ಮಡಿಕೇರಿ-ವಿರಾಜಪೇಟೆ ರಸ್ತೆ: ರಾಷ್ಟ್ರೀಯ ಹೆದ್ದಾರಿಯಾಗಿ ಮಾರ್ಪಡಿಸಲು ಗಡ್ಕರಿ ಒಪ್ಪಿಗೆ

Published : Jun 13, 2022, 05:00 AM IST
ಮಡಿಕೇರಿ-ವಿರಾಜಪೇಟೆ ರಸ್ತೆ: ರಾಷ್ಟ್ರೀಯ ಹೆದ್ದಾರಿಯಾಗಿ ಮಾರ್ಪಡಿಸಲು ಗಡ್ಕರಿ ಒಪ್ಪಿಗೆ

ಸಾರಾಂಶ

ನಗರದ ಹೊರವಲಯದ ರೆಸಾರ್ಚ್‌ ಒಂದರಲ್ಲಿ ತಂಗಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್‌ ಗಡ್ಕರಿ ಅವರನ್ನು ಕೊಡಗಿನ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್‌ ಮತ್ತು ಕೆ.ಜಿ.ಬೋಪಯ್ಯ ಅವರು ಪ್ರತ್ಯೇಕವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ಕೊಡಗಿನ ರಸ್ತೆಗಳ ಅಭಿವೃದ್ಧಿ ಸಂಬಂಧ ಮನವಿ ಸಲ್ಲಿಸಿದರು.

ಮಡಿಕೇರಿ (ಜೂ.13): ನಗರದ ಹೊರವಲಯದ ರೆಸಾರ್ಚ್‌ ಒಂದರಲ್ಲಿ ತಂಗಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್‌ ಗಡ್ಕರಿ ಅವರನ್ನು ಕೊಡಗಿನ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್‌ ಮತ್ತು ಕೆ.ಜಿ.ಬೋಪಯ್ಯ ಅವರು ಪ್ರತ್ಯೇಕವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ಕೊಡಗಿನ ರಸ್ತೆಗಳ ಅಭಿವೃದ್ಧಿ ಸಂಬಂಧ ಮನವಿ ಸಲ್ಲಿಸಿದರು.

ಚೆನ್ನರಾಯಪಟ್ಟಣ- ಸೋಮವಾರಪೇಟೆ- ಮಡಿಕೇರಿ ವಿರಾಜಪೇಟೆ ರಸ್ತೆಯನ್ನು ಮೇಲ್ದರ್ಜೆಗೆ ಏರಿಸಿ ದ್ವಿಪಥ ರಸ್ತೆಯನ್ನಾಗಿ ಮಾರ್ಪಾಡು ಮಾಡುವಂತೆ ಶಾಸಕ ಅಪ್ಪಚ್ಚು ರಂಜನ್‌ ಸಲ್ಲಿಸಿದ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವರು, ಈ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗುವ ಮಾರ್ಪಡಿಸಲಾಗುವುದು ಎಂದು ತಿಳಿಸಿದರು. ಕೊಡಗು ಪ್ರವಾಸೋದ್ಯಮ ಜಿಲ್ಲೆಯಾಗಿ ಗುರುತಿಸಿಕೊಂಡಿರುವುದರಿಂದ ಪ್ರವಾಸೋದ್ಯಮದ ಅಭಿವೃದ್ಧಿಗಾಗಿ ಕೇಬಲ್‌ ಕಾರ್‌ ನೀಡಲು ಅವಕಾಶವಿದ್ದು, ಕೂಡಲೇ ಅಂದಾಜು ಪಟ್ಟಿಸಲ್ಲಿಸಿದಲ್ಲಿ ಕೇಬಲ್‌ ಕಾರು ಮಂಜೂರು ಮಾಡುವುದಾಗಿಯೂ ನಿತಿನ್‌ ಗಡ್ಕರಿ ಹೇಳಿದರು.

ಸಂಸದಗೆ ಗಡ್ಕರಿ ತೂಕ ಇಳಿಕೆ ಚಾಲೆಂಜ್: 15 ಕೇಜಿ ತೂಕ ಇಳಿಸಿ 15,000 ಕೋಟಿ ಕೇಳಿದ ಅನಿಲ್‌!

ಚನ್ನರಾಯಪಟ್ಟಣ-ವಿರಾಜಪೇಟೆ ಹೆದ್ದಾರಿ ಮೇಲ್ದರ್ಜೆಗೆ: ಚನ್ನರಾಯಪಟ್ಟಣ- ಮಡಿಕೇರಿ- ವಿರಾಜಪೇಟೆ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಭರವಸೆ ನೀಡಿದ್ದಾರೆ. ಮಡಿಕೇರಿ ಹೊರ ವಲಯದ ರೆಸಾರ್ಚ್‌ನಲ್ಲಿ ತಂಗಿರುವ ಸಚಿವರನ್ನು ಭೇಟಿ ಮಾಡಿದ ಮಡಿಕೇರಿ ಶಾಸಕ ಎಂ. ಪಿ. ಅಪ್ಪಚ್ಚುರಂಜನ್‌ ಅವರು ಈ ಸಂಬಂಧ ಮನವಿ ಸಲ್ಲಿಸಿದರು. 

ಚೆನ್ನರಾಯಪಟ್ಟಣ- ಸೋಮವಾರಪೇಟೆ- ಮಡಿಕೇರಿ ವಿರಾಜಪೇಟೆ ರಸ್ತೆಯನ್ನು ಮೇಲ್ದರ್ಜೆಗೆ ಏರಿಸಿ ದ್ವಿಪಥ ರಸ್ತೆಯನ್ನಾಗಿ ಮಾರ್ಪಾಡು ಮಾಡುವಂತೆ ಶಾಸಕರು ಸಲ್ಲಿಸಿದ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವರು, ಈ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗುವ ಮಾರ್ಪಡಿಸಲಾಗುವುದು ಎಂದು ತಿಳಿಸಿದರು. ಕೊಡಗು ಪ್ರವಾಸೋದ್ಯಮ ಜಿಲ್ಲೆಯಾಗಿ ಗುರುತಿಸಿಕೊಂಡಿರುವುದರಿಂದ ಪ್ರವಾಸೋದ್ಯಮದ ಅಭಿವೃದ್ಧಿಗಾಗಿ ಕೇಬಲ್‌ ಕಾರ್‌ ನೀಡಲು ಅವಕಾಶವಿದ್ದು, ಕೂಡಲೇ ಅಂದಾಜು ಪಟ್ಟಿಸಲ್ಲಿಸಿದಲ್ಲಿ ಕೇಬಲ್‌ ಕಾರು ಮಂಜೂರು ಮಾಡುವುದಾಗಿಯೂ ನಿತಿನ್‌ ಗಡ್ಕರಿ ಹೇಳಿದರು. 

ಜೈವಿಕ ಇಂಧನ ಬಳಕೆಗೆ ಹೆಚ್ಚಿನ ಆದ್ಯತೆ: ಕೇಂದ್ರ ಸಚಿವ ಗಡ್ಕರಿ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಖಾಸಗಿ ಭೇಟಿಯಾಗಿ ಕೊಡಗಿಗೆ ಜೂ.9ರಂದು ಆಗಮಿಸಿದ್ದರು. ಕುಶಾಲನಗರದ ಖಾಸಗಿ ರೆಸಾರ್ಚ್‌ಗೆ ಆಗಮಿಸಿದ ಕೇಂದ್ರ ಸಚಿವರನ್ನು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಆತ್ಮೀಯವಾಗಿ ಬರಮಾಡಿಕೊಂಡರು. ಸಚಿವರು ನಾಲ್ಕು ದಿನಗಳಿಂದ ತಮ್ಮ ಕುಟುಂಬದೊಂದಿಗೆ ಜಿಲ್ಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಕಳೆದ ಗುರುವಾರ ಪಾಲಿಬೆಟ್ಟಖಾಸಗಿ ರೆಸಾರ್ಚ್‌ನಲ್ಲಿ ವಾಸ್ತವ ಹೂಡಿದ್ದ ಅವರು, ಶುಕ್ರವಾರದಿಂದ ಮಡಿಕೇರಿಯ ಹೊರ ವಲಯದಲ್ಲಿನ ಖಾಸಗಿ ರೆಸಾರ್ಚ್‌ನಲ್ಲಿ ತಂಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ