ಪ್ರಯಾಣಿಕರಿಗೆ ಗುಡ್‌ ನ್ಯೂಸ್ ಕೊಟ್ಟ ಡಿಸಿಎಂ ಲಕ್ಷ್ಮಣ್ ಸವದಿ

Published : Feb 02, 2021, 02:17 PM IST
ಪ್ರಯಾಣಿಕರಿಗೆ ಗುಡ್‌ ನ್ಯೂಸ್ ಕೊಟ್ಟ ಡಿಸಿಎಂ ಲಕ್ಷ್ಮಣ್ ಸವದಿ

ಸಾರಾಂಶ

ರಾಜ್ಯ ರಸ್ತೆ ಸಾರಿಗೆ ಬಸ್ ಪ್ರಯಾಣ ದರ ಏರಿಕೆ ಸುದ್ದಿಗೆ ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸ್ಪಷ್ಟನೆ ಕೊಟ್ಟಿದ್ದಾರೆ.

ಬೆಂಗಳೂರು, (ಫೆ.02): ಈಗಾಗಲೇ ಕೊರೋನಾ ನಂತ್ರದಿಂದ ಉಂಟಾದಂತ ಆರ್ಥಿಕ ನಷ್ಟಕ್ಕೆ ರಾಜ್ಯದ ಜನರು ನಲುಗಿ ಹೋಗಿದ್ದಾರೆ. ಇದರ ಮಧ್ಯೆ ಕೇಂದ್ರ ಸರ್ಕಾರ 2021ರ ಬಜೆಟ್‌ನಲ್ಲಿ ಪೆಟ್ರೋಲ್ ಡೀಸೆಲ್ ಮೇಲಿನ ಸೆಸ್‌ ಏರಿಕೆ ಮಾಡಿದೆ.

ಈ ಹಿನ್ನೆಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ಬಸ್ ಪ್ರಯಾಣ ದರ ಏರಿಕೆ ಮಾಡಲಾಗುತ್ತದೆ ಎನ್ನುವ ಸುದ್ದಿ ಹರಿದಾಡುತ್ತಿದ್ದವು. ಆದ್ದರಿಂದ ಇದಕ್ಕೆ ಸಂಬಂಧಿಸಿದಂತೆ ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸ್ಪಷ್ಟನೆ ಕೊಟ್ಟಿದ್ದಾರೆ.

Budget 2021: ಪೆಟ್ರೋಲ್, ಡೀಸೆಲ್ ಮೇಲೆ ಕೃಷಿ ಸೆಸ್: ನಾಳೆಯಿಂದಲೇ ಜಾರಿ!

ಸಾರಿಗೆ ಬಸ್ ಪ್ರಯಾಣದರ ಸದ್ಯಕ್ಕೆ ಏರಿಕೆ ಮಾಡುತ್ತಿಲ್ಲ ಎಂಬುದಾಗಿ ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳುವ ಮೂಲಕ, ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ.

ವಿಧಾನಸಭೆ ಕಲಾಪದಲ್ಲಿ ಶಾಸಕರು ಕೇಳಲಾದಂತ ಪ್ರಶ್ನೆಗೆ ಉತ್ತರಿಸಿದ ಸವದಿ, ಸಾರಿಗೆ ಬಸ್ ಪ್ರಯಾಣದರ ಸದ್ಯಕ್ಕೆ ಏರಿಕೆ ಮಾಡುತ್ತಿಲ್ಲ. ಸಾರಿಗೆ ಬಸ್ ದರ ಹೆಚ್ಚಳದ ಚಿಂತನೆ ಸರ್ಕಾರದ ಮುಂದೆ ಇಲ್ಲ ಎಂದು ಹೇಳಿದರು. ಈ ಮೂಲಕ  ಸಾರಿಗೆ ಬಸ್ ಪ್ರಯಾಣಿಕರು ನಿಟ್ಟುಸಿರುಬಿಟ್ಟಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ
ಬಿಡಿಎ ಸೈಟ್ ತಗೊಂಡ್ರೆ ಚಿಪ್ಪೇ ಗತಿ; ಕೆಂಪೇಗೌಡ ಲೇಔಟ್ ಸೈಟ್ ತಗೊಂಡು 10 ವರ್ಷವಾದ್ರೂ ಸೈಟೂ ಇಲ್ಲ, ಸಾಲನೂ ಸಿಗ್ತಿಲ್ಲ!