ವಿವಿಧ ಸಮುದಾಯಗಳ ಮೀಸಲಾತಿ ಹೋರಾಟದ ಹೊತ್ತಲ್ಲೇ ಸಿಎಂಗೆ ಮತ್ತೊಂದು ಬಿಗ್ ಶಾಕ್

Published : Feb 17, 2021, 06:56 PM ISTUpdated : Feb 17, 2021, 07:06 PM IST
ವಿವಿಧ ಸಮುದಾಯಗಳ ಮೀಸಲಾತಿ ಹೋರಾಟದ ಹೊತ್ತಲ್ಲೇ ಸಿಎಂಗೆ ಮತ್ತೊಂದು ಬಿಗ್ ಶಾಕ್

ಸಾರಾಂಶ

ರಾಜ್ಯದಲ್ಲಿ ಪ್ರಮುಖ ಮೂರು ಸಮುದಾಯಗಳು ಮೀಸಲಾತಿಗಾಗಿ ಹೋರಾಟ ಮಾಡುತ್ತಿವೆ. ಇದರ ಮಧ್ಯೆ ಮತ್ತೊಂದು ಸಮುದಾಯ ಧ್ವನಿ ಎತ್ತಿದ್ದು, ಬಿಎಸ್‌ವೈಗೆ ಸಂಕಷ್ಟಕ್ಕೆ ಸಿಲುಕಿಸಿದೆ.

ಬೆಂಗಳೂರು, (ಫೆ.17): ರಾಜ್ಯದಲ್ಲಿ ಮೀಸಲಾತಿ ವಿಚಾರವಾಗಿ ಸಮುದಾಯಗಳಿಂದ ಹೋರಾಟಗಳು ನಡೆದಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆಯ ಹೆಜ್ಜೆಗಳನ್ನು ಇಡುತ್ತಿದ್ದಾರೆ.

2A ನೀಡುವಂತೆ ಪಂಚಮಸಾಲಿ, ST ಮೀಸಲಾತಿಗಾಗಿ ಕುರುಬರು, ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಆಗ್ರಹಿಸಿ ವಾಲ್ಮೀಕಿ ಸಮುದಾಯ ಬೇಡಿಕೆ ಇಟ್ಟಿವೆ. ಇದರಿಂದ ಏನು ಮಾಡಬೇಕೆನ್ನುವುದು ಸಿಎಂ ಬಿಎಸ್ ಯಡಿಯೂರಪ್ಪನವರಿಗೆ ತಲೆನೋವಾಗಿದೆ. ಇದರ ಮಧ್ಯೆ ಒಕ್ಕಲಿಗ ಸಮುದಾಯದಿಂದಲೂ ಮೀಸಲಾತಿಗೆ ಆಗ್ರಹ ಕೇಳಿಬಂದಿದೆ.

ಮೀಸಲಾತಿಗಾಗಿ ಹೋರಾಟ: ಸಮುದಾಯ, ಸ್ವಾಮೀಜಿಗಳಿಗೆ ಹೊಸ ಭರವಸೆ ಕೊಟ್ಟ ಸಿಎಂ

ಹೌದು...ಒಕ್ಕಲಿಗ ಸಮುದಾಯದ ಮೀಸಲಾತಿ ಪರವಾಗಿ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಧ್ವನಿ ಎತ್ತಿದ್ದು,  ಒಕ್ಕಲಿಗರ ಹಿತರಕ್ಷಣೆಗೆ ಮೀಸಲಾತಿ ಅನಿವಾರ್ಯವಾಗಿದೆ. ಒಕ್ಕಲಿಗರ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಬೇಕು ಎಂದು ನಿರ್ಮಲಾನಂದ ಶ್ರೀಗಳು ಒತ್ತಾಯಿಸಿದ್ದಾರೆ.

115 ಉಪಜಾತಿಗಳನ್ನು ಓಬಿಸಿ ಪಟ್ಟಿಗೆ ಸೇರಿಸಬೇಕು. ಅನೇಕ ಉಪ ಜಾತಿಗೆ ಸರ್ಕಾರದ ಸೌಲಭ್ಯ ಸಿಕ್ಕಿಲ್ಲ ಎಂದು ಶೀಗಳು ಒಕ್ಕಲಿಗ ಸಮುದಾಯದ ಮೀಸಲಾತಿ ಪರವಾಗಿ ಧ್ವನಿ ಎತ್ತಿದ್ದಾರೆ. ಇದು ಬಿಎಸ್‌ವೈ ಸರ್ಕಾರಕ್ಕೆ ಮತ್ತಷ್ಟು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್