Hubballi: ಹೊಟ್ಟೆ ಮೇಲೆ ಬೆಳೆಯದ ಚರ್ಮ, ಕರುಳು-ಕಿಡ್ನಿ ಹೊರಬಂದು ನವಜಾತ ಶಿಶು ಸಾವು!

Published : Dec 30, 2025, 03:43 PM IST
Child Death News

ಸಾರಾಂಶ

ಕೊಪ್ಪಳ ಜಿಲ್ಲೆಯಲ್ಲಿ ಹೊಟ್ಟೆಯ ಚರ್ಮ ಸರಿಯಾಗಿ ಬೆಳೆಯದ ಕಾರಣ ಕರುಳು-ಕಿಡ್ನಿ ಹೊರಬಂದ ಸ್ಥಿತಿಯಲ್ಲಿ ಜನಿಸಿದ ನವಜಾತ ಶಿಶುವನ್ನು, ಜೀರೋ ಟ್ರಾಫಿಕ್ ಮೂಲಕ ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮಗು ಸೋಮವಾರ ಮೃತಪಟ್ಟಿದೆ.

ಹುಬ್ಬಳ್ಳಿ (ಡಿ.30): ಹೊಟ್ಟೆಯ ಮೇಲೆ ಚರ್ಮ ಸರಿಯಾಗಿ ಬೆಳೆಯದ ಹಿನ್ನಲೆಯಲ್ಲಿ, ಕರುಳು-ಕಿಡ್ನಿ ಹೊರಬಂದು ನವಜಾತ ಶಿಶು ಸಾವು ಕಂಡಿದೆ. ಕೊಪ್ಪಳ ಜಿಲ್ಲೆಯ ಕುಕುನೂರ ತಾಲೂಕಿನ ಬೂದಗುಂಪ ಗ್ರಾಮದ ವಿಜಯಲಕ್ಷ್ಮಿ ಹಾಗೂ ಗುತ್ತೂರಿನ ಮಲ್ಲಪ್ಪ ಎನ್ನುವವರ ಮಗುವಿನ ಹೊಟ್ಟೆಯ ಮೇಲೆ ಚರ್ಮ ಹೊರಬರದ ಕಾರಣಕ್ಕೆ ಕರುಳು, ಕಿಡ್ನಿ ಎರಡೂ ಹೊರಬಂದಿತ್ತು. ಇದರಿಂದಾಗಿ ಮಗು ಹುಟ್ಟಿದ ತಕ್ಷಣವೇ ಜೀರೋ ಟ್ರಾಫಿಕ್‌ನಲ್ಲಿ ಶಿಶುವನ್ನು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಸೋಮವಾರ ಕಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವು ಕಂಡಿದೆ. ಡಿಸೆಂಬರ್‌ 28 ರಂದು ಕೊಪ್ಪಳದಿಂದ ಜೀರೋ ಟ್ರಾಫಿಕ್‌ನಲ್ಲಿ ಹುಬ್ಬಳ್ಳಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮಗು ಸಾವು ಕಂಡಿದೆ.

ಕೊಪ್ಪಳದಲ್ಲಿ ಜನಿಸಿದ್ದ ಮಗು

ಕೊಪ್ಪಳದ ಕುಕನೂರ ತಾಲೂಕಾ ಆಸ್ಪತ್ರೆಯಲ್ಲಿ ಡಿಸೆಂಬರ್‌ 27ರ ರಾತ್ರಿ 11.30ಕ್ಕೆ ವಿಜಯಲಕ್ಷ್ಮಿ ಅವರಿಗೆ ಹೆರಿಗೆ ಆಗಿತ್ತು. ಡೆಲಿವರಿ ಆದ ಬೆನ್ನಲ್ಲಿಯೇ ಮಗುವಿನ ಕರುಳು, ಕಿಡ್ನಿ ಹೊರಬಂದಿತ್ತು. ತಕ್ಷಣವೇ ಮಗುವಿಗೆ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.

ಡಿ.28ರ ಬೆಳಗಿನ ಜಾವ 10 ಗಂಟೆಗೆ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಜೀರೋ ಟ್ರಾಫಿಕ್‌ನಲ್ಲಿ ಕರೆತರಲಾಗಿತ್ತು. ಕಿಮ್ಸ್ ನಲ್ಲಿ ಚಿಕಿತ್ಸೆ ನೀಡಿದರು ಸ್ಪಂದಿಸಿದೆ ನವಜಾತ ಶಿಶು ಸಾವು ಕಂಡಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೋಗಿಲು ಕ್ರಾಸ್‌ನಲ್ಲಿ ಮನೆ ಕಳೆದುಕೊಂಡವರ ಪೈಕಿ 20 ಮಂದಿ ಮಾತ್ರ ಹೊರಗಿನವರು: ಜಮೀರ್‌ ಅಹ್ಮದ್‌
ರಾಜ್ಯದ ಜನರಿಗೆ ಹೊಸ ವರ್ಷಕ್ಕೆ ಪವರ್‌ ಶಾಕ್‌, 'Top Up' ಹೆಸರಲ್ಲಿ ಟೋಪಿ ರೆಡಿಮಾಡಿಕೊಂಡ KERC