ಮೋದಿ ಕಾರ್ಯಕ್ರಮದಲ್ಲಿ ಹಿಂದಿ ಹೇರಿಕೆಗೆ ಬ್ರೇಕ್, ಕನ್ನಡದಲ್ಲೇ ನಾಮಫಲಕಗಳು..!

Published : Jun 20, 2022, 03:13 PM ISTUpdated : Jun 20, 2022, 05:38 PM IST
ಮೋದಿ ಕಾರ್ಯಕ್ರಮದಲ್ಲಿ ಹಿಂದಿ ಹೇರಿಕೆಗೆ ಬ್ರೇಕ್, ಕನ್ನಡದಲ್ಲೇ ನಾಮಫಲಕಗಳು..!

ಸಾರಾಂಶ

* ಕರ್ನಾಟಕ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ * ಮೋದಿ ಕಾರ್ಯಕ್ರಮಗಳಲ್ಲಿ ಹಿಂದಿ ಹೇರಿಕೆ ಇಲ್ಲ * ಪ್ರಧಾನಿ ಉದ್ಘಾಟಿಸಿದ ನಾಮಫಲಕಗಳು ಕನ್ನಡದಲ್ಲೇ

ಬೆಂಗಳೂರು, (ಜೂನ್.20): ಕೇಂದ್ರ ಸರ್ಕಾರದ  ಪ್ರತಿನಿಧಿಗಳು ಭಾಗವಹಿಸುವ ರಾಜ್ಯದ ಕಾರ್ಯಕ್ರಮಗಳಲ್ಲಿ ಪ್ರಾದೇಶಿಕ ಭಾಷಾ ನೀತಿ ಗಾಳಿಗೆ ತೂರಿ ಪದೇ ಪದೇ ಹಿಂದಿ ಹೇರಿಕೆಯಾಗುತ್ತಿರುವ ಬಗ್ಗೆ ಎಂಬ ಆರೋಪ ಕೇಳಿಬಂದಿದ್ದವು.

ಇದರಿಂದ ಎಚ್ಚೆತ್ತುಕೊಂಡ ಬೊಮ್ಮಾಯಿ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ ಮೊದಲ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಇಂಗ್ಲೀಷ್ ಗೆ ಮಾತ್ರ ಆದ್ಯತೆ ನೀಡಿದೆ. ಇದರಿಂದ ಹಿಂದಿ ಹೇರಿಕೆಗೆ ಈ ಬಾರಿ ತೆರೆ‌ ಬಿದ್ದಿದೆ.

ಐಐಎಸ್ ಸಿ ಆವರಣದಲ್ಲಿ ಆಯೋಜಿಸಿದ್ದ ಮೊದಲ ಕಾರ್ಯಕ್ರಮ ಮಿದುಳು ಸಂಶೋಧನಾ ಕೇಂದ್ರ ಉದ್ಘಾಟನೆ ಹಾಗೂ ಬಾಗ್ಚಿ- ಪಾರ್ಥಸಾರಥಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಶಿಲಾನ್ಯಾಸ ನೆರವೇರಿಸುವ ಸಂದರ್ಭದಲ್ಲಿ ಫಲಕಗಳನ್ನು ಇಂಗ್ಲೀಷ್ ಹಾಗೂ ಕನ್ನಡದಲ್ಲಿ ಮಾತ್ರ ಕೆತ್ತಲಾಗಿತ್ತು.  ಎಲ್ಲಿಯೂ ಹಿಂದಿ ಅವತರಣಿಕೆಗಳು ಇರಲಿಲ್ಲ.

ಹಿಂದಿ ಬಳಸಿದ್ದಕ್ಕೆ ಕರವೇ ಕಾರ್ಯಕರ್ತರು ಬಿಸಿ, ಮೋದಿ ಬ್ಯಾನರ್‌ಗೆ ಮಸಿ
 
ಈ ಕಾರ್ಯಕ್ರಮ ಉದ್ಘಾಟನೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಜತೆಗಿದ್ದರು

ಹಿಂದೆ ಬ್ಯಾನರ್‌ಗೆ ಮಸಿ
ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಪ್ರವಾಸದ ಹಿನ್ನೆಲೆಯಲ್ಲಿ ಮೈಸೂರು ರಸ್ತೆಗಳಲ್ಲಿ ಹಿಂದೆಯಲ್ಲಿ ಸ್ವಾಗತ ಕೋರಲಾಗಿತ್ತು. ಇದಕ್ಕೆ ಕರವೇ ಕಾರ್ಯಕರ್ಯರು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ರು.

ಮೈಸೂರು ರಸ್ತೆಯಲ್ಲಿ ಮೋದಿ ಸ್ವಾಗತಕ್ಕೆ ಹಿಂದಿ ಬ್ಯಾನರ್ ಹಾಕಲಾಗಿದ್ದು, ಇದಕ್ಕೆ ರಕ್ಷಣಾ ವೇದಿಕೆ ಆಕ್ಷೇಪಿಸಿದೆ. ಅಲ್ಲದೇ ಟಿ.ಎ ನಾರಾಯಣಗೌಡ ಬಣದ ಕರವೇ ಕಾರ್ಯಕರ್ತರು ಹಿಂದಿ ಭಾಷೆಯಲ್ಲಿ ಬ್ಯಾನರ್ ಹಾಕಿದ ಹಿನ್ನಲೆಯಲ್ಲಿ ಮಸಿ ಬಳಿದು ಆಕ್ರೋಶ ಹೊರಹಾಕಿದ್ದಾರೆ. ಇದರಿಂದ ಪೊಲೀಸ್ ಮತ್ತು ರಕ್ಷಣಾ ವೇದಿಕೆಯ ಯುವ ಘಟಕದ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿತ್ತು.

ಕಳೆದ ವರ್ಷ  ಮೈಸೂರು ರಸ್ತೆ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ಮೆಟ್ರೋ ನಿಲ್ದಾಣದವರೆಗಿನ 7.5 ಕಿ.ಮೀ. ಮೆಟ್ರೋ ನೇರಳೆ ಮಾರ್ಗವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹಾಗೂ ಕೇಂದ್ರ ವಸತಿ, ನಗರ ವ್ಯವಹಾರ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಹಸಿರು ನಿಶಾನೆ ತೋರುವ ಮೂಲಕ ಉದ್ಘಾಟಿಸಿದ್ದರು. ಆದ್ರೆ, ಈ ಕಾರ್ಯಕ್ರಮದಲ್ಲಿ ಕನ್ನಡವನ್ನು ಕಡೆಗಣಿಸಲಾಗಿತ್ತು. ಕಾರ್ಯಕ್ರಮದ ತುಂಬೆಲ್ಲ ಹಿಂದೆಯಲ್ಲೇ ಇತ್ತು. ಇದು ಭಾರೀ ಆಕ್ರೊಶಕ್ಕೆ ಕಾರಣವಾಗಿತ್ತು.

ಕೆಂಗೇರಿ ನೇರಳೆ ಮಾರ್ಗದ ನಮ್ಮ ಮೆಟ್ರೋ ಉದ್ಘಾಟನೆ‌ ಕಾರ್ಯಕ್ರಮದಲ್ಲಿ ಕನ್ನಡವನ್ನು ಕಡೆಗಣಿಸಿರುವುದು ಕರ್ನಾಟಕಕ್ಕೆ ಮಾಡಿದ ಅವಮಾನ. ಸರ್ಕಾರಿ ಕಾರ್ಯಕ್ರಮದಲ್ಲೇ ಕನ್ನಡ ಕಡೆಗಣಿಸಿರುವ ಉದ್ದಟತನ ಸಹಿಸಲು ಸಾಧ್ಯವಿಲ್ಲ. ನಮ್ಮ ಮೆಟ್ರೋ ಯೋಜನೆ ಕೇಂದ್ರ ಹಾಗೂ ರಾಜ್ಯದ ಸಹಭಾಗಿತ್ವದ ಯೋಜನೆ. ಹೀಗಿರುವಾಗ ಕನ್ನಡಕ್ಕೂ ಆದ್ಯತೆ ಇರಬೇಕಲ್ಲವೆ.? ಅಂತೆಲ್ಲ ಪ್ರಶ್ನಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!
ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!