ಕರ್ನಾಟಕದಲ್ಲಿ ಲೋಡ್‌ ಶೆಡ್ಡಿಂಗ್‌ ಮಾಡಿಲ್ಲ, ವಿದ್ಯುತ್‌ ಕಡಿತಕ್ಕೆ ಸೂಚನೆಯನ್ನೂ ಕೊಟ್ಟಿಲ್ಲ: ಸಚಿವ ಜಾರ್ಜ್‌

Published : Sep 06, 2023, 01:30 AM IST
ಕರ್ನಾಟಕದಲ್ಲಿ ಲೋಡ್‌ ಶೆಡ್ಡಿಂಗ್‌ ಮಾಡಿಲ್ಲ, ವಿದ್ಯುತ್‌ ಕಡಿತಕ್ಕೆ ಸೂಚನೆಯನ್ನೂ ಕೊಟ್ಟಿಲ್ಲ: ಸಚಿವ ಜಾರ್ಜ್‌

ಸಾರಾಂಶ

ರಾಜ್ಯದಲ್ಲಿ ಮಳೆ ಕೊರತೆಯಿಂದ ವಿದ್ಯುತ್‌ ಬೇಡಿಕೆ ಹೆಚ್ಚಾಗಿದೆ. ಬೇಸಿಗೆಯಲ್ಲಿ ಇರುವಷ್ಟು ವಿದ್ಯುತ್‌ ಬೇಡಿಕೆ ಈಗಲೇ ಇದೆ. ಥರ್ಮಲ್‌ ವಿದ್ಯುತ್‌ ಘಟಕ ದುರಸ್ತಿ ನಡೆಯುತ್ತಿದೆ. ಕಳೆದ ಮೂರು ನಾಲ್ಕು ದಿನಗಳಿಂದ ಕೆಲವೆಡೆ ಕೊಂಚ ವ್ಯತ್ಯಯ ಆಗಿರಬಹುದು. ಆದರೆ, ಎಲ್ಲಿಯೂ ಲೋಡ್‌ ಶೆಡ್ಡಿಂಗ್‌ಗೆ ಸೂಚನೆ ನೀಡಿಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್‌ 

ಬೆಂಗಳೂರು(ಸೆ.06):  ರಾಜ್ಯದ ಯಾವುದೇ ಭಾಗದಲ್ಲೂ ಅಘೋಷಿತ ವಿದ್ಯುತ್‌ ಕಡಿತ ಮಾಡಿಲ್ಲ. ಲೋಡ್‌ ಶೆಡ್ಡಿಂಗ್‌ ಮಾಡುವಂತೆ ಅಧಿಕಾರಿಗಳಿಗೆ ಯಾವ ಸೂಚನೆಯನ್ನೂ ನೀಡಿಲ್ಲ. ವಿದ್ಯುತ್‌ ಸ್ಥಾವರಗಳ ದುರಸ್ಥಿ ಕಾರ್ಯಗಳು ಇರುವೆಡೆ ಕೊಂಚ ವ್ಯತ್ಯಯಗಳು ಆಗಿರಬಹುದು ಅಷ್ಟೆಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಸ್ಪಷ್ಟನೆ ನೀಡಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ವಿದ್ಯುತ್‌ ಕಡಿತ ಮಾಡುತ್ತಿರುವ ಬಗ್ಗೆ ರೈತರಿಂದ ಬರುತ್ತಿರುವ ದೂರುಗಳ ಬಗ್ಗೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಮಳೆ ಕೊರತೆಯಿಂದ ವಿದ್ಯುತ್‌ ಬೇಡಿಕೆ ಹೆಚ್ಚಾಗಿದೆ. ಬೇಸಿಗೆಯಲ್ಲಿ ಇರುವಷ್ಟು ವಿದ್ಯುತ್‌ ಬೇಡಿಕೆ ಈಗಲೇ ಇದೆ. ಥರ್ಮಲ್‌ ವಿದ್ಯುತ್‌ ಘಟಕ ದುರಸ್ತಿ ನಡೆಯುತ್ತಿದೆ. ಕಳೆದ ಮೂರು ನಾಲ್ಕು ದಿನಗಳಿಂದ ಕೆಲವೆಡೆ ಕೊಂಚ ವ್ಯತ್ಯಯ ಆಗಿರಬಹುದು. ಆದರೆ, ಎಲ್ಲಿಯೂ ಲೋಡ್‌ ಶೆಡ್ಡಿಂಗ್‌ಗೆ ಸೂಚನೆ ನೀಡಿಲ್ಲ ಎಂದು ತಿಳಿಸಿದ್ದಾರೆ. 

ಲೋಡ್‌ ಶೆಡ್ಡಿಂಗ್‌: ವಿದ್ಯುತ್‌ ಖರೀದಿಗೆ ಹೊರ ರಾಜ್ಯಗಳಿಗೆ ಕರ್ನಾಟಕ ಸರ್ಕಾರ ಮೊರೆ?

ಲೋಡ್‌ ಶೆಡ್ಡಿಂಗ್‌ ಅಗತ್ಯ ಬಿದ್ದರೆ ಮೊದಲೇ ತಿಳಿಸಿ ಮಾಡುತ್ತೇವೆ. ಸದ್ಯ ಅದರ ಅಗತ್ಯವಿಲ್ಲ. ನಿತ್ಯ 40 ಕೋಟಿ ರು. ವೆಚ್ಚದ ವಿದ್ಯತ್‌ ಖರೀದಿ ಮಾಡುತ್ತಿದ್ದೇವೆ. ರಾಜ್ಯದಲ್ಲಿ ಮತ್ತೆ ಮಳೆ ಆರಂಭವಾಗಿರುವುದರಿಂದ ವಿದ್ಯುತ್‌ ಉತ್ಪಾದನೆಯೂ ಹೆಚ್ಚಾಗುತ್ತಿದೆ. ಮಂಗಳವಾರ ನಿಗದಿಗಿಂತ 100 ಯೂನಿಟ್‌ ಉತ್ಪಾದನೆ ಹೆಚ್ಚಾಗಿದೆ. ಮಳೆ ಮುಂದುವರೆದರೆ ಸಮಸ್ಯೆ ನಿವಾರಣೆಯಾಗುತ್ತದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿದ್ದು ಸರ್ಕಾರದ ವಿರುದ್ಧ ಬಿಜೆಪಿ ಬೃಹತ್‌ ಪ್ರತಿಭಟನೆ
ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ