
ಬೆಂಗಳೂರು(ಜೂ.20): ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಸ್ಪಿಪಿ (ಸರ್ಕಾರಿ ವಿಶೇಷ ಅಭಿಯೋ ಜಕ) ಅವರನ್ನು ಬದಲಾವಣೆ ಮಾಡಲು ಯಾವ ಸಚಿವರು, ಶಾಸಕರೂ ಒತ್ತಡ ಹಾಕಿಲ್ಲ. ಒತ್ತಡ ಹಾಕಿದರೆ ಕೇಳುವುದೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
'ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ವಿಶೇಷ ಅಭಿಯೋಜಕರನ್ನು ಬದಲಾಯಿಸಲು ಸಚಿವರು ಒತ್ತಡ ಹಾಕುತ್ತಿದ್ದಾರೆಯೇ' ಎಂದು ಸುದ್ದಿಗಾರರು ಪ್ರಶ್ನಿಸಿದಾಗ, ಇದಕ್ಕೆ ಉತ್ತರಿಸಿದ ಅವರು, 'ಎಸ್ಪಿಸಿ ಬದಲಾಯಿಸಲು ಯಾವ ಸಚಿವರು, ಶಾಸಕರೂ ಒತ್ತಡ ಹಾಕಿಲ್ಲ. ಒತ್ತಡ ಹಾಕಿದರೆ ಕೇಳೋದು ಇಲ್ಲ' ಎಂದರು. ಎಸ್ಪಿಸಿ ಬದಲಾವಣೆ ಮಾಡಲಾಗುವುದು ಎಂದು ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವುದು ಸುಳ್ಳು ಹಾಗೂ ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಎಂದು ಹೇಳಿದರು.
ದರ್ಶನ್ ಕೇಸ್ ದಾರಿ ತಪ್ಪಿಸಲು ನಡೆದಿದ್ಯಾ ಷಡ್ಯಂತ್ರ, ಖಡಕ್ ಎಸ್ಪಿಪಿ ಬದಲಾವಣೆಗೆ ಸಿಎಂ ಮೇಲೆ ಹೆಚ್ಚಿದ ಒತ್ತಡ!
ಏನಿದು ವಿವಾದ?
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸರ್ಕಾರಿ ವಿಶೇಷ ಅಭಿಯೋಜಕ (ಎಸ್ಪಿಪಿ) ರಾಗಿರುವ ಪಿ.ಪ್ರಸನ್ನಕುಮಾರ್ ಸಮರ್ಥವಾಗಿ ವಾದ ಮಂಡಿಸುತ್ತಿದ್ದು, ಇದರಿಂದ ಆತಂಕಕ್ಕೆ ಒಳಗಾದ ನಟ ದರ್ಶನ್ಗೆ ಆಪ್ತರಾದ ಕೆಲ ಸಚಿವರು ಎಸ್ಪಿಸಿ ಬದಲಾಯಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು.
ಎಸ್ಪಿಪಿ ಪ್ರಸನ್ನಕುಮಾರ್ ಅವರು ಹಿರಿಯ ವಕೀಲರಾಗಿದ್ದು ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಿದ್ದಾರೆ. ಆರೋಪಿಗಳಿಗೆ ಶಿಕ್ಷೆ ಆಗುವಂತೆ ನೋಡಿಕೊಳ್ಳುತ್ತಾರೆ ಎಂಬ ವರದಿ ಗಳ ಹಿನ್ನೆಲೆಯಲ್ಲಿ ದರ್ಶನ್ಗೆ ಆಪ್ತರಾಗಿರುವ ಕೆಲ ಸಚಿವರು ಆತಂಕಗೊಂಡಿದ್ದಾರೆ. ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹೇರಿ ಎಸ್ಪಿಪಿ ಬದಲಾವಣೆಗೆ ಪಟ್ಟು ಹಿಡಿದಿದ್ದಾರೆ ಎನ್ನಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ