ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಬಾಂಬ್ ಇಟ್ಟ ಪ್ರಕರಣ, ಬಂಟ್ವಾಳದ ನಾಲ್ವರ ಮನೆ ಮೇಲೆ ಎನ್‌ಐಎ ದಾಳಿ

Published : Mar 06, 2023, 04:18 PM IST
ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಬಾಂಬ್ ಇಟ್ಟ ಪ್ರಕರಣ, ಬಂಟ್ವಾಳದ ನಾಲ್ವರ ಮನೆ ಮೇಲೆ ಎನ್‌ಐಎ ದಾಳಿ

ಸಾರಾಂಶ

ಬಿಹಾರದ ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವ ಉದ್ದೇಶದಿಂದ ಬಾಂಬ್ ಇಟ್ಟ ಪ್ರಕರಣಕ್ಕೆ  ಸಂಬಂಧಿಸಿದಂತೆ ಆರ್ಥಿಕ ನೆರವು ನೀಡಿದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ನಾಲ್ವರ ಮನೆಗಳ ಮೇಲೆ ಎನ್‌ಐಎ ದಾಳಿ ನಡೆಸಿದೆ.

ಮಂಗಳೂರು (ಮಾ.6): ಬಿಹಾರದ ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವ ಉದ್ದೇಶದಿಂದ ಬಾಂಬ್ ಇಟ್ಟ ಪ್ರಕರಣಕ್ಕೆ  ಸಂಬಂಧಿಸಿದಂತೆ ಆರ್ಥಿಕ ನೆರವು ನೀಡಿದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ನಾಲ್ವರ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದಾಳಿ ನಡೆಸಿದೆ. ಆರೋಪಿಗಳನ್ನು ನಂದಾವರ ನಿವಾಸಿಗಳಾದ ಮುಹಮ್ಮದ್ ಸಿನಾನ್, ಇಕ್ಬಾಲ್, ಸರ್ಪಾಜ್ ನವಾಜ್ ಮತ್ತು ನೌಫಲ್ ಎಂದು ಗುರುತಿಸಲಾಗಿದ್ದು, ಅವರು ಭಯೋತ್ಪಾದಕರೊಂದಿಗೆ ನಂಟು ಹೊಂದಿದ್ದರು ಮತ್ತು ಪ್ರಧಾನಿಯವರ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಹಣಕಾಸಿನ ನೆರವು ನೀಡಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿದ್ದಾರೆ. 

ಈ ದಾಳಿಗೆ ಹಣಕಾಸಿನ ನೆರವು ನೀಡುವ ಉದ್ದೇಶದಿಂದ ಭಯೋತ್ಪಾದಕರ ವಿವಿಧ ಖಾತೆಗಳಿಗೆ ಕೋಟ್ಯಂತರ ರೂಪಾಯಿಗಳನ್ನು ವರ್ಗಾಯಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರಕರಣ ಸಂಬಂಧ ಎನ್‌ಐಎ ತಂಡ ಈ ಬಗ್ಗೆ ತನಿಖೆ ನಡೆಸುತ್ತಿದೆ. ಇಷ್ಟು ಮಾತ್ರವಲ್ಲದೆ ಪಾಣೆ ಮಂಗಳೂರಿನ ಮತ್ತು ಮೆಲ್ಕಾರ್ ನ ಸೈಬರ್ ಸೆಂಟರ್ ಗಳಿಗೂ ಎನ್‌ಐಎ ಅಧಿಕಾರಿಗಳು ಭೇಟಿ ನೀಡಿ ದಾಖಲೆಗಳನ್ನು ಕಲೆ ಹಾಕಿದ್ದಾರೆ. 

2013 ರಲ್ಲಿ ಗಾಂಧಿ ಮೈದಾನದಲ್ಲಿ ಆಗಿನ ಎನ್‌ಡಿಎ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ 'ಹುಂಕಾರ್ ರ್ಯಾಲಿ' ವೇಳೆ ಬಾಂಬ್ ಸ್ಫೋಟಗಳನ್ನು ನಡೆಸಿದ ಆರೋಪದಲ್ಲಿ ಪಾಟ್ನಾದ ವಿಶೇಷ ಎನ್‌ಐಎ ನ್ಯಾಯಾಲಯವು ಒಂಬತ್ತು ಜನರಲ್ಲಿ ನಾಲ್ವರಿಗೆ 2021 ರಲ್ಲಿ ಮರಣದಂಡನೆ ವಿಧಿಸಿತ್ತು.

2013ರ ಪಾಟ್ನಾ ಸ್ಫೋಟದಲ್ಲಿ 6 ಮಂದಿ ಸಾವು:
ಅಕ್ಟೋಬರ್ 27, 2013 ರಂದು  ಏಳು ಬಾಂಬ್‌ಗಳು ಸ್ಫೋಟಗೊಂಡ ನಂತರ ಆರು ಮಂದಿ ಸಾವನ್ನಪ್ಪಿದರು ಮತ್ತು 90 ಕ್ಕೂ ಹೆಚ್ಚು ಜನರು ಗಾಯಗೊಂಡರು. ಮೊದಲ ಸ್ಫೋಟವು ಪಾಟ್ನಾ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ 10 ರಲ್ಲಿ ಸಂಭವಿಸಿತು ಮತ್ತು ಉಳಿದವುಗಳು ಪ್ರಧಾನಿ ಮೋದಿಯವರ ಗಾಂಧಿ ಮೈದಾನದಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಸಂಭವಿಸಿದವು.

ಮಂಗಳೂರು ಕುಕ್ಕರ್‌ ಬಾಂಬ್‌, ಕೊಯಮತ್ತೂರು ಕಾರ್‌ ಬಾಂಬ್‌ ಸ್ಫೋಟಕ್ಕೆ ನಾವೇ ಕಾರಣ ಎಂದ ಐಸಿಸ್‌!

ನವೆಂಬರ್ 2013 ರಲ್ಲಿ, NIA ಈ ಪ್ರಕರಣವನ್ನು ಕೈಗೆತ್ತಿಕೊಂಡಿತು ಮತ್ತು 2014 ರಲ್ಲಿ ಆರೋಪಿತ ಮಾಸ್ಟರ್ ಮೈಂಡ್ ಹೈದರ್ ಅಲಿಯನ್ನು ಬಂಧಿಸಿತು. ಒಂಬತ್ತು ಇಂಡಿಯನ್ ಮುಜಾಹಿದ್ದೀನ್ (IM) ಶಂಕಿತರು ಮತ್ತು ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ (SIMI) ಶಂಕಿತರನ್ನು ಪ್ರಕರಣದಲ್ಲಿ ಆರೋಪಿಗಳನ್ನಾಗಿ ಮಾಡಲಾಯಿತು. ಒಬ್ಬ ಆರೋಪಿ ತಾರಿಖ್ ಅನ್ಸಾರಿ ಪಾಟ್ನಾದಲ್ಲಿ ಸಾರ್ವಜನಿಕ ಶೌಚಾಲಯದಲ್ಲಿ ಬಾಂಬ್ ಇಡಲು ಪ್ರಯತ್ನಿಸುತ್ತಿದ್ದಾಗ ಸಾವನ್ನಪ್ಪಿದ್ದಾನೆ.

ಪ್ರವೀಣ್‌ ನೆಟ್ಟಾರು ಹತ್ಯೆ ಸಂಚಿಗೆ ಬಳಕೆಯಾಗಿದ್ದ ಚೌಲ್ಟ್ರಿ ಎನ್‌ಐಎ ಸ್ವಾಧೀನ

ಹೊಸದಿಲ್ಲಿ, ಛತ್ತೀಸ್‌ಗಢ ಮತ್ತು ಉತ್ತರಪ್ರದೇಶದಲ್ಲಿ ನಡೆದ ಹಿಂದಿನ ರ್ಯಾಲಿಗಳಲ್ಲಿ ಮೋದಿಯವರನ್ನು ಸಮೀಪಿಸಲು ವಿಫಲರಾದ ನಂತರ ಆರೋಪಿಗಳು ಪಾಟ್ನಾ ಬಾಂಬ್ ಸ್ಫೋಟಕ್ಕೆ ಯೋಜನೆ ರೂಪಿಸಿದ್ದರು ಎಂದು ಎನ್‌ಐಎ ತನ್ನ ಚಾರ್ಜ್‌ಶೀಟ್‌ನಲ್ಲಿ ಹೇಳಿದೆ. ಆರೋಪಿಗಳು ರಾಂಚಿಯಲ್ಲಿ ಆತ್ಮಹತ್ಯಾ ಬಾಂಬ್ ದಾಳಿ ನಡೆಸಿದ್ದರು ಎಂದು ಎನ್‌ಐಎ ಹೇಳಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಪೊಲೀಸ್ ಸಿಬ್ಬಂದಿಗೆ ಡಿಜಿ ಐಜಿಪಿ ಡಾ ಸಲೀಂ ಖಡಕ್ ಎಚ್ಚರಿಕೆ
ಈಶ್ವರನ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಸಾಸ್ವೆಹಳ್ಳಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ