ಉತ್ತರ ಕರ್ನಾಟಕ, ತುಮಕೂರು ಭಾಗದ ಪ್ರಯಾಣಿಕರಿಗೆ ಸಂಕಷ್ಟ, 8 ರೈಲುಗಳ ಸಂಚಾರ ರದ್ದು!

Published : Jun 25, 2024, 03:14 PM IST
ಉತ್ತರ ಕರ್ನಾಟಕ, ತುಮಕೂರು ಭಾಗದ ಪ್ರಯಾಣಿಕರಿಗೆ ಸಂಕಷ್ಟ, 8 ರೈಲುಗಳ ಸಂಚಾರ ರದ್ದು!

ಸಾರಾಂಶ

ನಿಟ್ಟೂರು-ಸಂಪಿಗೆ ರಸ್ತೆ ರೈಲ್ವೆ ನಿಲ್ದಾಣ ನಡುವಿನ ಲೇವಲ್‌ ಕ್ರಾಸಿಂಗ್‌ನಲ್ಲಿ ಗರ್ಡರ್‌ ಅಳವಡಿಕೆ ಸಂಬಂಧಿತ ಕಾಮಗಾರಿ ಹಿನ್ನೆಲೆಯಲ್ಲಿ ಜೂ.27ರಿಂದ ಜು.4ರವರೆಗೆ ಈ ಮಾರ್ಗದ 8 ರೈಲು ರದ್ದಾಗಲಿದೆ.

ಬೆಂಗಳೂರು (ಜೂ.25): ನಿಟ್ಟೂರು-ಸಂಪಿಗೆ ರಸ್ತೆ ರೈಲ್ವೆ ನಿಲ್ದಾಣ ನಡುವಿನ ಲೇವಲ್‌ ಕ್ರಾಸಿಂಗ್‌ನಲ್ಲಿ ಗರ್ಡರ್‌ ಅಳವಡಿಕೆ ಸಂಬಂಧಿತ ಕಾಮಗಾರಿ ಹಿನ್ನೆಲೆಯಲ್ಲಿ ಜೂ.27ರಿಂದ ಜು.4ರವರೆಗೆ ಈ ಮಾರ್ಗದ ಎಂಟು ರೈಲುಗಳ ಸಂಚಾರ ರದ್ದಾಗಿದ್ದು, ಐದು ರೈಲುಗಳನ್ನು ಭಾಗಶಃ ರದ್ದಾಗಲಿದೆ. ಇದರಿಂದ ಉತ್ತರ ಕರ್ನಾಟಕ, ತುಮಕೂರು ಭಾಗದ ಪ್ರಯಾಣಿಕರ ಪರದಾಟ ಅನಿವಾರ್ಯಯವಾಗಿದೆ.

ರೈಲು ಪ್ರಯಾಣಿಕರಿಗೆ ಸಂತಸದ ಸುದ್ದಿ, ವಂದೇ ಭಾರತ ರೈಲು ಬೆಳಗಾವಿಗೆ ವಿಸ್ತರಿಸಲು ಚರ್ಚೆ

ತುಮಕೂರು-ಚಾಮರಾಜನಗರ (07346), ಚಾಮರಾಜನಗರ-ಮೈಸೂರು (07328), ಚಾಮರಾಜನಗರ-ಯಶವಂತಪುರ (16239), ಯಶವಂತಪುರ-ಚಾಮರಾಜನಗರ (16240), ತುಮಕೂರು-ಕೆಎಸ್‌ಆರ್ ಬೆಂಗಳೂರು (06576), ಕೆಎಸ್‌ಆರ್ ಬೆಂಗಳೂರು-ತುಮಕೂರು (06575), ಯಶವಂತಪುರ-ಶಿವಮೊಗ್ಗ (16579), ಶಿವಮೊಗ್ಗ-ಯಶವಂತಪುರ (16580) ರೈಲುಗಳನ್ನು ರದ್ದು ಮಾಡಲಾಗಿದೆ.

ಭಾಗಶಃ ರದ್ದು: ಇನ್ನು ಕೆಎಸ್‌ಆರ್ ಬೆಂಗಳೂರು-ತುಮಕೂರು-ಕೆಎಸ್‌ಆ‌ರ್ ಬೆಂಗಳೂರು (06571) ರೈಲುಗಳನ್ನು ಹಿರೇಹಳ್ಳಿ-ತುಮಕೂರು ನಡುವೆ ಭಾಗಶಃ ರದ್ದುಗೊಳಿಸಲಾಗಿದೆ. ತಾಳಗುಪ್ಪ-ಕೆಎಸ್‌ಆರ್ ಬೆಂಗಳೂರು ರೈಲು (06572) , ತಾಳಗುಪ್ಪ ಕೆಎಸ್‌ಆರ್‌ ಬೆಂಗಳೂರು (20652), ಕೆಎಸ್‌ಆರ್ ಬೆಂಗಳೂರು-ಧಾರವಾಡ (ಇಂಟರ್‌ಸಿಟಿ) (12725/6), ರೈಲುಗಳು ಅರಸೀಕರೆ-ಬೆಂಗಳೂರು ನಡುವೆ ಭಾಗಶಃ ರದ್ದು ಮಾಡಲಾಗಿದೆ.

ಕೊಲೆ ಆರೋಪಿ ಪವಿತ್ರಾ ಗೌಡಗೆ ಮೇಕಪ್ ಮಾಡಿಕೊಳ್ಳಲು ಅವಕಾಶ ಕೊಟ್ಟ ಎಸ್‌ಐ ನೇತ್ರಾವತಿಗೆ ನೋಟಿಸ್

ಮಾರ್ಗ ಬದಲು: ವಾಸ್ಕೊಡ ಗಾಮ-ಯಶವಂತಪುರ ರೈಲು (17310), ಮೈಸೂರು- ವಾರಾಣಸಿ (22687), ಯಶವಂತಪುರ-ಜೈಪುರ (82653), ವಿಶ್ವಮಾನವ ಮೈಸೂರು-ಬೆಳಗಾವಿ (17326) ರೈಲು ಅರಸಿಕೆರೆ, ಹಾಸನ, ನೆಲಮಂಗಲ ಮೂಲಕ ಯಶವಂತಪುರಕ್ಕೆ ಬರಲಿವೆ. ಮೈಸೂರು-ಉದಯಪುರ ರೈಲು (19668) ಎಸ್‌ಆ‌ರ್ ಬೆಂಗಳೂರು, ಯಶವಂತಪುರ, ನೆಲಮಂಗಲ, ಹಾಸನ, ಅರಸಿಕೆರೆ, ದಾವಣಗೆರೆಗೆ ತೆರಳಲಿದೆ.

ಬಿಕಾನೀರ್‌-ಯಶವಂತಪುರ ರೈಲು ಜೂ.25ರಿಂದ ಜು.2ರವರೆಗೆ ಸುಮಾರು 2.30ಗಂಟೆ ತಡವಾಗಿ ಸಂಚರಿಸಲಿದೆ. ಉಳಿದಂತೆ ಯಶವಂತಪುರ- ಎಚ್. ನಿಜಾಮುದ್ದೀನ್, ಕೆಎಸ್‌ಆರ್ ಬೆಂಗಳೂರು-ತಾಳಗುಪ್ಪ, ಬೆಳಗಾವಿ-ಮೈಸೂರು, ಚಾಮರಾಜನಗರ-ತುಮಕೂರು, ಯಶವಂತಪುರ-ವಾಸ್ಕೊ ಡ ಗಾಮ, ತುಮಕೂರು-ಶಿವಮೊಗ್ಗ ರೈಲುಗಳ ಸಮಯವನ್ನು 10-55ನಿಮಿಷದವರೆಗೆ ನಿಯಂತ್ರಣ ಆಗಲಿದೆ.

ಇನ್ನು, ಯಶವಂತಪುರ - ವಾಸ್ಕೋಡಿ ಗಾಮ (17309) ರೈಲು 60 ನಿಮಿಷ ವಿಳಂಬವಾಗಲಿದೆ. ತುಮಕೂರು - ಶಿವಮೊಗ್ಗ ನಗರ (06513) ಸುಮಾರು ಒಂದೂವರೆ ಗಂಟೆ ವಿಳಂಬವಾಗಿ ಸಂಚರಿಸಲಿದೆ ಎಂದು ನೈಋತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಅಧಿಕಾರಿ ಮಂಜುನಾಥ್ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಉಳಿ ಪೆಟ್ಟು ಬಿದ್ದಾಗಲಷ್ಟೇ ಶಿಲೆಆಗುತ್ತದೆ ಕಲ್ಲು: ಡಿಕೆ ಹಿತನುಡಿ
ಬೆಂಗಳೂರು ನಗರದಲ್ಲಿ ಮತ್ತೆ 150 ಇಂಡಿಗೋ ವಿಮಾನಗಳ ಸಂಚಾರ ರದ್ದು