
ವಿಧಾನ ಪರಿಷತ್ (ಮಾ.19): ಉಪಹಾರ ಸೇವಿಸಲು ಇಡ್ಲಿ, ದೋಸೆ ಸಿಗುತ್ತಿಲ್ಲ. ಶಾಸಕರ ಭವನದಲ್ಲೇ ಸಿಕ್ಕಿಲ್ಲ. ಶಾಸಕರ ಪರಿಸ್ಥಿತಿಯೇ ಹೀಗಾದರೆ ಜನರ ಪರಿಸ್ಥಿತಿ ಹೇಗೆ ಎಂದು ಕಾಂಗ್ರೆಸ್ ಸದಸ್ಯ ಐವನ್ ಡಿಸೋಜಾ ಪ್ರಶ್ನಿಸಿದರು.
ಕಲಾಪ ಆರಂಭವಾಗುತ್ತಿದ್ದಂತೆ ಡಿಸೋಜಾ ಅವರು, ಹೋಟೆಲ್ಗಳಲ್ಲಿ ಇಂದು ತಿಂಡಿ ಸಿಗುತ್ತಿಲ್ಲ. ಶಾಸಕರ ಭವನದಲ್ಲಿಯೇ ಇಡ್ಲಿ, ದೋಸೆ ಸಿಗುತ್ತಿಲ್ಲ. ಸಮಸ್ಯೆ ಎಲ್ಲಿವರೆಗೂ ಇರಲಿದೆ, ಈ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ: Ugadi Festival 2026: ಯುಗಾದಿ ಎಂದರೆ ಕೇವಲ ಹಬ್ಬವಲ್ಲ, ಹೊಸ ವರ್ಷದ ಶುಭಾರಂಭ, ಬೇವು-ಬೆಲ್ಲದ ಆರೋಗ್ಯ ಮಹತ್ವ ತಿಳಿಯಿರಿ
ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಇಡ್ಲಿ, ವಡಾ ಸಿಗುತ್ತಿಲ್ಲವೆಂದು ಸದಸ್ಯರು ದೂರುತ್ತಿದ್ದಾರೆ. ಹೀಗಾಗಿ ಇಡ್ಲಿ ತರಿಸಿಕೊಳ್ಳುವ ವ್ಯವಸ್ಥೆ ಮಾಡಿಸಿ ಎಂದು ಹೇಳಿದಾಗ ಸಚಿವ ಜಮೀರ್ ಅಹಮದ್ ಪ್ರತಿಕ್ರಿಯಿಸಿ, ಇಡ್ಲಿ ಸಿಗುತ್ತಿಲ್ಲ ಎಂದು ಹೇಳಿಲ್ಲ. ಅಡುಗೆ ಮಾಡಲು ಗ್ಯಾಸ್ ಸಿಗುತ್ತಿಲ್ಲ ಇಂದು ಹೇಳುತ್ತಿದ್ದಾರೆ ಎಂದರು. ಈ ವೇಳೆ ಸಭಾಪತಿ ಬಸವರಾಜ ಹೊರಟ್ಟಿ, 10 ನಿಮಿಷ ಕಾಲಾವಕಾಶ ಕೊಡ್ತೇನೆ, ತಿಂಡಿ ತಿಂದು ಬನ್ನಿ ಎಂದು ನಗುತ್ತಾ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ