ರಾಜ್ಯ ವಿಧಾನಸಭೆ ಚುನಾವಣೆಗೆ ಡೇಟ್‌ ಫಿಕ್ಸ್‌: ಇಂದಿನ ಸಿಎಂ ಕಾರ್ಯಕ್ರಮ ರದ್ದಾಗುತ್ತಾ?

Published : Mar 29, 2023, 09:47 AM ISTUpdated : Mar 29, 2023, 10:12 AM IST
ರಾಜ್ಯ ವಿಧಾನಸಭೆ ಚುನಾವಣೆಗೆ ಡೇಟ್‌ ಫಿಕ್ಸ್‌: ಇಂದಿನ ಸಿಎಂ ಕಾರ್ಯಕ್ರಮ ರದ್ದಾಗುತ್ತಾ?

ಸಾರಾಂಶ

ಸಿಎಂ ಬೊಮ್ಮಯಿ ಅವರು ಇಂದು(ಬುಧವಾರ) ಕೊಪ್ಪಳ ಹಾಗೂ ಹಾವೇರಿ ಜಿಲ್ಲೆಯ ಶಿಗ್ಗಾಂವ್‌ಗೆ ತೆರಳಬೇಕಿತ್ತು.  ಇಂದು ಚುನಾವಣಾ ಘೋಷಣೆ ಬಳಿಕ ನೀತಿ ಸಂಹಿತೆ ಜಾರಿಯಾಗುವುದರಿಂದ ಸಿಎಂ ಜಿಲ್ಲಾ ಪ್ರವಾಸ ರದ್ದು ಪಡಿಸಲಾಗಿದೆ. 

ಬೆಂಗಳೂರು(ಮಾ.29): ರಾಜ್ಯ ವಿಧಾನಸಭೆ ಚುನಾವಣೆ ಕುರಿತು ಇಂದು ಚುನಾವಣೆ ಆಯೋಗದ ಪತ್ರಿಕಾಗೋಷ್ಠಿ ಇರುವ ಹಿನ್ನಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದಾಗಿವೆ. ಸಿಎಂ ಬೊಮ್ಮಯಿ ಅವರು ಇಂದು(ಬುಧವಾರ) ಕೊಪ್ಪಳ ಹಾಗೂ ಹಾವೇರಿ ಜಿಲ್ಲೆಯ ಶಿಗ್ಗಾಂವ್‌ಗೆ ತೆರಳಬೇಕಿತ್ತು. ಇಂದು ಚುನಾವಣಾ ಘೋಷಣೆ ಬಳಿಕ ನೀತಿ ಸಂಹಿತೆ ಜಾರಿಯಾಗುವುದರಿಂದ ಸಿಎಂ ಜಿಲ್ಲಾ ಪ್ರವಾಸ ರದ್ದು ಪಡಿಸಲಾಗಿದೆ. 

ಕರ್ನಾಟಕ ಚುನಾವಣಾ ಘೋಷಣೆ ಹಿನ್ನೆಲೆ: ಸರ್ಕಾರಿ ಆಡಳಿತ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ

ನೀತಿ ಸಂಹಿತೆ ಜಾರಿಯಾದ್ರೂ ಸಿಎಂಗೆ ಕೆಲವೊಂದು ಸವಲತ್ತುಗಲು ಮುಂದುವರೆಯುತ್ತವೆ. ಆದರೆ ಆದೇಶ ಮಾಡುವ, ಸಹಿ ಹಾಕುವ, ಸರ್ಕಾರಿ ಕಾರ್ಯಕ್ರಮಗಳನ್ನ ಕರೆಯುವ, ಭಾಗವಹಿಸುವ ಅಧಿಕಾರ ಇರಲ್ಲ. ಸಿಎಂ ಸರ್ಕಾರಿ ಕಾರನ್ನು ತಮ್ಮ ಕಚೇರಿ, ವಿಧಾನಸೌಧ ಬಳಸಬಹುದು. ಜಿಲ್ಲಾ ಪ್ರವಾಸ, ಪ್ರಚಾರಗಳಿಗೆ ಸರ್ಕಾರಿ ವಾಹನ ಬಳಕೆ ಮಾಡುವಂತಿಲ್ಲ. ಉಳಿದಂತೆ ಸಿಎಂಗೆ ಇರುವ ಭದ್ರತೆ ಮತ್ತು ಸಿಎಂಗೆ ನಿಯೋಜಿಸಿರುವ ಸಿಬ್ಬಂದಿಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. 

ಇಂದು ಚುನಾವಣಾ ದಿನಾಂಕ ಘೋಷಣೆಯಾಗುವುದರಿಂದ ಇಂದಿನಿಂದಲೇ(ಮಾ.29) ಚುನಾವಣೆ ನೀತಿ ಸಂಹಿತೆ ಜಾರಿ ಜಾರಿಯಾಗಲಿದೆ. ಹೀಗಾಗಿ ಸಚಿವರುಗಳ ಸುದ್ದಿಗೊಷ್ಠಿಯ ಸಮಯ ಬದಲಾವಣೆಯಾಗಿದೆ. 
ಸಚಿವ ಆರ್. ಅಶೋಕ್ ಮತ್ತು ಸೋಮಣ್ಣ ಸುದ್ದಿಗೊಷ್ಠಿಯ ಸಮಯ ಬದಲಾವಣೆಯಾಗಿದೆ. ವಸತಿ ಸಚಿವ ವಿ. ಸೋಮಣ್ಣ  10.30ಕ್ಕೆ ಸುದ್ದಿಗೋಷ್ಠಿ ನಡೆಸಲಿದ್ದು, ಕಂದಾಯ ಸಚಿವ ಆರ್. ಅಶೋಕ್ 10.45ಕ್ಕೆ ಸುದ್ದಿಗೊಷ್ಠಿ ನಡೆಸಲಿದ್ದಾರೆ. ವಿಧಾನಸೌಧದಲ್ಲಿ ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಉಭಯ ಸಚಿವರುಗಳು ಸುದ್ದಿಗೊಷ್ಠಿ ನಡೆಸಲಿದ್ದಾರೆ. 

ತರಾತುರಿಯಲ್ಲಿ ಕೊಪ್ಪಳಕ್ಕೆ ಹೊರಟ ಸಚಿವ ಕಾರಜೋಳ

ವಿಜಯಪುರ: ಇಂದು ಚುನಾವಣಾ ಆಯೋಗದದಿಂದ ಸುದ್ದಿಗೋಷ್ಠಿ ನಿಗಧಿಯಾದ ಹಿನ್ನೆಲೆಯಲ್ಲಿ ಸಚಿವ ಗೋವಿಂದ ಕಾರಜೋಳ ಅವರು ತರಾತುರಿಯಲ್ಲಿ ಕೊಪ್ಪಳಕ್ಕೆ ಹೊರಟಿದ್ದಾರೆ. 

ಚುನಾವಣಾ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಚಿವ ಕಾರಜೋಳ ವಿಜಯಪುರ ನಗರದಲ್ಲಿ ಕೆಬಿಜೆಎನ್‌ಎಲ್ ವಾಹನಗಳ ಹಂಚಿಕೆ ಮಾಡಿದ್ದಾರೆ. ತರಾತುರಿಯಲ್ಲಿ ವಾಹನ ಪೂಜೆ ಮಾಡಿ ವಾಹನಗಳನ್ನ ಹಂಚಿಕೆ ಮಾಡಿದ್ದಾರೆ. ಬಳಿಕ ಅವಸರದಲ್ಲೇ ಸಚಿವ ಕಾರಜೋಳ ಅವರು ಕೊಪ್ಪಳಕ್ಕೆ ತೆರಳಿದ್ದಾರೆ. ಯಲಬುರ್ಗಾದಲ್ಲಿ ಕೆರೆ ತುಂಬುವ ಯೋಜನೆಗೆ ಸಚಿವ ಗೋವಿಂದ ಕಾರಜೋಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇಂದು ಬೆಳಿಗ್ಗೆ 11.30ರ ಒಳಗೆ ಶಂಕುಸ್ಥಾಪನೆ ನೆರವೇರಿಸಬೇಕು ಎಂದು ಅರ್ಜಂಟಲ್ಲೇ ಕಾರಜೋಳ ಹೊರಡಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: BBK 12 - ಕಿಚ್ಚ ಸುದೀಪ್‌ ಮುಂದೆ ರೇಷ್ಮೆ ಶಾಲಿನಲ್ಲಿ ಹೊಡೆದಂತೆ ಸತ್ಯದರ್ಶನ ಮಾಡಿಸಿದ ಗಿಲ್ಲಿ ನಟ