ಗಣಿಗಾರಿಕೆ ಬಗ್ಗೆ ಸಚಿವ ನಿರಾಣಿ ಎಚ್ಚರಿಕೆ

Kannadaprabha News   | Asianet News
Published : Jan 31, 2021, 07:04 AM IST
ಗಣಿಗಾರಿಕೆ ಬಗ್ಗೆ  ಸಚಿವ ನಿರಾಣಿ ಎಚ್ಚರಿಕೆ

ಸಾರಾಂಶ

ರಾಜ್ಯದಲ್ಲಿರುವ ಎಲ್ಲಾ ಗಣಿಗಾರಿಕೆಗಳನ್ನು ಸಕ್ರಮ ಮಾಡಲಾಗುವುದಿಲ್ಲ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಹುಣಸೋಡು ಪ್ರಕರಣ ಬೆನ್ನಲ್ಲೇ ಎಲ್ಲಾ ಗಣಿಗಾರಿಕೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. 

ಬೆಳಗಾವಿ(ಜ.31):  ಶಿವಮೊಗ್ಗ ತಾಲೂಕಿನ ಹುಣಸೋಡಿನಲ್ಲಿ ಸ್ಫೋಟ ಪ್ರಕರಣ ಕುರಿತು ಲೀಗಲ್‌, ಇಲ್ಲೀಗಲ್‌ ಅಂತಿಲ್ಲ. ಎಲ್ಲಾ ಲೈಸೆನ್ಸ್‌ಗಳು ಲೀಗಲ್ ಇವೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಡೀಮ್‌್ಡ ಎಕ್ಸ್‌ಟೆನ್ಷನ್‌ ಅಂತಾ ಕೇಂದ್ರ ಸರ್ಕಾರ ಪರ್ಮಿಷನ್‌ ಕೊಟ್ಟಿದೆ. 

ಆದರೆ ಇಲ್ಲಿ ಅಕ್ರಮವಾಗಿ ಲಾರಿಗಳಲ್ಲಿ ಸಾಗಾಟವಾಗಿದೆ. ರಾಯಲ್ಟಿತುಂಬದೇ ಮಾರಾಟ ಮಾಡಿದ್ದು ಬೆಳಕಿಗೆ ಬಂದಿದೆ. ಸ್ಯಾಟ್‌ಲೈಟ್‌ ಮೂಲಕ ಗೂಗಲ್ ಸರ್ವೇ ಮಾಡಿ ಪತ್ತೆ ಹಚ್ಚಿ ದಂಡ ವಿಧಿಸುತ್ತೇವೆ. ಎಲ್ಲಾ ಗಣಿಗಾರಿಕೆಗಳನ್ನು ಸಕ್ರಮ ಮಾಡುತ್ತಿಲ್ಲ. ಕಾನೂನು ಬದ್ಧವಾಗಿ ಗಣಿಗಾರಿಕೆಗಳನ್ನು ಸಕ್ರಮ ಮಾಡುತ್ತೇವೆ. ಶಿವಮೊಗ್ಗ ದುರಂತದಲ್ಲಿ ಮೃತಪಟ್ಟಆರು ಜನರ ಕುಟುಂಬಕ್ಕೆ ತಲಾ 5 ಲಕ್ಷ ಸರ್ಕಾರದಿಂದ ಪರಿಹಾರ ನೀಡಲಾಗಿದ್ದು, ಮಾಲಿಕರಿಂದಲೂ ಪರಿಹಾರ ನೀಡುವಂತೆ ಸೂಚಿಸಿದ್ದೇವೆ ಎಂದರು.

ಗಣಿಗಾರಿಕೆ ನಡೆಸುವವರಿಗೆ ಸರ್ಕಾರದಿಂದ ತರಬೇತಿ .

ಸ್ಫೋಟ ಪ್ರೊಡಕ್ಷನ್‌, ಸಾಗಾಟ ಮಾಡುವವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗುವುದು. ಈ ರೀತಿ ದುರ್ಘಟನೆ ಆಗಬಾರದೆಂಬ ದೃಷ್ಟಿಯಿಂದ ಉನ್ನತ ಮಟ್ಟದ ತನಿಖಾ ತಂಡ ರಚಿಸಿದ್ದೇವೆ. ಇದು ಅನ್‌ಸ್ಕಿಲ್ಡ… ಸ್ಟ್ರಕ್ಚರ್‌ ಮೈನಿಂಗ್‌ ಬಗ್ಗೆ ತಿಳಿವಳಿಕೆ ನೀಡಲು ಮೈನಿಂಗ್‌ ಯೂನಿವರ್ಸಿಟಿ ಸ್ಥಾಪಿಸಲು ನಿರ್ಧಾರ ಮಾಡಲಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ