ರಾಜ್ಯದಲ್ಲಿ ಇನ್ನೆರಡು ದಿನ ಮಳೆ : ಎಲ್ಲೆಲ್ಲಿ..?

Published : Nov 17, 2018, 07:25 AM IST
ರಾಜ್ಯದಲ್ಲಿ ಇನ್ನೆರಡು ದಿನ ಮಳೆ :  ಎಲ್ಲೆಲ್ಲಿ..?

ಸಾರಾಂಶ

ಗಜ ಚಂಡಮಾರುತದಿಂದ ತಮಿಳುನಾಡು ಹಾಗೂ ಕೇರಳದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇನ್ನು ಎರಡು ದಿನ  ಸಣ್ಣ ಪ್ರಮಾಣದ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.  

ಬೆಂಗಳೂರು :  ಗಜ ಚಂಡಮಾರುತದ ಪ್ರಭಾವದಿಂದ ತಮಿಳುನಾಡು ಹಾಗೂ ಕೇರಳದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇನ್ನು ಎರಡು ದಿನ ಮೋಡಕವಿದ ವಾತಾವರಣ ಹಾಗೂ ಸಣ್ಣ ಪ್ರಮಾಣದ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.

‘ಗಜ’ ಚಂಡಮಾರುತ ಗುರುವಾರ ಸಂಜೆ ತಮಿಳುನಾಡಿನ ಕರಾವಳಿ ಮೂಲಕ ಭೂ ಭಾಗವನ್ನು ಪ್ರವೇಶಿಸಿದ್ದು, ತಮಿಳುನಾಡಿನ ಚೆನ್ನೈ ಸೇರಿದಂತೆ ಕೇರಳದಲ್ಲಿ ವ್ಯಾಪಕ ಮಳೆಯಾಗುತ್ತಿದೆ. 

ಇನ್ನು ಎರಡು ದಿನಗಳ ಕಾಲ ತಮಿಳುನಾಡು ಹಾಗೂ ಕೇರಳದಲ್ಲಿ ಮಳೆ ಮುಂದುವರೆಯಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆಗಳಿವೆ. ರಾಜ್ಯದ ಮೇಲೆ ಗಜ ಚಂಡಮಾರುತದ ಪ್ರಭಾವ ಹೆಚ್ಚಾಗಿಲ್ಲ. ಹಾಗಾಗಿ, ಹೆಚ್ಚಿನ ಮಳೆ ನಿರೀಕ್ಷೆ ಇಲ್ಲ. ಇನ್ನು ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಇನ್ನು ಎರಡು ದಿನ ಮೋಡ ಕವಿದ ವಾತಾವರಣ ಉಂಟಾಗಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಹಂತ ಹಂತವಾಗಿ 1.88 ಲಕ್ಷ ಸರ್ಕಾರಿ ಹುದ್ದೆ ಭರ್ತಿ : ಸಿದ್ದರಾಮಯ್ಯ
ಯತೀಂದ್ರ ಹೇಳಿಕೆಯಿಂದ ರಾಜ್ಯದಲ್ಲಿ ಮತ್ತೆ ಸಿಎಂ ಕುರ್ಚಿ ಕಿಚ್ಚು