ಬೆಂಗಳೂರಿನ ಸಮಸ್ಯೆಗೆ ಬೆಸ್ಟ್ ಐಡಿಯಾ ಕೊಟ್ಟು ತಲಾ 10 ಲಕ್ಷ ರೂ. ಗೆದ್ದುಕೊಂಡ ಐದು ಸಂಸ್ಥೆಗಳು!

Published : Dec 15, 2024, 06:38 PM ISTUpdated : Dec 15, 2024, 07:09 PM IST
ಬೆಂಗಳೂರಿನ ಸಮಸ್ಯೆಗೆ ಬೆಸ್ಟ್ ಐಡಿಯಾ ಕೊಟ್ಟು ತಲಾ 10 ಲಕ್ಷ ರೂ. ಗೆದ್ದುಕೊಂಡ ಐದು ಸಂಸ್ಥೆಗಳು!

ಸಾರಾಂಶ

ಬೆಂಗಳೂರಿನ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯಲು ಆಯೋಜಿಸಿದ್ದ "ನಮ್ಮ ಬೆಂಗಳೂರು ಚಾಲೆಂಜ್"ನಲ್ಲಿ ಐದು ಸಂಸ್ಥೆಗಳು ವಿಜೇತರಾಗಿ ತಲಾ ₹೧೦ ಲಕ್ಷ ಬಹುಮಾನ ಪಡೆದಿವೆ. ನೀರಿನ ಶುದ್ಧೀಕರಣ, ಮಹಿಳೆಯರಿಗೆ ಆಟೋ ಚಾಲನಾ ತರಬೇತಿ, ಆಟೋ ಮೀಟರ್, ಆರೋಗ್ಯ ಸೇವೆ ಮತ್ತು ತ್ಯಾಜ್ಯ ನಿರ್ವಹಣೆ ಯೋಜನೆಗಳು ಬಹುಮಾನಿತ ಯೋಜನೆಗಳಾಗಿವೆ.

ಬೆಂಗಳೂರು (ಡಿ.15): ಬೆಂಗಳೂರಿನ ಸಮಸ್ಯೆಗಳಿಗೆ ಉತ್ತಮ ಪರಿಹಾರ ನೀಡುವಂತೆ ಆಯೋಜನೆ ಮಾಡಲಾಗಿದ್ದ ನಮ್ಮ ಬೆಂಗಳೂರು ಚಾಲೆಂಜ್‌ಗೆ ಉತ್ತಮ ಐಡಿಯಾಗಳನ್ನು ನೀಡಿದ 5 ಸಂಸ್ಥೆಗಳಿಗೆ ತಲಾ 10 ಲಕ್ಷ ರೂ.ಗಳನ್ನು ನೀಡಿ ಅಭಿನಂದಿಸಲಾಗಿದೆ.

ಬಿಎಲ್‌ಆರ್ ಹಬ್ಬದಲ್ಲಿ ನಡೆದ ಬೆಂಗಳೂರು ಇಂಟರ್‌ನ್ಯಾಶನಲ್ ಸೆಂಟರ್‌ನಲ್ಲಿ ಫ್ಯೂಚರ್ಸ್ ಕಾನ್ಫರೆನ್ಸ್‌ನಲ್ಲಿ ಈ ಘೋಷಣೆ ಮಾಡಲಾಗಿದೆ. ಅನ್‌ಬಾಕ್ಸಿಂಗ್‌ ಬೆಂಗಳೂರು ಹಾಗೂ ನಿಖಿಲ್ ಕಾಮತ್ ಅವರ ಡಬ್ಲ್ಯೂಟಿ ಫಂಡ್ ಸಹಯೋಗದೊಂದಿಗೆ ನಡೆದ 'ನಮ್ಮ ಬೆಂಗಳೂರು ಚಾಲೆಂಜ್' ಅನ್ನು 5 ಜನ ಗೆದ್ದಿದ್ದಾರೆ. ಬೆಂಗಳೂರು ಸಮಸ್ಯೆಗೆ ಪರಿಹಾರ ನೀಡಿ ಎಂದು 'ನಮ್ಮ ಬೆಂಗಳೂರು ಚಾಲೆಂಜ್' ಅನ್ನು ಆಯೋಜನೆ ಮಾಡಲಾಗಿತ್ತು. ವಿಭಿನ್ನ ಆಲೋಚನೆಗಳಿಗೆ ತಲಾ 10 ಲಕ್ಷ ರೂ. ನೀಡುವುದಾಗಿ ಘೋಷಣೆ ಮಾಡಲಾಗಿತ್ತು. Unboxing ಬೆಂಗಳೂರು ಫೌಂಡೇಶನ್ ಮತ್ತು ನಿಖಿಲ್ ಕಾಮತ್ ಅವರ WTFund ಇದೀಗ ನಮ್ಮ ಬೆಂಗಳೂರು ಚಾಲೆಂಜ್‌ನ 5 ವಿಜೇತ ತಂಡಗಳಿಗೆ ತಲಾ 10 ಲಕ್ಷ ರೂ. ಬಹುಮಾನ ನೀಡಲಾಯಿತು.

ಕಳೆದ ನವೆಂಬರ್ ತಿಂಗಳಲ್ಲಿ ಪ್ರಾರಂಭವಾದ ನಮ್ಮ ಬೆಂಗಳೂರು ಚಾಲೆಂಜ್‌ಗೆ ಸುಮಾರು 600 ಜನರು ಹಾಗೂ ಸಂಸ್ಥೆಗಳಿಂದ ರಿಜಿಸ್ಟ್ರೇಶನ್ ಆಗಿತ್ತು. ಬಳಿಕ Unboxing ಬೆಂಗಳೂರು ಫೌಂಡೇಶನ್ ಮತ್ತು WTFund ಕೊನೆಯದಾಗಿ 16 ಬೆಸ್ಟ್ ಐಡಿಯಾಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗಿತ್ತು. ಬಳಿಕ 8 ತಂಡವನ್ನು ಆಯ್ಕೆ ಮಾಡಿ ಕೊನೆಯದಾಗಿ 5 ತಂಡಗಳಿಗೆ ಅವಾರ್ಡ್ ನೀಡಲಾಗಿದೆ. 5 ಬೆಸ್ಟ್‌ ಐಡಿಯಾಗಳನ್ನ ನೀಡಿದ ತಂಡಕ್ಕೆ ತಲಾ 10 ಲಕ್ಷ ರೂ. ನೀಡಲಾಗಿದೆ.

ಇದನ್ನೂ ಓದಿ: ಬೆಂಗಳೂರು ನಂ.2, ನಿತಿನ್ ಗಡ್ಕರಿ ವರದಿಯಿಂದ ಸಿಲಿಕಾನ್ ಸಿಟಿ ಜನರಲ್ಲಿ ಹೆಚ್ಚಿದ ಆತಂಕ!

  • 1-ಶುದ್ಧ ನೀರು: ಬೆಂಗಳೂರು ಜಲ ಮೂಲಗಳಾದ ಕೆರೆ, ಕಾಲುವೆಗಳು ಸಂಸ್ಕರಿಸದ ಒಳಚರಂಡಿ ನೀರು, ಕೈಗಾರಿಕಾ ತ್ಯಾಜ್ಯಗಳಿಂದ ತೀವ್ರ ಮಾಲಿನ್ಯ ಸಮಸ್ಯೆ ಎದುರಿಸುತ್ತಿವೆ. ಇದು ನೀರಿನ ಗುಣಮಟ್ಟವನ್ನು ಕಡಿಮೆ ಮಾಡಿದೆ. ನೀರಿನ ಮೂಲಗಳ ಪುನರುಜ್ಜೀವನ ಯೋಜನೆಯು ನಮ್ಮ ಪರಿಸರ ವ್ಯವಸ್ಥೆಗಳನ್ನು ಪುನಃಸ್ಥಾಪಿಸಲು ಮತ್ತು ಕುಡಿಯುವ ನೀರಿನ ಗುಣಮಟ್ಟಕ್ಕೆ ಕಾಪಾಡಲು ಸಹಾಯಕವಾಗಲಿದೆ. ಇದಕ್ಕಾಗಿ ಸಮರ್ಥ, ನೈಸರ್ಗಿಕ ಪರಿಹಾರಗಳೊಂದಿಗೆ ಈ ಸಮಸ್ಯೆಗಳನ್ನು ಪರಿಹರಿಸುವ ಗುರಿಯನ್ನು ಹೊಂದಿದೆ.
  • 2-ಮಹಿಳಾ ಶಕ್ತಿ ಎಲೆಕ್ಟ್ರಿಕ್ ಆಟೋ ಡ್ರೈವಿಂಗ್ ತರಬೇತಿ ಕಾರ್ಯಕ್ರಮ: ಮಹಿಳಾ ಶಕ್ತಿ ಕಾರ್ಯಕ್ರಮ ಸುರಕ್ಷಿತ ಮತ್ತು ಬೆಂಗಳೂರಿನ ಅಂತರವನ್ನು ಕಡಿಮೆ ಮಾಡುತ್ತದೆ. ಇದು ಪುರುಷ ಪ್ರಾಬಲ್ಯ ಕ್ಷೇತ್ರವನ್ನು ಪ್ರವೇಶಿಸಲು ಮಹಿಳೆಯರಿಗೆ ಸಹಕಾರಿಯಾಗಲಿದೆ.
  • 3-ಆಟೋ ಮೀಟರ್: ಪಾರದರ್ಶಕ ಮತ್ತು ಸರ್ಕಾರದಿಂದ ಅನುಮೋದಿತ ಮೀಟರ್ ದರದ ಆಟೋರಿಕ್ಷಾ ಸೇವೆಗಳನ್ನು ನೀಡುವುದು.
  • 4-ಅನಾಹತ್ ಫೌಂಡೇಶನ್: ನಗರ ಪ್ರದೇಶದ ಬಡವರಿಗಾಗಿ ಪ್ರಾಥಮಿಕ ಮತ್ತು ಆರೋಗ್ಯ ರಕ್ಷಣೆ ಸುಧಾರಿಸುವುದು. ಆರೋಗ್ಯ ಸೇವೆಯು ಎಲ್ಲಾ ನಾಗರಿಕರಿಗೆ ತಲುಪುವಂತೆ ಮಾಡುವುದು.
  • 5-ನಾವು ಬದಲಾಗೋಣ (Let's Be the Change): ಸುಸ್ಥಿರತೆಯ ತ್ಯಾಜ್ಯ ನಿರ್ವಹಣಾ ಯೋಜನೆ ದೃಷ್ಟಿ ಜನರು ಉತ್ಪಾದಿಸುವ ತ್ಯಾಜ್ಯಕ್ಕೆ ಜನರನ್ನೇ ಹೊಣೆಗಾರರನ್ನಾಗಿ ಮಾಡುವ ಮೂಲಕ ಶೇ.1 ಕ್ಕಿಂತ ಕಡಿಮೆ ತ್ಯಾಜ್ಯವನ್ನು ಭೂಭರ್ತಿ ಮಾಡುವುದಕ್ಕೆ ಕಳುಹಿಸುವುದು. ನಾಗರಿಕರು ಮತ್ತು ಮುನ್ಸಿಪಲ್ ಕಾರ್ಪೊರೇಷನ್ ನಡುವೆ ಇದಕ್ಕಾಗಿ ಒಂದು ಸಹಕಾರ ಬೆಳೆಸುವುದು.

ಇದನ್ನೂ ಓದಿ: ಬೆಂಗಳೂರಲ್ಲಿ ಮತ್ತೊಂದು ‘ಎಲೆಕ್ಟ್ರಾನಿಕ್‌ ಸಿಟಿ’ಗೆ ಸಿದ್ಧತೆ: 1000 ಎಕರೆಯಲ್ಲಿ ‘ಸ್ವಿಫ್ಟ್‌ ಸಿಟಿ’ ನಿರ್ಮಾಣ

ಈ ಕಾರ್ಯಕ್ರಮದ ಮಾತನಾಡಿದ ಜೀರೋಧಾದ ಸಹ ಸಂಸ್ಥಾಪಕ ನಿಖಿಲ್ ಕಾಮತ್, ಬೆಂಗಳೂರು ನನಗೆ ತುಂಬಾ ನೀಡಿದೆ. ಅದರ ಪ್ರತಿಯಾಗಿ ಬೆಂಗಳೂರಿಗೆ ಏನಾದರೂ ನೀಡುವುದು  ನನ್ನ ಮಾರ್ಗವಾಗಿದೆ. ಈ ಚಾಲೆಂಜ್ ಈ ನಗರದ ಬಗ್ಗೆ ಹೆಚ್ಚು ಕಾಳಜಿ ವಹಿಸುವ ಜನರನ್ನು ಒಟ್ಟುಗೂಡಿಸುತ್ತದೆ. ಇದರಲ್ಲಿ  ಭಾಗವಹಿಸಿದ ಎಲ್ಲರಿಗೂ ದೊಡ್ಡ ಧನ್ಯವಾದಗಳು. ಈ ಆಲೋಚನೆಗಳು ಹೇಗೆ ವಿಕಸನಗೊಳ್ಳುತ್ತವೆ ಮತ್ತು ಮುಂಬರುವ ವರ್ಷಗಳಲ್ಲಿ ಬದಲಾವಣೆಯನ್ನು ಮಾಡುತ್ತವೆ ಎಂಬುದನ್ನು ನೋಡಲು ನಾನು ನಿಜವಾಗಿಯೂ ಉತ್ಸುಕನಾಗಿದ್ದೇನೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಗಲಕೋಟೆ: ದಾಸೋಹ ಚಕ್ರವರ್ತಿ, ಬಂಡಿಗಣಿ ಮಠದ ದಾನೇಶ್ವರ ಸ್ವಾಮೀಜಿ ಲಿಂಗೈಕ್ಯ!
ಬಾರ್ ಆಗಿ ಮಾರ್ಪಟ್ಟ KSRTC ಬಸ್: ಪ್ರಯಾಣದ ಮಧ್ಯೆಯೇ ಮದ್ಯ ಸೇವನೆ!