
ಬೆಂಗಳೂರು, (ಜೂನ್.26): ಕೊರೋನಾ ವೈರಸ್ ವ್ಯಾಪಕವಾಗಿ ಹಬ್ಬುತ್ತಿರುವುದರಿಂದ ಬೆಂಗಳೂರನ್ನು ಲಾಕ್ಡೌನ್ ಮಾಡಬೇಕೆನ್ನುವ ವಿಚಾರವಾಗಿ ನಡೆದಿದ್ದ ಬೆಂಗಳೂರು ಸರ್ವಪಕ್ಷಗಳ ಶಾಸಕರ ಸಭೆ ಅಂತ್ಯವಾಗಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ, ಕಂದಾಯ ಸಚಿವ ಹಾಗೂ ಬೆಂಗಳೂರು ಕೊರೋನಾ ನಿಯಂತ್ರಣ ಉಸ್ತುವಾರಿ ಆಗಿರುವ ಆರ್. ಅಶೋಕ್ ಅವರು ಸಭೆಯಲ್ಲಾದ ಚರ್ಚೆಗಳ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಅದು ಈ ಕೆಳಗಿನಂತಿದೆ.
ಬೆಂಗಳೂರು ಲಾಕ್ಡೌನ್: ಶಾಸಕರು -ಸಚಿವರು-ಸಂಸದರು ಹೇಳೋದೇನು..?
ಲಾಕ್ಡೌನ್ ಇಲ್ಲ
ಹೌದು....ಯಾವುದೇ ಕಾರಣಕ್ಕೂ ಬೆಂಗಳೂರು ಲಾಕ್ಡೌನ್ ಮಾಡುವುದಿಲ್ಲ ಎಂದು ಸಚಿವ ಅಶೋಕ್ ಸ್ಪಷ್ಟಪಡಿಸಿದರು. ಕೊರೋನಾ ಜತೆ ನಮ್ಮ ಜೀವನ ನಡೆಯಬೇಕು. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೆ ಮತ್ತೆ ಲಾಕ್ಡೌನ್ ಮಾಡುವುದಿಲ್ಲ ಎಂದು ಹೇಳಿದರು. ಅಲ್ಲದೇ ಕೊರೋನಾ ಸೋಂಕಿತರು ಕಂಡುಬಂದ ಏರಿಯಾವನ್ನು ಸೀಲ್ಡೌನ್ ಮಾಡುವುದಿಲ್ಲ. ಬದಲಾಗಿ ಸೋಂಕಿತ ಮನೆಗಳನ್ನ ಮಾತ್ರ ಸೀಲ್ಡೌನ್ ಮಾಡಲಾಗುವುದು ಎಂದು ಹೇಳಿದರು.
ಬೆಡ್ ಅಲಾರ್ಟ್ಮೆಂಟ್ಗೆ ಐಎಎಸ್ ಆಫೀಸರ್
ರಾಜ್ಯದಲ್ಲಿ ಈವರೆಗೆ 5.53 ಲಕ್ಷ ಜನರ ಸ್ಯಾಂಪಲ್ ಪರೀಕ್ಷೆ ನಡೆದಿದೆ. ಬೆಂಗಳೂರಿನಲ್ಲಿ ಪ್ರತಿದಿನ 5 ಸಾವಿರ ಸ್ಯಾಂಪಲ್ ಪರೀಕ್ಷೆ ಮಾಡಲಾಗುತ್ತಿದೆ. ಬೆಡ್ ಹಂಚಿಕೆ ಸಂಬಂಧ ವಿಧಾನಸಭಾವಾರು ನೋಡಲ್ ಆಫೀಸರ್ ಆಗಿ ಐಎಎಸ್ ಅಧಿಕಾರಿ ತುಷಾರ್ ಗಿರಿನಾಥ್ ಅವರನ್ನ ನೇಮಿಸಲಾಗಿದೆ. ಕ್ವಾರಂಟೈನ್ ಮಾಡುವುದಕ್ಕೆ ಹೋಟೆಲ್ ಸಾಲದೇ ಹೋದರೆ, ಕಲ್ಯಾಣ ಮಂಟಪಗಳ ಬಳಕೆ ಮಾಡುತ್ತೇವೆ. ಅಲ್ಲದೇ ಆಯಾ ವಿಧಾಸಬಾ ಕ್ಷೇತ್ರ ಎಲ್ಲಾ ಶಾಸಕರಿಗೂ ಆಸ್ಪತ್ರೆಗಳನ್ನು ಪರಿಶೀಲನೆ ಮಾಡಲು ಮನವಿ ಮಾಡಿದ್ದೇವೆ ಎಂದರು.
ಎಲ್ಲಾ ಗೊಂದಲಗಳಿಗೆ ತೆರೆ
ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಹೆಚ್ಚುತ್ತಿರುವುದರಿಂದ ಮತ್ತೆ ಲಾಕ್ಡೌನ್ ಸುದ್ದಿ ಹರಿದಾಡುತ್ತಿತ್ತು. ಅದರಲ್ಲೂ ಬೆಂಗಳೂರು ಲಾಕ್ಡೌನ್ ಫಿಕ್ಸ್ ಅಂತೆಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಿದಾಡುತ್ತಿದ್ದವು. ಆದ್ರೆ, ಯಾವುದೇ ಲಾಕ್ಡೌನ್ ಇಲ್ಲ ಎಂದು ಸಚಿವ ಅಶೋಕ್ ಸ್ಪಷ್ಟಪಡಿಸಿದ್ದು, ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಇದಕ್ಕೂ ಮುನ್ನ ಸ್ವತಃ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸಹ ಲಾಕ್ಡೌನ್ ಇಲ್ಲ ಎಂದು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ