ಭೀಮಾತೀರದ ಭೀಮನಗೌಡ ಕೊಲೆ ಪ್ರಕರಣ; ಕರ್ತವ್ಯ ಲೋಪದಡಿ ಚಡಚಣ ಪಿಎಸ್‌ಐ ಪ್ರವೀಣ್ ಸಸ್ಪೆಂಡ್!

Published : Sep 05, 2025, 08:27 PM IST
Vijayapura PSI Praveen Suspend

ಸಾರಾಂಶ

ಭೀಮಾತೀರದ ನಿಂಬರಗಿ ಗ್ರಾಮ ಪಂಚಾಯಿತಿ ಸದಸ್ಯ ಭೀಮನಗೌಡ ಬಿರಾದಾರ್ ಗುಂಡಿಕ್ಕಿ ಕೊಲೆಯಾದ ಪ್ರಕರಣದಲ್ಲಿ ಕರ್ತವ್ಯ ನಿರ್ಲಕ್ಷ್ಯದ ಆರೋಪದ ಮೇಲೆ ಚಡಚಣ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ರಾಜಕೀಯ, ಆರ್ಥಿಕ ಹಾಗೂ ವೈಯಕ್ತಿಕ ದ್ವೇಷದ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ವಿಜಯಪುರ (ಸೆ.05): ಭೀಮಾತೀರದ ಚಡಚಣ ತಾಲೂಕಿನ ನಿಂಬರಗಿ ಗ್ರಾಮ ಪಂಚಾಯಿತಿ ಸದಸ್ಯ ಭೀಮನಗೌಡ ಬಿರಾದಾರ್ ಗುಂಡಿಕ್ಕಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ತವ್ಯ ನಿರ್ಲಕ್ಷ್ಯದ ಆರೋಪದ ಮೇಲೆ ಚಡಚಣ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಈ ಆದೇಶವನ್ನು ಹೊರಡಿಸಿದ್ದಾರೆ.

ಭೀಮಾತೀರದ ರಕ್ತಚರಿತ್ರೆಯಲ್ಲಿ ಮತ್ತೊಂದು ಅಧ್ಯಾಯ ಎಂಬಂತೆ ದೇವರ ನಿಂಬರಗಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಭೀಮನಗೌಡ ಬಿರಾದಾರ್ ಅವರನ್ನು ಗುಂಡಿಕ್ಕಿ ಮತ್ತು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಲಾಗಿದೆ. ಕಳೆದ ಮಂಗಳವಾರ ಬೆಳಗ್ಗೆ 8:30 ರಿಂದ 8:45ರ ಸುಮಾರಿಗೆ ನಡೆದಿದೆ ಎಂದು ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಲಕ್ಷ್ಮಣ ನಿಂಬರಗಿ ತಿಳಿಸಿದ್ದರು. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಹತ್ಯೆಯನ್ನು ಖಚಿತಪಡಿಸಿದ್ದರು.

ಈ ಘಟನೆ ಸೆಪ್ಟೆಂಬರ್ 3ರಂದು ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮದಲ್ಲಿ ಬೆಳಗ್ಗೆ ಕಟಿಂಗ್ ಶಾಪ್‌ಗೆ ಬಂದಿದ್ದ ಭೀಮನಗೌಡನ ಮೇಲೆ ನಾಲ್ವರು ದುಷ್ಕರ್ಮಿಗಳಾದ ರಜೀವುಲ್ಲಾ ಮಕಾನದಾರ್, ವಾಸೀಂ ಮನಿಯಾರ್, ಪಿರೋಜ್ ಶೇಖ್ ಮತ್ತು ಮೌಲಾಸಾಬ್‌ ಖಾರದ ಪುಡಿ ಎರಚಿ, ಕಂಟ್ರಿ ಪಿಸ್ತೂಲ್‌ನಿಂದ ಗುಂಡು ಹಾರಿಸಿ ಹತ್ಯೆ ಮಾಡಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ ನಾಲ್ಕೂ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆರೋಪಿಗಳ ಪ್ರಕಾರ, ಭೀಮನಗೌಡ ಅವರಿಂದ ತಮಗೆ ಅನ್ಯಾಯವಾಗಿದೆ ಎಂದು ಬಾಯಿಬಿಟ್ಟಿದ್ದಾರೆ. ಈ ಪ್ರಕರಣದ ಹಿಂದೆ ರಾಜಕೀಯ, ಆರ್ಥಿಕ ಹಾಗೂ ವೈಯಕ್ತಿಕ ದ್ವೇಷಗಳಿರುವ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದರು.

ಆದರೆ, ಈ ಘಟನೆ ಭೀಮಾತೀರದಲ್ಲಿ ಮತ್ತೆ ರಕ್ತಪಾತದ ಆತಂಕ ಮೂಡಿಸಿತ್ತು. ಕಳೆದ ಹಲವು ವರ್ಷಗಳಿಂದ ನಿಂತಿದ್ದ ಗ್ಯಾಂಗ್‌ಸ್ಟರ್ ವಾರ್ ಮತ್ತೆ ಶುರುವಾಗುವ ಸಾಧ್ಯತೆಯಿದೆ ಎಂದು ಭೀಮಾತೀರದ ನಿವಾಸಿಗಳು ಭಯಗೊಂಡಿದ್ದರು. ಇಂತಹ ಗಂಭೀರ ಪ್ರಕರಣವನ್ನು ತಡೆಯುವಲ್ಲಿ ವಿಫಲರಾದ ಆರೋಪದ ಮೇಲೆ ಸ್ಥಳೀಯ ಪಿಎಸ್‌ಐ ಪ್ರವೀಣ್ ವಿರುದ್ಧ ಕ್ರಮ ಜರುಗಿಸಲಾಗಿದೆ. ಈ ಹಿಂದೆ, ಭೀಮನಗೌಡ ಬಿರಾದಾರ್ ಹತ್ಯೆಗೆ ಭೀಮಾತೀರದ ಮತ್ತೊಬ್ಬ ಕುಖ್ಯಾತ ಗ್ಯಾಂಗ್‌ಸ್ಟರ್‌ಗೆ ಸಂಬಂಧವಿರಬಹುದೆಂದು ಶಂಕೆ ವ್ಯಕ್ತವಾಗಿತ್ತು.

ಇತ್ತೀಚೆಗೆ ಕಾರಾಗೃಹದಿಂದ ಹೊರಬಂದಿದ್ದ ವಿಜಯಪುರದ ಮತ್ತೊಬ್ಬ ಅಪರಾಧಿ ಸಹ ಭೀಮನಗೌಡ ಹತ್ಯೆಯಲ್ಲಿ ಭಾಗಿಯಾಗಿರುವ ಬಗ್ಗೆ ಆಂತರಿಕ ಮಾಹಿತಿ ಇತ್ತು. ಈ ಎಲ್ಲಾ ಹಿನ್ನೆಲೆಯಲ್ಲಿ, ಪೊಲೀಸರು ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕಿತ್ತು ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಈ ಕೊಲೆಯ ಹಿಂದೆ ಇರುವ ದೊಡ್ಡ ಮಟ್ಟದ ಪಿತೂರಿಯನ್ನು ಭೇದಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌