ಯಾವುದೇ ಕಾರಣಕ್ಕೂ ಬೇಸಿಗೆಗೆ ಲೋಡ್ ಶೆಡ್ಡಿಂಗ್ ಇಲ್ಲ: ಸಚಿವ ಕೆ.ಜೆ.ಜಾರ್ಜ್

Published : Mar 01, 2025, 10:55 AM ISTUpdated : Mar 01, 2025, 11:04 AM IST
ಯಾವುದೇ ಕಾರಣಕ್ಕೂ ಬೇಸಿಗೆಗೆ ಲೋಡ್ ಶೆಡ್ಡಿಂಗ್ ಇಲ್ಲ: ಸಚಿವ ಕೆ.ಜೆ.ಜಾರ್ಜ್

ಸಾರಾಂಶ

ರಾಜ್ಯದಲ್ಲಿ ಪ್ರಸಕ್ತ ಬೇಸಿಗೆಯಲ್ಲಿ ಗರಿಷ್ಠ ವಿದ್ಯುತ್‌ ಬಳಕೆ 19,000 ದಿಂದ 19,500 ಮೆ.ವ್ಯಾಟ್‌ಗೆ ಹೆಚ್ಚಳ ಹೀಗಾಗಿ ವಿದ್ಯುತ್ ಆಗುವ ಸಾಧ್ಯತೆಯಿದೆ. ಬೇಡಿಕೆಯನ್ನು ಈಡೇರಿಸಲು ಇಂಧನ ಇಲಾಖೆ ವಿವಿಧ ಕ್ರಮ ಕೈಗೊಂಡಿದ್ದು, ಯಾವುದೇ ಕಾರಣಕ್ಕೂ ಲೋಡ್‌ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. 

ಬೆಂಗಳೂರು (ಮಾ.01): ರಾಜ್ಯದಲ್ಲಿ ಪ್ರಸಕ್ತ ಬೇಸಿಗೆಯಲ್ಲಿ ಗರಿಷ್ಠ ವಿದ್ಯುತ್‌ ಬಳಕೆ 19,000 ದಿಂದ 19,500 ಮೆ.ವ್ಯಾಟ್‌ಗೆ ಹೆಚ್ಚಳ ಹೀಗಾಗಿ ವಿದ್ಯುತ್ ಆಗುವ ಸಾಧ್ಯತೆಯಿದೆ. ಬೇಡಿಕೆಯನ್ನು ಈಡೇರಿಸಲು ಇಂಧನ ಇಲಾಖೆ ವಿವಿಧ ಕ್ರಮ ಕೈಗೊಂಡಿದ್ದು, ಯಾವುದೇ ಕಾರಣಕ್ಕೂ ಲೋಡ್‌ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬೇಸಿಗೆಯಲ್ಲಿ ವಿದ್ಯುತ್‌ ಪೂರೈಕೆ ಸಂಬಂಧ ಎಸ್ಕಾಂಗಳ ಮುಖ್ಯಸ್ಥರು ಹಾಗೂ ಇಂಧನ ಇಲಾಖೆಹಿರಿಯ ಅಧಿಕಾರಿಗಳೊಂದಿಗೆ ನಡೆಸಿದಸಭೆ ಬಳಿಕಸುದ್ದಿಗಾರರೊಂದಿಗೆ ಮಾತನಾಡಿದರು.

ಬೇಸಿಗೆಯಲ್ಲಿ ರೈತರ ಕೃಷಿ ಪಂಪ್ ಸೆಟ್‌ಗಳಿಗೆ ದಿನ 7 ಗಂಟೆ ಮತ್ತು ನಿರಂತರ ವಿದ್ಯುತ್‌ಗೆ 24 ಗಂಟೆ ವಿದ್ಯುತ್, ಇತರೆ ಉದ್ದೇಶಗಳಿಗೆ ಎಂದಿನಂತೆ ವಿದ್ಯುತ್ ಪೂರೈಸಲಾಗುವುದು. ಇದಕ್ಕೆ ಎಲ್ಲ ಸಿದ್ಧತಾ ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದರು. ಕಳೆದ ವರ್ಷದ ಫೆ.27ರಂದು ಗರಿಷ್ಠ ವಿದ್ಯುತ್ ಬೇಡಿಕೆ 16,500 ಮೆ.ವ್ಯಾಟ್ ಇತ್ತು. ಆದರೆ ಈ ವರ್ಷದ ಫೆ.27 ರಂದು 18,230 ಮೆ.ವ್ಯಾಟ್‌ಗೆ ತಲುಪಿದೆ. ಮುಂದಿನ ಮೂರು ತಿಂಗಳಲ್ಲಿ ಅತಿ ಹೆಚ್ಚು 19,000 ದಿಂದ 19,500 ಮೆ.ವ್ಯಾಟ್ ವರೆಗೆ ಬೇಡಿಕೆ ಹೆಚ್ಚಾಗುವ ನಿರೀಕ್ಷೆ ಇದೆ. ಇದನ್ನು ಸರಿದೂಗಿಸಲು 1 ಸಾವಿರ ಮೆ.ಟ್ ವಿದ್ಯುತ್ ಖರೀದಿಗೆ ನಿರ್ಧರಿ ಸಿದ್ದು, ಉತ್ತರಪ್ರದೇಶ ಹಾಗೂ ಪಂಜಾಬ್ ನಿಂದ ವಿದ್ಯುತ್ ಸಾಲ (ಬ್ಯಾಂಕಿಂಗ್) ಪಡೆಯಲು ತೀರ್ಮಾನಿಸಲಾಗಿದೆ.

ಡಿಕೆಶಿ ಬಿಜೆಪಿಗೆ ಬಂದೇ ಬಿಡ್ತಾರೆ ಅಂತ ಗುಸುಗುಸು: ಬಿ.ವೈ.ವಿಜಯೇಂದ್ರ ಹೇಳಿದ್ದೇನು?

ಜಲವಿದ್ಯುತ್‌ ಸ್ಥಾವರಗಳಲ್ಲಿ ಇರುವ ನೀರನ್ನು ಸದ್ಯಕ್ಕೆ ಬಳಸಿಕೊಳ್ಳುವುದಿಲ್ಲ ಎಂದರು. ಇಂಧನ ಭದ್ರತೆಗೆ ಬ್ಯಾಟರಿಸ್ಟೋರೇಜ್:ರಾಜ್ಯದಲ್ಲಿ ಹೆಚ್ಚು ವಿದ್ಯುತ್ ಉತ್ಪಾದನೆಯಿದ್ದರೂ ಸಂಗ್ರಹಣೆಗೆ ಅವಕಾಶ ಇಲ್ಲ, ಸೌರಶಕ್ತಿ ಘಟಕದಲ್ಲಿ ವಿದ್ಯುತ್‌ ಉತ್ಪಾದನೆ ಇದ್ದರೂ ಹಗಲಿನಲ್ಲಿ ಮಾತ್ರ ಬಳಕೆ ಮಾಡಿಕೊಳ್ಳಬೇಕು. ಹೀಗಾಗಿ ಪಾವಗಡದಲ್ಲಿ 1000 ಮೆ.ವ್ಯಾ. ಸಾಮರ್ಥ್ಯದ ಬ್ಯಾಟರಿ ಸ್ಟೋರೇಜ್ ಯೋಜನೆ ಮಾಡಲಾಗುವುದು. ಶರಾವತಿ ಪಂಪ್ ಸ್ಟೋರೇಜ್‌ನಲ್ಲಿ ವಿದ್ಯುತ್‌ ಬಳಕೆ ಮಾಡಿದ ನೀರಿನ ಪುನರ್ ಬಳಕೆ ಮೂಲಕ 2000 ಮೆ.ವ್ಯಾ. ಹಾಗೂ ವಾರಾಹಿ ಪಂಪ್ ಸ್ಟೋರೇಜ್ ಮೂಲಕ 1600 ಮೆ. ವ್ಯಾ. ವಿದ್ಯುತ್ ಉತ್ಪಾದನೆ ಮಾಡಲಾಗುವುದು ಎಂದರು.

ವಿದ್ಯುತ್ ಉತ್ಪಾದನೆ ವಿವರ: ಫೆಬ್ರವರಿ 27ರ ಮಾಹಿತಿ ಪ್ರಕಾರ, ಕೆಪಿಸಿಎಲ್‌ನ ಉಷ್ಣ ವಿದ್ಯುತ್‌ ಸ್ಥಾವರಗಳಲ್ಲಿ 3,300 ಮೆ.ವ್ಯಾ., ಜಲ ವಿದ್ಯುತ್ ಘಟಕಗಳಲ್ಲಿ 2000 ಮೆ.ವ್ಯಾ. ವಿದ್ಯುತ್ ಉತ್ಪಾದನೆ ಯಾಗಿದೆ. ಯುಪಿಸಿಎಲ್ ನಿಂದ 1,260 ಮೆ.ವ್ಯಾ., ಸೌರಶಕ್ತಿ ಮೂಲಕ6,655 ಮೆ.ವ್ಯಾ., ಪವನ ವಿದ್ಯುತ್ ಮೂಲಕ 1940 ಮೆ.ವ್ಯಾ. ಉತ್ಪಾದನೆ, ಸಿಜಿಎಸ್ (ಸೆಂಟ್ರಲ್ ಜೆನರೇಟಿಂಗ್ ಸ್ಟೇಷನ್ಸ್)ನಿಂದ 6,183 ಮೆ.ವ್ಯಾ. ವಿದ್ಯುತ್, ಕೇಂದ್ರ ಗ್ರಿಡ್‌ನಿಂದ 600 ಮೆಗಾವ್ಯಾಟ್ ಪಡೆಯಲಾಗಿದೆ. ಪಂಜಾಬ್ ಮತ್ತು ಉತ್ತರಪ್ರದೇಶದಿಂದ ವಿನಿಮಯ ಆಧಾರದ ಮೇಲೆ 700 ಮೆಗಾ ವ್ಯಾಟ್ ವಿದ್ಯುತ್ ಪಡೆಯಲಾಗಿದೆ. ಶನಿವಾರದಿಂದ (ಮಾ. 1) ಕೂಡ್ಡಿಯಿಂದ ಹೆಚ್ಚುವರಿಯಾಗಿ 310 ಮೆಗಾವ್ಯಾಟ್, ವಿನಿಮಯ ಆಧಾರದ ಮೇಲೆ ಉತ್ತರ ಪ್ರದೇಶದಿಂದ ದಿನಕ್ಕೆ 100ರಿಂದ 1,275 ಮೆ.ವ್ಯಾ. ಮತ್ತು ಪಂಜಾಬ್‌ನಿಂದ 300 ಮೆ.ವ್ಯಾ. ವಿದ್ಯುತ್ ತೆಗೆದುಕೊಳ್ಳಲಾಗುವುದು. 

ಓವರ್ ಲೋಡ್ ಸಮಸ್ಯೆ ಬಗೆಹರಿಸಲು ಕ್ರಮ: ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ ಮಾತನಾಡಿ, ರಾಜ್ಯದ ಕೆಲವು ಸಬ್ ಸ್ಟೇಷನ್ ಗಳ ವ್ಯಾಪ್ತಿಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗಿ ಇರುವ ಓವರ್‌ಲೋಡ್ ಆಗುತ್ತಿದೆ. ಇನ್ನು ಕೆಲವು ಉಪ ಕೇಂದ್ರಗಳ ವ್ಯಾಪ್ತಿಯಲ್ಲಿ ಬೇಡಿಕೆಗಿಂತ ಹೆಚ್ಚು ವಿದ್ಯುತ್‌ ಲಭ್ಯವಿದ್ದು, ಅಂಡರ್‌ಲೋಡ್ ಆಗುತ್ತಿದೆ. ಈ ಸಮಸ್ಯೆ ತಪ್ಪಿಸಲು ಅಂಡರ್‌ಲೋಡ್ ಇರುವ ಉಪಕೇಂದ್ರಗಳಿಂದ ಓವರ್‌ಲೋಡ್ ಉಪಕೇಂದ್ರಗಳಿಗೆ ವಿದ್ಯುತ್ ಒದಗಿಸಲು ಲಿಂಕ್ ಲೈನ್ ವ್ಯವಸ್ಥೆಗೆ ಆದ್ಯತೆ ನೀಡಲಾಗುತ್ತಿದೆ. ಜತೆಗೆ ಪ್ರಸರಣ, ವಿತರಣೆ ಸಮಸ್ಯೆ ತಪ್ಪಿಸಲು 100 ಹೊಸ ಸಬ್ ಸ್ಟೇಷನ್ ಸ್ಥಾಪಿಸಲಾಗುವುದು ಎಂದರು. ಕ್ರೆಡಲ್ ಅಧ್ಯಕ್ಷ ಟಿ.ಡಿ ರಾಜೇಗೌಡ, ಪಿಸಿಕೆಎಲ್ ವ್ಯವಸ್ಥಾಪಕ ನಿರ್ದೇಶಕ ಲೋಖಂಡೆ ಸ್ನೇಹಲ್ ಸುಧಾಕರ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ. ಎನ್. ಶಿವಶಂಕರ್ ಹಾಜರಿದ್ದರು.

ಸರ್ಕಾರ ಖಜಾನೆಯಿಂದ ಒಂದು ಪೈಸೆ ಕೊಡಬೇಕಿಲ್ಲ, ಸರ್ಟಿಫಿಕೇಟ್ ಕೊಟ್ಟರೆ ಸಾಕು: ಸಂಸದ ಯದುವೀರ್‌

1,000 ಮೆ.ವ್ಯಾ ವಿದ್ಯುತ್ ಖರೀದಿ: ವಿದ್ಯುತ್ ಕೊರತೆ ನೀಗಿಸಲು ಕೇಂದ್ರ ವಿದ್ಯುತ್ ಎಕ್ಸ್‌ಚೇಂಜ್ ನಿಂದ ಪ್ರತಿ ಯುನಿಟ್‌ಗೆ 6.5 ರು.ಗಳಂತೆ ಮಾ.1 ರಿಂದ ಜೂನ್ ಮೊದಲ ವಾರದವರೆಗೆ 1,000 ಮೆ. ವ್ಯಾಟ್ ವಿದ್ಯುತ್ ಖರೀದಿ ಮಾಡಲಾಗುವುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್
ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!