
ಬೆಂಗಳೂರು, (ಮೇ.28): ಕೋವಿಡ್-19 ಸೋಂಕಿತರ ಪ್ರಮಾಣ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದ್ದು, ಅನ್ಯರಾಜ್ಯಗಳಿಂದ ಬರುವವರಿಗೆ ಹೆಚ್ಚಾಗಿ ಸೋಂಕು ಕಾಣಿಸಿಕೊಳ್ಳುತ್ತಿದೆ.
ಹೀಗಾಗಿ ಐದು ರಾಜ್ಯಗಳಿಂದ ಜನರು ನಮ್ಮ ರಾಜ್ಯಕ್ಕೆ ಬರುವುದನ್ನು ಇನ್ನೂ 15 ದಿನಗಳ ಕಾಲ ನಿರ್ಭಂಧಿಸಲಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿರುವ ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶ, ತಮಿಳುನಾಡು, ರಾಜಸ್ಥಾನ ರಾಜ್ಯಗಳಿಂದ ಬರುವುದನ್ನು ಇನ್ನೂ 15 ದಿನಗಳ ಕಾಲ (ಜೂನ್ 1ರ ವರೆಗೆ) ತಡೆಹಿಡಿಯಲಾಗಿದೆ.
ದಣಿವರಿಯದ ಧೋನಿ, ನೋಟು ಮುದ್ರಣಕ್ಕೆ ಅಸ್ತು ಅಂದ್ರಾ ಪ್ರಧಾನಿ? ಮೇ.28ರ ಟಾಪ್ 10 ಸುದ್ದಿ!
ರಾಜ್ಯ ಸಂಪುಟ ಸಭೆಯಲ್ಲಿ ಇಂದು (ಗುರುವಾರ) ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದ್ದು, ಸಭೆಯ ನಂತರ ಸಚಿವ ಮಾಧುಸ್ವಾಮಿ ಪತ್ರಿಕಾಗೋಷ್ಠಿ ನಡೆಸಿ ಈ ಮಾಹಿತಿ ನೀಡಿದರು.
ವಿಮಾನ, ರೈಲು ಅಥವಾ ರಸ್ತೆ ಮಾರ್ಗ ಸೇರಿದಂತೆ ಯಾವುದರಿಂದ ಬಂದರೂ ಅವರಿಗೆ ಕರ್ನಾಟಕಕ್ಕೆ ಪ್ರವೇಶಿಸಲು ಅನುಮತಿ ನೀಡಲಾಗುವುದಿಲ್ಲ ಎಂದು ಮಾಧುಸ್ವಾಮಿ ಸ್ಪಷ್ಟಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ