ರಾಜ್ಯದಲ್ಲಿ ತಗ್ಗಿದ ವರುಣನ ಅಬ್ಬರ: ಈ ಭಾಗದಲ್ಲಿ ಇನ್ನೂ 2 ದಿನ ಮಳೆ

Kannadaprabha News   | Asianet News
Published : Jul 26, 2021, 10:54 AM ISTUpdated : Jul 26, 2021, 11:06 AM IST
ರಾಜ್ಯದಲ್ಲಿ ತಗ್ಗಿದ ವರುಣನ ಅಬ್ಬರ: ಈ ಭಾಗದಲ್ಲಿ ಇನ್ನೂ 2 ದಿನ ಮಳೆ

ಸಾರಾಂಶ

* 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌ * ಮಲೆನಾಡು, ಕರಾವಳಿಯಲ್ಲಿ ಇನ್ನೂ 2 ದಿನ ಮಳೆ * ಜು.25ರಂದು ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆ 

ಬೆಂಗಳೂರು(ಜು.26): ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಅಬ್ಬರಿಸಿದ್ದ ಮಳೆ ಭಾನುವಾರ ತಗ್ಗಿದ್ದು, ಕೆಲವೆಡೆ ಮಾತ್ರ ಬಿರುಸಿನ ಮಳೆ ಸುರಿದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜು.18ರಿಂದ ಆರಂಭವಾಗಿದ್ದ ಮಳೆ ಬಹುತೇಕ ರಾಜ್ಯದೆಲ್ಲಡೆ ಧಾರಾಕಾರವಾಗಿ ಸುರಿದಿದೆ. ಹವಾಮಾನದಲ್ಲಿ ಅಷ್ಟಾಗಿ ಬದಲಾವಣೆಗಳು ಆಗದ ಹಿನ್ನೆಲೆಯಲ್ಲಿ ಜು.25ರಂದು ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ಬೆಳಗಾವಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ 10 ಸೆಂ.ಮೀ.ಗಿಂತ ಕಡಿಮೆ ಮಳೆ ದಾಖಲಾಗಿದೆ.

ಮಳೆ ಇಳಿಮುಖ, ಕೆಲವೆಡೆ ಪ್ರವಾಹ ಯಥಾಸ್ಥಿತಿ

ಮುಂದಿನ 48 ಗಂಟೆ ಮಲೆನಾಡು ಮತ್ತು ಕರಾವಳಿಯ ಏಳು ಜಿಲ್ಲೆ ಹೊರತುಪಡಿಸಿ ಉಳಿದೆಡೆ ತುಂತುರು ಮಳೆಯಾಗುವ ಸಂಭವವಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜು.27ರವರೆಗೆ ಹಾಗೂ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಜು.26ರಂದು ‘ಯೆಲ್ಲೋ ಅಲರ್ಟ್‌’ ಘೋಷಿಸಲಾಗಿದೆ.

ಭಾನುವಾರ ಬೆಳಗ್ಗೆ 8-30ಕ್ಕೆ ಕೊನೆಗೊಂಡ ಕಳೆದ 24ಗಂಟೆಯಲ್ಲಿ ಶಿವಮೊಗ್ಗದ ತೀರ್ಥಹಳ್ಳಿ, ಆಗುಂಬೆಯಲ್ಲಿ ತಲಾ 10 ಸೆಂ.ಮೀ. ಅಧಿಕ ಮಳೆ ಸುರಿದಿದೆ. ಉಳಿದಂತೆ ಉಡುಪಿಯ ಕೊಲ್ಲೂರು 8, ಬೆಳಗಾವಿ ಜಿಲ್ಲೆಯ ಲೊಂಡಾ ಮತ್ತು ಚಿಕ್ಕಮಗಳೂರಿನ ಮಡಿಕೇರಿ, ಕೊಪ್ಪದಲ್ಲಿ ತಲಾ 6, ಉತ್ತರ ಕನ್ನಡದ ಭಟ್ಕಳ, ಕದ್ರಾ, ಶಿರಾಲಿ, ದಕ್ಷಿಣ ಕನ್ನಡದ ಸುಬ್ರಹ್ಮಣ್ಯ, ಶಿವಮೊಗ್ಗದ ತಾಳಗುಪ್ಪ, ಚಿಕ್ಕಮಗಳೂರಿನ ಶೃಂಗೇರಿ, ಜಯಪುರ ಮತ್ತು ಹಾಸನದ ಸಕಲೇಶಪುರದಲ್ಲಿ ತಲಾ 5 ಸೆಂ.ಮೀ.ಮಳೆ ದಾಖಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಭಿವೃದ್ಧಿಗಾಗಿ ಬೆಳಗಾವಿ ಜಿಲ್ಲೆ ವಿಭಜನೆ ಅತ್ಯಗತ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Karnataka News Live: ಅಭಿವೃದ್ಧಿಗಾಗಿ ಬೆಳಗಾವಿ ಜಿಲ್ಲೆ ವಿಭಜನೆ ಅತ್ಯಗತ್ಯ - ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್