ಬೆಂಗಳೂರಲ್ಲಿ ಸರಣಿ ವಿಧ್ವಂಸಕ ಕೃತ್ಯಕ್ಕೆ ಸಂಚು; 5 ಶಂಕಿತ ಉಗ್ರರ ಮನೆ ಮೇಲೆ ಎನ್‌ಐಎ ದಾಳಿ!

Published : Dec 14, 2023, 05:37 AM IST
ಬೆಂಗಳೂರಲ್ಲಿ ಸರಣಿ ವಿಧ್ವಂಸಕ ಕೃತ್ಯಕ್ಕೆ ಸಂಚು; 5 ಶಂಕಿತ ಉಗ್ರರ ಮನೆ ಮೇಲೆ ಎನ್‌ಐಎ ದಾಳಿ!

ಸಾರಾಂಶ

ಕೆಲ ತಿಂಗಳ ಹಿಂದೆ ಬೆಂಗಳೂರಿನ ಸರಣಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ ಪ್ರಕರಣ ಸಂಬಂಧ ಬಂಧಿತರಾಗಿದ್ದ ಲಷ್ಕರ್ -ಎ-ತೋಯ್ದಾ (ಎಲ್‌ಇಟಿ) ಸಂಘಟನೆಯ ಶಂಕಿತ ಐವರು ಉಗ್ರರ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ದಾಳಿ ನಡೆಸಿ ಕೆಲ ದಾಖಲೆಗಳನ್ನು ಜಪ್ತಿ ಮಾಡಿದೆ. 

 ಬೆಂಗಳೂರು (ಡಿ.14): ಕೆಲ ತಿಂಗಳ ಹಿಂದೆ ಬೆಂಗಳೂರಿನ ಸರಣಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ ಪ್ರಕರಣ ಸಂಬಂಧ ಬಂಧಿತರಾಗಿದ್ದ ಲಷ್ಕರ್ -ಎ-ತೋಯ್ದಾ (ಎಲ್‌ಇಟಿ) ಸಂಘಟನೆಯ ಶಂಕಿತ ಐವರು ಉಗ್ರರ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ದಾಳಿ ನಡೆಸಿ ಕೆಲ ದಾಖಲೆಗಳನ್ನು ಜಪ್ತಿ ಮಾಡಿದೆ. 

ಪುಲಕೇಶಿನಗರ, ಹೆಬ್ಬಾಳ, ಆ‌ರ್.ಟಿ.ನಗರ ಹಾಗೂ ಕೊಡಿಗೇಹಳ್ಳಿ ಸೇರಿದಂತೆ ನಗರದ ಒಟ್ಟು 6 ಕಡೆ ಎನ್‌ಐಎ ದಾಳಿ ನಡೆಸಿದ್ದು, ಶಂಕಿತರ ಉಗ್ರರ ಸಂಪರ್ಕ ಜಾಲದ ಶೋಧನೆಯನ್ನು ನಡೆಸಿದೆ. ಈ ವೇಳೆ ಡಿಜಿಟಲ್ ಸಾಕ್ಷ್ಯಗಳು, 7.3 ಲಕ್ಷ ರು ನಗದು ಹಾಗೂ ಕೆಲ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ ಎಂದು ಎನ್‌ಐಎ ಹೇಳಿದೆ.

Breaking news: ಶಾಲೆಗಳಿಗೆ ಬಾಂಬ್ ಬೆದರಿಕೆ ಬೆನ್ನಲ್ಲೇ ಇದೀಗ ಅಪರಿಚಿತನಿಂದ ರಾಜಭವನಕ್ಕೆ ಬಾಂಬ್ ಬೆದರಿಕೆ!

ಏನಿದು ಪ್ರಕರಣ? 
ವಿಧ್ವಂಸಕ ಕೃತ್ಯ ಸಂಚು ರೂಪಿಸಿದ ಮಾಹಿತಿ ಪಡೆದ ಸಿಸಿಬಿ, ಇದೇ ವರ್ಷದ ಜು.19 ರಂದು ಹೆಬ್ಬಾಳ ಸಮೀಪದ ಸುಲ್ತಾನ್ ಪಾಳ್ಯದ ಸೈಯದ್ ಸುಹೇಲ್‌ಖಾನ್ ಮನೆ ಮೇಲೆ ದಾಳಿ ನಡೆಸಿತ್ತು. ಆಗ ಸುಹೇಲ್, ಪುಲಿಕೇಶಿ ನಗರದ ಮೊಹಮದ್ ಫೈಜಲ್ ರಬ್ಬಾನಿ, ಕೊಡಿಗೇಹಳ್ಳಿಯ ಮಹಮದ್ ಉಮರ್, ಜಾಹೀದ್ ತಬ್ರೇಜ್ ಹಾಗೂ ಆರ್ .ಟಿ.ನಗರದ ಸೈಯದ್ ಮುದಾಸೀರ್‌ಪಾಷ ಸೇರಿ ಐವರು ಶಂಕಿತ ಉಗ್ರರನ್ನು ಬಂಧಿಸಿತ್ತು. ಆರೋಪಿಗಳಿಂದ 7 ನಾಡಾ ಪಿಸ್ತೂಲ್‌ ಗಳು, 45 ಜೀವಂತ ಗುಂಡುಗಳು ವಾಕಿಟಾಕಿ ಸೆಟ್ಸ್, ಡ್ರ್ಯಾಗರ್, ಗ್ರೆನೈಡ್‌ಗಳು ಹಾಗೂ 13 ಮೊಬೈಲ್ ಗಳು ಜಪ್ತಿಯಾಗಿದ್ದವು.

ಅಪರಿಚಿತನಿಂದ ಪುಲ್ವಾಮಾ ಸಂಚುಕೋರ, ಜೈಶ್‌ ಭಯೋತ್ಪಾದಕ ಅಲಂಗೀರ್‌ ಕಿಡ್ನಾಪ್‌!

ಇನ್ನು ಈ ತಂಡದ ಮಾಸ್ಟರ್ ಮೈಂಡ್ ಜುನೈದ್ ಅಹ್ಮದ್ ಸೇರಿದಂತೆ ಮೂವರು ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಈ ಶಂಕಿತ ಉಗ್ರರಿಗೆ ಜಿಹಾದ್ ಬೋಧಿಸಿರುವುದು ಎಲ್‌ಇಟಿಗೆ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ 2008ರ ಬೆಂಗಳೂರು ಸರಣಿ ಬಾಂಬ್ ಸೋಟ ಪ್ರಕರಣದ ಆರೋಪಿ ಶಂಕಿತ ಉಗ್ರ ಟಿ.ನಾಸಿರ್ ಎಂಬುದು ಸಿಸಿಬಿ ತನಿಖೆಯಲ್ಲಿ ಬಯಲಾಗಿತ್ತು. ಈ ಪ್ರಕರಣವು ಬಳಿಕ ಎನ್‌ಐಎಗೆ ವರ್ಗವಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್