ಮಹದಾಯಿ ವಿಚಾರದಲ್ಲಿ ಕರ್ನಾಟಕದ ಜೊತೆಗೆ ಯಾವುದೇ ರಾಜಿ ಇಲ್ಲ ಎಂದು ಗೋವಾ ಮುಖ್ಯಮಂತ್ರಿ ಹೇಳಿದ್ದಾರೆ
ಪಣಜಿ (ಅ.08): ‘ಕರ್ನಾಟಕದ ಜತೆಗಿನ ಮಹದಾಯಿ ವಿಚಾರದಲ್ಲಿ ಗೋವಾ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವುದಿಲ್ಲ’ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಪುನರುಚ್ಚರಿಸಿದ್ದಾರೆ.
ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಈ ವಿಷಯದಲ್ಲಿ ಸರ್ಕಾರ ಸರಿದಾರಿಯಲ್ಲಿದೆ ಹಾಗೂ ನಿಲುವು ಸ್ಪಷ್ಟವಾಗಿದೆ. ನಮ್ಮ ವಾದದಲ್ಲಿ ಬಲ ಇದೆ. ಕರ್ನಾಟಕದ ವಿರುದ್ಧ ಮಹದಾಯಿ ತಿರುವು ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ನ್ಯಾಯಾಂಗ ನಿಂದನೆ ದಾವೆ ದಾಖಲಿಸಿದ್ದೇವೆ. ಕೋರ್ಟಲ್ಲಿ ಹೋರಾಟ ಮುಂದುವರಿಸುತ್ತೇವೆ.
ಮಹದಾಯಿ ವಿವಾದ: ಗೋವಾದಿಂದ ಮತ್ತೆ ಶುರುವಾಯ್ತು ಕಿರಿಕ್
ಈ ವಿಚಾರದಲ್ಲಿ ರಾಜಿ ಇಲ್ಲ’ ಎಂದರು. ‘ಮಹದಾಯಿ ಐತೀರ್ಪನ್ನು ಪ್ರಶ್ನಿಸಿ ಗೋವಾ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಆದರೂ ಕರ್ನಾಟಕವು ಮಹದಾಯಿ ನದಿಗೆ ತಿರುವು ಕೊಟ್ಟಿದೆ. ಇದು ನ್ಯಾಯಾಂಗ ನಿಂದನೆ’ ಎಂದು ಮಂಗಳವಾರ ಸುಪ್ರೀಂ ಕೋರ್ಟ್ನಲ್ಲಿ ಗೋವಾ ಸರ್ಕಾರ ನ್ಯಾಯಾಂಗ ನಿಂದನೆ ದಾವೆ ಹೂಡಿತ್ತು.