ಸರ್ಕಾರದ ಭ್ರಷ್ಟಾಚಾರ ಬಗ್ಗೆ ಮಾಹಿತಿ ಇಲ್ಲ: ಕೆಂಪಣ್ಣ ಉಲ್ಟಾ

Published : Feb 14, 2024, 06:48 AM IST
ಸರ್ಕಾರದ ಭ್ರಷ್ಟಾಚಾರ ಬಗ್ಗೆ ಮಾಹಿತಿ ಇಲ್ಲ: ಕೆಂಪಣ್ಣ ಉಲ್ಟಾ

ಸಾರಾಂಶ

ಈ ಸರ್ಕಾರ 40% ಕಮೀಷನ್ ಕೇಳುತ್ತಿದೆ ಎಂಬರ್ಥದಲ್ಲಿ ನಾನು ಹೇಳಿಲ್ಲ. ಭ್ರಷ್ಟಾಚಾರದ ಪರ್ಸೆಂಟೇಜ್ ಕಡಿಮೆಯಾಗಿದೆ. ಪ್ಯಾಕೇಜ್ ರೀತಿ ಟೆಂಡ‌ರ್ ಕರೆದರೆ ಹೆಚ್ಚಿನ ಭ್ರಷ್ಟಾಚಾರಕ್ಕೆ ಎಡೆಮಾಡಿಕೊಟ್ಟಂತಾಗುತ್ತದೆ. ಹೀಗಾಗಿ ಪ್ರತಿ ಕಾಮಗಾರಿಗೂ ಪ್ರತ್ಯೇಕ ಟೆಂಡರ್ ಕರೆಯಬೇಕು ಎಂದಷ್ಟೇ ಒತ್ತಾಯಿಸಿದ್ದೇವೆ ಎಂದು ಹೇಳಿದ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ 

ಬೆಂಗಳೂರು(ಫೆ.14):  ಸರ್ಕಾರ ಬಿಲ್‌ ಪಾವತಿಯಲ್ಲಿ ಭ್ರಷ್ಟಾಚಾರ ನಡೆಸಿದ ಯಾವುದೇ ಮಾಹಿತಿ ನನಗಿಲ್ಲ, ಬದಲಾಗಿ ಹಿಂದಿನ ಸರ್ಕಾರಕ್ಕೆ ಹೋಲಿಸಿದರೆ ಸಣ್ಣ ಗುತ್ತಿಗೆದಾರರಿಗೆ ಬಾಕಿ ಅನುದಾನ ಬಿಡುಗಡೆ ಮಾಡಿ ನಮಗೆ ಸ್ಪಂದಿಸಿದೆ ಎನ್ನುವ ಮೂಲಕ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಯೂಟರ್ನ್ ಹೊಡೆದಿದ್ದಾರೆ.

5 ದಿನಗಳ ಹಿಂದಷ್ಟೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಮೀಷನ್ ಆರೋಪ ಮಾಡಿದ್ದ ಅವರು ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಅಚ್ಚರಿಯ ಹೇಳಿಕೆ ನೀಡಿದರು. ಈ ಸರ್ಕಾರ 40% ಕಮೀಷನ್ ಕೇಳುತ್ತಿದೆ ಎಂಬರ್ಥದಲ್ಲಿ ನಾನು ಹೇಳಿಲ್ಲ. ಭ್ರಷ್ಟಾಚಾರದ ಪರ್ಸೆಂಟೇಜ್ ಕಡಿಮೆಯಾಗಿದೆ. ಪ್ಯಾಕೇಜ್ ರೀತಿ ಟೆಂಡ‌ರ್ ಕರೆದರೆ ಹೆಚ್ಚಿನ ಭ್ರಷ್ಟಾಚಾರಕ್ಕೆ ಎಡೆಮಾಡಿಕೊಟ್ಟಂತಾಗುತ್ತದೆ. ಹೀಗಾಗಿ ಪ್ರತಿ ಕಾಮಗಾರಿಗೂ ಪ್ರತ್ಯೇಕ ಟೆಂಡರ್ ಕರೆಯಬೇಕು ಎಂದಷ್ಟೇ ಒತ್ತಾಯಿಸಿದ್ದೇವೆ ಎಂದು ಹೇಳಿದರು. 

ಕಾಂಗ್ರೆಸ್ ಸರ್ಕಾರದಲ್ಲಿ ಸರ್ಕಾರಿ ಅಧಿಕಾರಿಗಳ ಭ್ರಷ್ಟಾಚಾರ ಮಿತಿ ಮೀರಿದೆ: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಕಿಡಿ

ಗುತ್ತಿಗೆದಾರರಿಗೆ ಹಿಂದಿನ ಸರ್ಕಾರದ ಅವಧಿಯಲ್ಲಿ ಅನುದಾನ ಬಿಡುಗಡೆಯಾಗುವ ಮಟ್ಟಿನ ಸ್ಪಂದನೆ ಸಿಕ್ಕಿರಲಿಲ್ಲ. ಆದರೆ ಈ ಬಾರಿ ಬಾಕಿ ಬಿಲ್ ಪಾವತಿಸುವ ಮಾಡುವ ಬಗ್ಗೆ ಮುಖ್ಯಮಂತ್ರಿ, ಡಿಸಿಎಂ ಸಕಾರಾತ್ಮಕ ಸ್ಪಂದನೆ ಮಾಡಿದ್ದಾರೆ. 1054 ಮಂದಿ ಸಣ್ಣ ಗುತ್ತಿಗೆದಾರರಿಗೆ ಪೂರ್ಣವಾಗಿ ₹ 1 ಕೋಟಿ ಒಳಗಿನ ಬಿಲ್ ಒಟ್ಟು ₹ 800 ಕೋಟಿಯನ್ನು ಸರ್ಕಾರ ಬಿಡುಗಡೆ ಮಾಡಿದ್ದನ್ನು ಸ್ವಾಗತಿಸುತ್ತೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Karnataka News Live: ಮಾಟಗಾತಿಯ ಮಾತು ಕೇಳಿ ಗಂಡು ಮಗುವಿಗಾಗಿ ಪತ್ನಿಯ ತಲೆ ಕೂದಲು ಕತ್ತರಿಸಿದ ಪತಿ
ಸದನದ ಗೌರವ ಎತ್ತಿಹಿಡಿಯಿರಿ: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಕಿವಿಮಾತು