿಗೆ ನೀಡಿದೆ ಎಂದಿದ್ದಾರೆ.
ಇದೇ ವೇಳೆ ಬ್ರಿಟನ್ನಿಂದ ಈಗಾಗಲೇ ಆಗಮಿಸಿದವರ ಬಗ್ಗೆಡಯೂ ಮಾಹಿತಿ ನೀಡಿರುವ ಸಚಿವರು 'ಬ್ರಿಟನ್ ನಿಂದ ಆಗಮಿಸಿರುವ 138 ಜನರ ಪತ್ತೆ ಹಚ್ಚುವ ಕಾರ್ಯ ಮುಗಿದಿದೆ. ನಿನ್ನೆ ರಾತ್ರಿಯೇ ಬಹುತೇಕ ಪ್ರಯಾಣಿಕರ ಸಂಪರ್ಕಿಸಲಾಗಿದೆ. ಅವರೆಲ್ಲರಿಗೂ ಕ್ವಾರಂಟೈನ್ ಆಗಲು ಸೂಚಿಸಿದ್ದೇವೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ