ಕರ್ನಾಟಕ ಮತ್ತೆ ಲಾಕ್‌ಡೌನ್ ಆಗುತ್ತಾ? ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಸಚಿವ ಸುಧಾಕರ್

Published : Jun 14, 2020, 03:16 PM ISTUpdated : Jun 14, 2020, 04:33 PM IST
ಕರ್ನಾಟಕ ಮತ್ತೆ ಲಾಕ್‌ಡೌನ್ ಆಗುತ್ತಾ? ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಸಚಿವ ಸುಧಾಕರ್

ಸಾರಾಂಶ

ಕೊರೋನಾ ವೈರಸ್ ಮಾಹಾಮಾರಿ ದಿನದಿಂದ ದಿನಕ್ಕ ಏರುತ್ತಿರುವುದರಿಮದ ಮತ್ತೆ ಲಾಕ್‌ಡೌನ್ ಆಗುತ್ತಾ ಎನ್ನುವ ಸುದ್ದಿ ಹಬ್ಬಿದ್ದು, ಇದಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ಕಲಬುರಗಿ, (ಜೂನ್.14): ಕರ್ನಾಟಕ ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ವಿಧಿಸುವ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಜೂನ್ 14 ರ ಭಾನುವಾರ ಬೆಳಿಗ್ಗೆ ಕಲಬುರಗಿ ನಗರದ ದ ಜಿಮ್ಸ್ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಸಚಿವ  ಡಾ.ಸುಧಾಕರ್, "ಪ್ರಧಾನಿ ನರೇಂದ್ರ ಮೋದಿ ಅವರು ಈ ಕುರಿತು ಮುಖ್ಯಮಂತ್ರಿ ಬಿ ಎಸ್ ಯಡಿಯುರಪ್ಪ ಅವರೊಂದಿಗೆ ಮಾತನಾಡಲಿದ್ದಾರೆ" ಎಂದು ಹೇಳಿದರು.

ಮತ್ತೆ ಲಾಕ್‌ಡೌನ್‌ ಮಾಡಲು ಪ್ರಧಾನಿ ಮೋದಿ ಚಿಂತಿಸಿದ್ದಾರಾ? 

"ಕ್ವಾರಂಟೈನ್ ಕೇಂದ್ರಗಳಲ್ಲಿ ಮೂಲಸೌಕರ್ಯಗಳ ಕೊರತೆಯಿಲ್ಲ. ಎಲ್ಲಾ ವ್ಯವಸ್ಥೆಗಳನ್ನು ಮಾರ್ಗಸೂಚಿಗಳ ಪ್ರಕಾರ ಮಾಡಲಾಗುತ್ತದೆ" ಎಂದು ಅವರು ಹೇಳಿದರು. ಶಂಕಿತ ಜನರ ಗಂಟಲು ದ್ರವದ ಮಾದರಿಯ ವರದಿ ಬರುವ ಮುನ್ನವೇ ಜನರನ್ನು ತಮ್ಮ ಮನೆಗಳಿಗೆ ಕಳುಹಿಸುವ ವ್ಯವಸ್ಥೆಯನ್ನು ಅವರು ಸಮರ್ಥಿಸಿಕೊಂಡರು.

ವ್ಯಕ್ತಿಯು ಯಾವುದೇ ರೋಗ ಲಕ್ಷಣಗಳನ್ನು ಹೊಂದುವುದಿಲ್ಲದಿದ್ದರೆ ಸಾಂಕ್ರಾಮಿಕ ರೋಗ ಕೊರೋನಾ ಹರಡುವ ಸಾಧ್ಯತೆಗಳು ಕಡಿಮೆ ಎಂದು ಡಬ್ಲ್ಯುಎಚ್‌ಒ ಸ್ಪಷ್ಟಪಡಿಸಿದೆ ಎಂದು ಸಚಿವರು ಹೇಳಿದರು.

ಈಗ, ಮಹಾರಾಷ್ಟ್ರ ಮತ್ತು ವಿದೇಶಗಳಿಂದ ಆಗಮಿಸುವವರನ್ನು ಮಾತ್ರ ಕ್ವಾರಂಟೈನ್ ಗೆ ಒಳಪಡಿಸಲಾಗುತ್ತಿದೆ ಎಂದು ಡಾ.ಸುಧಾಕರ್ ಮಾಹಿತಿ ನೀಡಿದರು.

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ