ದೇವದಾಸಿ ಪದ್ಧತಿ ನಿಯಂತ್ರಣ: ಕರ್ನಾಟಕಕ್ಕೆ NHRC ನೋಟಿಸ್‌

Published : Oct 15, 2022, 12:00 PM IST
ದೇವದಾಸಿ ಪದ್ಧತಿ ನಿಯಂತ್ರಣ: ಕರ್ನಾಟಕಕ್ಕೆ NHRC ನೋಟಿಸ್‌

ಸಾರಾಂಶ

ದೇವದಾಸಿ ಪದ್ಧತಿ ನಿಗ್ರಹಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ 6 ವಾರಗಳಲ್ಲಿ ವರದಿ ನೀಡಿ ಎಂದು ಸೂಚಿಸಿ ಕರ್ನಾಟಕ ಸೇರಿ 6 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದ ರಾಷ್ಟ್ರೀಯ ಮಾನವ ಹಕ್ಕು ಆಯೋಗ

ನವದೆಹಲಿ(ಅ.15):  ದೇವದಾಸಿ ಪದ್ಧತಿ ನಿಷೇಧಿಸಿದ್ದರೂ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಈ ಪದ್ಧತಿ ಇನ್ನೂ ಜೀವಂತವಾಗಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ರಾಷ್ಟ್ರೀಯ ಮಾನವ ಹಕ್ಕು ಆಯೋಗ, ಈ ಪದ್ಧತಿ ನಿಗ್ರಹಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ 6 ವಾರಗಳಲ್ಲಿ ವರದಿ ನೀಡಿ ಎಂದು ಸೂಚಿಸಿ ಕರ್ನಾಟಕ ಸೇರಿ 6 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.

ದೇವದಾಸಿ ಪದ್ದತಿ ಇನ್ನೂ ಸಹ ಜೀವಂತವಾಗಿದೆ ಎಂಬ ಮಾಧ್ಯಮಗಳ ವರದಿ ಆಧರಿಸಿ ಸ್ವಯಂ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿದ ಮಾನವ ಹಕ್ಕುಗಳ ಆಯೋಗ, ‘ದೇವದಾಸಿ ಪದ್ದತಿಯನ್ನು ನಿರ್ಮೂಲನೆ ಮಾಡಲು ಹಲವು ಕಾನೂನು ಜಾರಿ ಮಾಡಿದ್ದರೂ. ಈಗಲೂ ಈ ಪದ್ದತಿ ಜಾರಿಯಲ್ಲಿದೆ. ಬಡ ಕುಟುಂಬಗಳಿಗೆ ಸೇರಿದ ಯುವತಿಯರು ಈ ಪದ್ದತಿಗೆ ಬಲಿಯಾಗುತ್ತಿದ್ದಾರೆ. 

ಹೆಣ್ಣು ಮಕ್ಕಳನ್ನು ದೇವದಾಸಿ ಮಾಡಿದಲ್ಲಿ ಕಠಿಣ ಕ್ರಮ

ಲೈಂಗಿಕವಾಗಿ ಕಿರುಕುಳಕ್ಕೊಳಗಾಗುತ್ತಿದ್ದಾರೆ. ವರದಿಗಳ ಪ್ರಕರಣ ಕರ್ನಾಟಕವೊಂದರಲ್ಲೇ 70000ಕ್ಕೂ ದೇವದಾಸಿಯರಿದ್ದಾರೆ. ಇನ್ನು ನ್ಯಾ.ರಘುನಾಥ್‌ ರಾವ್‌ ನೇತೃತ್ವದ ಸಮಿತಿ ಪ್ರಕಾರ ತೆಲಂಗಾಣ ಮತ್ತು ಆಂಧ್ರದಲ್ಲಿ ದೇವದಾಸಿಯರ ಪ್ರಮಾಣ 80000ಕ್ಕಿಂತ ಹೆಚ್ಚಿದೆ. ಹೀಗಾಗಿ ಇದರ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿಸ್ತಾರ ವರದಿ ಸಲ್ಲಿಸುವಂತೆ ಆಯೋಗ ಸೂಚಿಸಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಈಶ್ವರನ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಸಾಸ್ವೆಹಳ್ಳಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ
'ಉಪಲೋಕಾಯುಕ್ತರಿಗೆ ಒಂದ್ ನಮಸ್ಕಾರ': ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಲು ಮಾತ್ರ ಅಧಿಕಾರವಿದೆಯೇ? – ಹೆಚ್‌ಡಿಕೆ ವ್ಯಂಗ್ಯ