ಈ ಹೆದ್ದಾರಿ ಕರ್ನಾಟಕದ ವಿಕಾಸಕ್ಕೆ ನಾಂದಿ; ಭೂಮಿ ನೀಡಿದ ರೈತರಿಗೆ 4 ಸಾವಿರ ಕೋಟಿ ರೂ. ಪರಿಹಾರ ನೀಡಿದ್ದೇವೆ: ನಿತಿನ್‌ ಗಡ್ಕರಿ

Published : Mar 12, 2023, 01:51 PM ISTUpdated : Mar 12, 2023, 02:57 PM IST
ಈ ಹೆದ್ದಾರಿ ಕರ್ನಾಟಕದ ವಿಕಾಸಕ್ಕೆ ನಾಂದಿ; ಭೂಮಿ ನೀಡಿದ ರೈತರಿಗೆ 4 ಸಾವಿರ ಕೋಟಿ ರೂ. ಪರಿಹಾರ ನೀಡಿದ್ದೇವೆ: ನಿತಿನ್‌ ಗಡ್ಕರಿ

ಸಾರಾಂಶ

ಒಂದು ಗಂಟೆಯಲ್ಲಿ ಈ ಹೆದ್ದಾರಿ ಮೂಲಕ ಬೆಂಗಳೂರು - ಮೈಸೂರು ಪ್ರಯಾಣ ಮಾಡಲು ಸಾಧ್ಯವಾಗುತ್ತದೆ. ಆರಂಭದಲ್ಲಿ ಈ ಹೆದ್ದಾರಿ ಮಾಡುವಾಗ ಅನೇಕ ಅಡಚಣೆ ಎದುರಾಯ್ತು. ಭೂಮಿ ಸ್ವಾಧೀನ ಪ್ರಕ್ರಿಯೆ ಸಹ ಆರಂಭದಲ್ಲಿ ಕಷ್ಟವಾಗಿತ್ತು ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ. 

ಮಂಡ್ಯ (ಮಾರ್ಚ್‌ 12, 2023): ಮಂಡ್ಯದ ಗೆಜ್ಜಲಗೆರೆಯ ಸಮಾವೇಶದಲ್ಲಿ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರು ಸಹ ಪ್ರಧಾನಿ ಮೋದಿಯೊಂದಿಗೆ ಭಾಗಿಯಾಗಿದ್ದಾರೆ. ಸಮಾವೇಶಕ್ಕೆ ತೆರಳುವ ಮುನ್ನ ಪ್ರಧಾನಿ ಮೋದಿ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಜತೆ ಇವರು ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್‌ವೇ ಕಾಮಗಾರಿಯ ಗ್ಯಾಲರಿಯನ್ನು ವೀಕ್ಷಣೆ ಮಾಡಿದ್ರು. ನಂತರ ಬೆಂಗಳೂರು - ಮೈಸೂರು ದಶಪಥ ಹೆದ್ದಾರಿ, ಮೈಸೂರು - ಕುಶಾಲನಗರ ಹೆದ್ದಾರಿ ಸೇರಿ ಅನೇಕ ಯೋಜನೆಗಳ ಲೋಕಾರ್ಪಣೆ, ಶಂಕುಸ್ಥಾಪನೆ ಕಾರ್ಯಕ್ರಮದ ವೇಳೆ ಪ್ರಧಾನಿ ಮೋದಿಗೂ ಮಾತನಾಡಿದ ನಿತಿನ್‌ ಗಡ್ಕರಿ, ಈ ಹೆದ್ದಾರಿ ಕರ್ನಾಟಕದ ವಿಕಾಸಕ್ಕೆ ನಾಂದಿ ಹಾಡಲಿದೆ. ಹಾಗೂ, ಪ್ರವಾಸೋದ್ಯಮಕ್ಕೆ ಈ ಹೆದ್ದಾರಿ ಅನುಕೂಲ ಮಾಡಿಕೊಡಲಿದೆ ಎಂದು ಭವಿಷ್ಯ ನುಡಿದರು.

ಅಲ್ಲದೆ, ಒಂದು ಗಂಟೆಯಲ್ಲಿ ಈ ಹೆದ್ದಾರಿ ಮೂಲಕ ಬೆಂಗಳೂರು - ಮೈಸೂರು (Bengaluru - Mysuru) ಪ್ರಯಾಣ ಮಾಡಲು ಸಾಧ್ಯವಾಗುತ್ತದೆ. ಆರಂಭದಲ್ಲಿ ಈ ಹೆದ್ದಾರಿ (Highway) ಮಾಡುವಾಗ ಅನೇಕ ಅಡಚಣೆ ಎದುರಾಯ್ತು. ಭೂಮಿ ಸ್ವಾಧೀನ ಪ್ರಕ್ರಿಯೆ (Land Acquisition Process) ಸಹ ಆರಂಭದಲ್ಲಿ ಕಷ್ಟವಾಗಿತ್ತು. ಆದರೆ, ರೈತರ ಜಮೀನನ್ನು (Land) ಪಡೆದರೂ ನಾಲ್ಕು ಸಾವಿರ ಕೋಟಿ ರೂ. ಯನ್ನು ಅವರಿಗೆ ಪರಿಹಾರವಾಗಿ ನೀಡಿದ್ದೇವೆ‌ ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ (Union Minister Nitin Gadkari) ಹೇಳಿದ್ದಾರೆ. 

ಇದನ್ನು ಓದಿ: ದಶಪಥ ಹೆದ್ದಾರಿ ಲೋಕಾರ್ಪಣೆಗೊಳಿಸಿದ ಮೋದಿ: ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಹೆಜ್ಜೆ ಹಾಕಿದ ನಮೋ

ಹಾಗೂ, ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್‌ವೇ ಯೋಜನೆಯಲ್ಲಿ ಆರಂಭದಲ್ಲಿ 7 ಅಂಡರ್‌ಪಾಸ್‌ ಮಾತ್ರ ಇತ್ತು. ಬಳಿಕ, ಇದನ್ನು ಬದಲಾಯಿಸಿ 89 ಅಂಡರ್ ಪಾಸ್ ಮಾಡಲಾಗಿದೆ. ಸ್ಥಳೀಯ ಜನರ ಬೇಡಿಕೆಗಳ ಆಧಾರದ ಮೇಲೆ ಹೆಚ್ಚಿಸಲಾಗಿದೆ. ಇನ್ನು, ಈ ಹೆದ್ದಾರಿಗಾಗಿ ಶ್ರಮಿಸಿದ ಎಲ್ಲಾ ಸಂಸದರಿಗೂ ಧನ್ಯವಾದಗಳು ಎಂದು ಸಹ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ. 

ಈ ಮಧ್ಯೆ, ಜಗತ್ತಿನಲ್ಲೇ ಗುರುತಿಸಿಕೊಂಡಿರುವ ಮೈಸೂರು ಭಾಗಕ್ಕೆ ಈ ಹೆದ್ದಾರಿ ಕೊಡುಗೆ ನೀಡಿದ್ದೇವೆ. ಪ್ರಧಾನಿ ಮೋದಿಗೆ ಧನ್ಯವಾದಗಳು. ಇಂದು ಐತಿಹಾಸಿಕ ದಿನ. ಸಾಂಸ್ಕೃತಿಕ ನಗರ ಮೈಸೂರು ಹಾಗೂ ಜಗತ್ತಿನ ಐಟಿ ರಾಜಧಾನಿ ಬೆಂಗಳೂರನ್ನು ಈ ರಸ್ತೆ ಸಂಪರ್ಕಿಸುತ್ತದೆ ಎಂದೂ ನಿತಿನ್‌ ಗಡ್ಕರಿ ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ್ದಾರೆ.

ಇದನ್ನೂ ಓದಿ: PM Modi In Karnataka: ಕೇಸರಿ ಹೂವಿನಲ್ಲೇ ಮುಳುಗಿದ ಮೋದಿ ಕಾರು, ಮಂಡ್ಯ ಪ್ರೀತಿಗೆ ನಮೋ ಎಂದ ಪಿಎಂ!

ಜತೆಗೆ,  ಬೆಂಗಳೂರು - ಚೆನ್ನೈ ಸೂರತ್ ಹೆದ್ದಾರಿ ಕಾಮಗಾರಿ ಸಹ ಡಿಸೆಂಬರ್‌ನಲ್ಲಿ ಮುಕ್ತಾಯ ಆಗಲಿದೆ ಎಂದೂ ನಿತಿನ್‌ ಗಡ್ಕರಿ ಹೇಳಿದ್ದಾರೆ. ಹಾಗೂ, ತಮ್ಮ ಭಾಷಣದಲ್ಲಿ ಬೆಂಗಳೂರು ಟ್ರಾಫಿಕ್‌ ಸಮಸ್ಯೆ ನಿವಾರಿಸುವ ಬಗ್ಗೆಯೂ ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಮಾತನಾಡಿದ್ದಾರೆ. 

ಇದನ್ನೂ ಓದಿ: PM Modi In Karnataka: 44 ವರ್ಷಗಳ ಬಳಿಕ ಮಂಡ್ಯಕ್ಕೆ ಪ್ರಧಾನಿ ಭೇಟಿ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ
ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ