ನಿಖಿಲ್‌ ಕುಮಾರಸ್ವಾಮಿಗೆ ಶುರುವಾಗಿದೆ ರಾಜಯೋಗ! ಡಾ ಲಕ್ಷ್ಮೀಕಾಂತ್ ಆಚಾರ್ಯ ಗುರೂಜಿ ಸ್ಫೋಟಕ ಭವಿಷ್ಯ!

Published : Nov 17, 2024, 10:48 AM IST
ನಿಖಿಲ್‌ ಕುಮಾರಸ್ವಾಮಿಗೆ ಶುರುವಾಗಿದೆ ರಾಜಯೋಗ! ಡಾ ಲಕ್ಷ್ಮೀಕಾಂತ್ ಆಚಾರ್ಯ ಗುರೂಜಿ ಸ್ಫೋಟಕ ಭವಿಷ್ಯ!

ಸಾರಾಂಶ

ನಿಖಿಲ್ ಕುಮಾರಸ್ವಾಮಿಗೆ ರಾಜಯೋಗ ಶುರುವಾಗಿದೆ. ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿ ಗೆಲ್ಲುತ್ತಾರೆ ಎಂದು ಡಾ ಲಕ್ಷ್ಮೀಕಾಂತ್ ಆಚಾರ್ಯ ಗುರೂಜಿ ಭವಿಷ್ಯ ನುಡಿದರು.

ತುಮಕೂರು (ನ.17): ನಿಖಿಲ್ ಕುಮಾರಸ್ವಾಮಿಗೆ ರಾಜಯೋಗ ಶುರುವಾಗಿದೆ. ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿ ಗೆಲ್ಲುತ್ತಾರೆ ಎಂದು ಡಾ ಲಕ್ಷ್ಮೀಕಾಂತ್ ಆಚಾರ್ಯ ಗುರೂಜಿ ಭವಿಷ್ಯ ನುಡಿದರು.

ತುಮಕೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಗುರೂಜಿ, 2016 ರಲ್ಲಿ ಹೆಚ್ ಡಿ ದೇವೆಗೌಡರು ತುಮಕೂರು ತಾಲೂಕಿನ ಚಿನಗ ಗ್ರಾಮದಲ್ಲಿರುವ ಮುಕಾಬಿಂಕಾ ದೇವಿ ಅಮ್ಮನ ಸನ್ನಿಧಿಯಲ್ಲಿ ಚಂಡಿಕಾಯಾಗ ಮಾಡಿಸಿದ್ದರು. ಅದರ ಫಲ 2024 ಕ್ಕೆ ಲಭಿಸಿದೆ. ಅಂದೇ ಮುಕಾಬಿಂಕಾ ದೇವಿ ನಿಖಿಲ್ ಕುಮಾರಸ್ವಾಮಿಯವರ ಭವಿಷ್ಯ ನುಡಿದಿತ್ತು. 2023 ರ ನಂತರ ನಿಖಿಲ್ ಕುಮಾರಸ್ವಾಮಿಗೆ ರಾಜಯೋಗ ಶುರುವಾಗಲಿದೆ ಎಂದು ಭವಿಷ್ಯ ನುಡಿಯಲಾಗಿತ್ತು. ಅದರಂತೆ ನಿಖಿಲ್ ಕುಮಾರಸ್ವಾಮಿಗೆ 2023 ರಿಂದಲೇ ರಾಜಯೋಗ ಶುರುವಾಗಿದೆ. ನಿಖಿಲ್ ಕುಮಾರಸ್ವಾಮಿ ಮೇಲೆ ಭಗವತಿಯ ಪರಿಪೂರ್ಣ ಆಶೀರ್ವಾದ ಆಗಿದೆ. ಅಮ್ಮನವರು ಒಪ್ಪಿಗೆ ಸೂಚಿಸಿದ್ದಾರೆ ಎಂದರು.

'ಸಚಿವ ಜಮೀರ್ ಹೇಳಿಕೆಯಿಂದ ಪಕ್ಷಕ್ಕೆ ಒಂದಷ್ಟು ನಷ್ಟ ಆಗಿದೆ' ಎಂದ ಸಿಪಿವೈ; ಫಲಿತಾಂಶಕ್ಕೂ ಮೊದಲೇ ಸೋಲೊಪ್ಪಿಕೊಂಡ್ರಾ ಸೈನಿಕ?

ರಾಜಯೋಗ ಇಲ್ಲದೆ ಅಧಿಕಾರ ಸಿಗೊಲ್ಲ:

ನಿಖಿಲ್ ಕುಮಾರಸ್ವಾಮಿಗೆ ಮುಂದಿನ ದಿನಗಳಲ್ಲಿ ಅಮ್ಮನ ಆಶೀರ್ವಾದ, ಜಯಶೀಲರಾಗುವಂತಹ ಎಲ್ಲಾ ಅನುಗ್ರಹವನ್ನ ಅಮ್ಮನವರು ಮಾಡಿಕೊಟ್ಟಿದ್ದಾರೆ. ಈ ಬಾರಿ ಅಮ್ಮನವರ ಆಶಿರ್ವಾದ ಆಗಿರೋದ್ರಿಂದ ಖಂಡಿತವಾಗಿ ಗೆಲುವು ಖಚಿತವಾಗಿದೆ. ಅವರ ನಿರೀಕ್ಷೆಗೂ ಮಿರಿದ ಅಂತರದಿಂದ ಗೆಲುವ ಸಾಧಿಸಲಿದ್ದಾರೆ. ಯಾಕಂದ್ರೆ ಚಂಡಿಕಾಯಾಗದಲ್ಲಿ ಅಷ್ಟೊಂದು ರೀತಿಯಾದ ವಿಶೇಷತೆಗಳು ಇರುತ್ತೆ. ಯಾರು ಅನುಷ್ಠಾನವನ್ನ ಮಾಡಿ ವಿಶೇಷವಾಗಿ ದೇವಿಗೆ ಪೂಜೆಯನ್ನ ಸಲ್ಲಿಸ್ತಾರೋ, ಅವರಿಗೆ ಪರಿಪೂರ್ಣವಾದ ಆಶಿರ್ವಾದ ಪರಿಪಾಪ್ತಿಯಾಗುತ್ತೆ. ಮಹಾಲಕ್ಷ್ಮಿ,ಮಹಾಕಾಳಿ, ಮಹಾ ಸರಸ್ಪತಿಯ ಸ್ವರೂಪಿಣಿಯಾಗಿರುವಂತಹ ಅಮ್ಮನವರ ಆಶಿರ್ವಾದ ಆಗಿರೋದ್ರಿಂದ. ಖಂಡಿತವಾಗಿ ಅವರ ಕುಟುಂಬಕ್ಕೆ ಒಳ್ಳೆಯ ಅನುಗ್ರಹ ಆಗುತ್ತೆ. ಹಿಂದಿನ ಎಲ್ಲ ನೋವುಗಳನ್ನ ಮರೆಸಿ ಮುಂದಿನ ಜೀವನ ಸುಖಮಯವಾಗಿರುತ್ತೆ. ಪ್ರತಿಯೊಂದು ಅಧಿಕಾರ ಸಿಗಬೇಕಾದರೆ ರಾಜಯೋಗ ಇರಬೇಕು. ರಾಜಯೋಗ ಇಲ್ಲದೇ ಅಧಿಕಾರ ಸಿಗಲಿಕ್ಕೆ ಸಾಧ್ಯವಿಲ್ಲ. ಅದರಂತೆ ಅಮ್ಮನವರ ಆಶಿರ್ವಾದದಿಂದ ಈಗ ನಿಖಿಲ್ ಗೆ ರಾಜಯೋಗ ಸಿಕ್ಕಿದೆ. ಉನ್ನತ ಅಧಿಕಾರಗಳನ್ನ ಅನುಭವಿಸುವ ಅನುಗ್ರಹ ಪ್ರಾಪ್ತಿಯಾಗುತ್ತೆ. ಈ ಹಿಂದೆ ನಿಖಿಲ್ ಕುಮಾರಸ್ವಾಮಿ ಎರಡು ಚುನಾವಣೆಯಲ್ಲೂ ನಿಮಗೆ ಹಿನ್ನಡೆಯಾಗುತ್ತೆ ಅಮ್ಮನವರು ಹೇಳಿದ್ರು. 2023 ರ ನಂತರ ಒಳ್ಳೆಯದಾಗುತ್ತೆ ಅಂತ ಸೂಚಿಸಿದ್ರು. ಅದೇ ಪ್ರಕಾರವಾಗಿ ಈ ಒಂದು ಯೋಗ ಪ್ರಾರಂಭವಾಗಿದೆ. ಕಹಿ ನೆನಪುಗಳೆಲ್ಲಾ ಮಾಯವಾಗಿ ಒಳ್ಳೆಯ ರೀತಿಯ ಅನುಗ್ರಹ ಆಗುತ್ತೆ.

ಬೊಂಬೆನಾಡಲ್ಲಿ ಸೂತ್ರದಾರರ ಪ್ರತಿಷ್ಠೆ ಪಣಕ್ಕೆ: ಇಬ್ಬರೂ ಅಭ್ಯರ್ಥಿಗಳಿಗೆ ಸಿನಿಮಾ ನಂಟು

ನಟ ದರ್ಶನ್ ಬಗ್ಗೆಯೂ ಭವಿಷ್ಯ ನುಡಿದಿದ್ದ ಗುರೂಜಿ:

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ವಿಚಾರದಲ್ಲೂ ಲಕ್ಷ್ಮೀಕಾಂತ್ ಆಚಾರ್ಯ ಗುರೂಜಿ ಭವಿಷ್ಯ ನುಡಿದಿದ್ದರು. ಆಶ್ವಯುಜ ಮಾಸ ಅಂತ್ಯ ಕಾರ್ತಿಕ ಮಾಸದ ಪ್ರಾರಂಭದಲ್ಲಿ ದರ್ಶನ್ ಬೆಲ್ ಸಿಗುತ್ತೆ  ಅದೇ ರೀತಿ ದರ್ಶನ್ ಜೈಲಿನಿಂದ ಹೊರಬಂದಿದ್ದಾರೆ. ಇದೀಗ ನಿಖಿಲ್ ಕುಮಾರಸ್ವಾಮಿ ಭವಿಷ್ಯವೂ ನಿಜವಾಗಲಿದೆ ಎಂದು ನಂಬಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈಲ್ವೆ ಪರೀಕ್ಷೆ ರದ್ದು: ಕೇಂದ್ರದ 'ಹಿಂದಿ ಹೇರಿಕೆ' ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ; ವಿ. ಸೋಮಣ್ಣಗೆ ತರಾಟೆ!
'ಬಿಯರ್ ಬೆಲೆ ಏರಿಸಿದ್ದಕ್ಕೆ ಮಕ್ಕಳು ಗಾಂಜಾ ಮೊರೆ ಹೋಗ್ತಿದ್ದಾರೆ': ಅಬಕಾರಿ ಬೆಲೆ ಏರಿಕೆಗೆ ಹೆಚ್. ವಿಶ್ವನಾಥ್ ಆಕ್ರೋಶ!