ಕರ್ನಾಟಕದ 2200 ಹಳ್ಳಿಗಳಲ್ಲಿ ಕುಡಿಯುವ ನೀರಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

Published : May 19, 2024, 10:56 AM IST
ಕರ್ನಾಟಕದ 2200 ಹಳ್ಳಿಗಳಲ್ಲಿ ಕುಡಿಯುವ ನೀರಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಸಾರಾಂಶ

ಮಳೆಯಾಗುತ್ತಿದ್ದರೂ ಬರ | 548 ಗ್ರಾಮಕ್ಕೆ ಟ್ಯಾಂಕರ್‌ನಲ್ಲಿ ನೀರು: ಸಚಿವ ಪ್ರಿಯಾಂಕ್, 2098 ಹಳ್ಳಿಗೆ ನೀರು ಪೂರೈಸಲು ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಪಡೆದ ಸರ್ಕಾರ

ಬೆಂಗಳೂರು(ಮೇ.19): ರಾಜ್ಯದಲ್ಲಿ ಬರ ಪರಿಸ್ಥಿತಿಯ ಪರಿಣಾಮ 158 ತಾಲೂಕುಗಳಲ್ಲಿನ 2,207 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿದ್ದು, ಎಲ್ಲ ಗ್ರಾಮಗಳಿಗೂ ಆದ್ಯತೆ ಮೇರೆಗೆ ಕುಡಿಯುವ ನೀರು ಪೂರೈಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿನ 158 ತಾಲೂಕುಗಳಲ್ಲಿರುವ 26,106 ಗ್ರಾಮಗಳ ಪೈಕಿ 2,207 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿದೆ. ಅದರಲ್ಲಿ 548 ಗ್ರಾಮಗಳಿಗೆ 846 ಟ್ಯಾಂಕರ್‌ಗಳ ಮೂಲಕ ಹಾಗೂ 1,659 ಗ್ರಾಮಗಳಿಗೆ 2,098 ಖಾಸಗಿ ಬೋರ್‌ವೆಲ್ ಗಳನ್ನು ಬಾಡಿಗೆ ಆಧಾರದಲ್ಲಿ ಪಡೆದು ಅದರಿಂದ ನೀರು ಪೂರೈಸಲಾಗುತ್ತಿದೆ. ಅದರ ಜತೆಗೆ ಉಳಿದ ಗ್ರಾಮಗಳ ಮೇಲೂ ನಿಗಾ ವಹಿಸಲಾಗಿದ್ದು, ಅಗತ್ಯವಿದ್ದರೆ ಆ ಗ್ರಾಮಗಳಿಗೂ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳುತ್ತೇವೆ ಎಂದರು. 

ಕೋಲಾರ ಜಿಲ್ಲೆಯಲ್ಲಿ ಬತ್ತಿದ ಕೆರೆಗಳು, ನೀರಿಗೆ ತತ್ವಾರ..!

ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಗ್ಗಿಸಲು ರಾಜ್ಯ ವಿಪತ್ತು ನಿರ್ವಹಣಾ ನಿಧಿ ಅಡಿಯಲ್ಲಿ ಲಭ್ಯವಿರುವ ಅನುದಾನವನ್ನು ಮೊದಲ ಆದ್ಯತೆಯಲ್ಲಿ ಬಳಸಿಕೊಳ್ಳಲಾಗುತ್ತಿದೆ. ಹೆಚ್ಚುವರಿಯಾಗಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಅನುದಾನ ನೀಡಲಾಗಿದೆ. ಅದರ ಜತೆಗೆ ಹೆಚ್ಚುವರಿಯಾಗಿ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ 2024-25ನೇ ಸಾಲಿಗೆ 20 ಕೋಟಿ ರು. ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು. 

ರಾಜ್ಯದಲ್ಲಿ ಸದ್ಯ 480 ಬಹುಗ್ರಾಮ ಯೋಜನೆಗಳು ಕಾರ್ಯನಿರ್ವಹಿಸು ತ್ತಿದ್ದು, ಅದರಿಂದ 6,828 ಗ್ರಾಮಗಳಿಗೆ ನೀರು ಸರಬ ರಾಜು ಮಾಡಲಾಗುತ್ತಿದೆ. ಈ ಯೋಜನೆಗಳಲ್ಲಿ ಹೆಚ್ಚಾಗಿ ನದಿ ಆಧಾರಿತ ಮತ್ತು ಜಲಾಶಯಗಳ ಮೇಲ್ಬಾಗದಿಂದ ನೀರು ತೆಗೆದುಕೊಳ್ಳಲಾಗುತ್ತಿದೆ. ಅದರಲ್ಲಿ 413 ಗ್ರಾಮ ಗಳನ್ನು ಒಳಗೊಂಡ 37 ಬಹುಗ್ರಾಮ ಯೋಜನೆಗಳ ಜಲಮೂಲಗಳು ಒಣಗಿದ್ದು, ಆಗ್ರಾಮಗಳಿಗೆ ಟ್ಯಾಂಕ‌ರ್ ಮತ್ತು ಬೋರ್‌ವೆಲ್‌ಗಳ ಮೂಲಕ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. 

158 ತಾಲೂಕಲ್ಲಿ ಸಮಸ್ಯೆ

ರಾಜ್ಯದಲ್ಲಿನ 158 ತಾಲೂಕುಗಳಲ್ಲಿರುವ 26,106 ಗ್ರಾಮಗಳ ಪೈಕಿ 2,207 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿದೆ. ಅದರಲ್ಲಿ 548 ಗ್ರಾಮಗಳಿಗೆ 846 ಟ್ಯಾಂಕರ್‌ಗಳ ಮೂ 1,659 ಗ್ರಾಮಗಳಿಗೆ 2,098 ಖಾಸಗಿ ಬೋರ್‌ವೆಲ್ ಗಳನ್ನು ಬಾಡಿಗೆ ಆಧಾರದಲ್ಲಿ ಪಡೆದು ಅದರಿಂದ ನೀರು ಪೂರೈಸಲಾಗುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌