
ತುಮಕೂರು: ಸಾಮೂಹಿಕ ಕೇಶಮುಂಡನದಿಂದ ಹಿಂದೆ ಸರಿದ ಸಿದ್ಧಗಂಗಾ ಮಠ, ವಿದ್ಯಾರ್ಥಿಗಳಿಗೆ ಕೇವಲ ಹೇರ್ ಕಟಿಂಗ್ಗೆ ಅನುಮತಿ ನೀಡುವುದರೊಂದಿಗೆ ವಿವಾದಕ್ಕೆ ಇತಿಶ್ರೀ ಹಾಡಿದೆ.
ಮಂಗಳವಾರ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಸವಿತಾ ಸಮಾಜದ 200 ಮಂದಿ ಸಿದ್ಧಗಂಗಾ ಮಠದ 4,000 ವಿದ್ಯಾರ್ಥಿಗಳಿಗೆ ಸಾಮೂಹಿಕವಾಗಿ ಹೇರ್ ಕಟಿಂಗ್ ಮಾಡಿದರು.
ಶ್ರೀಗಳ ಪುಣ್ಯಸ್ಮರಣೆ ಸಂದರ್ಭದಲ್ಲಿ ಮಠದ ಎಲ್ಲ ವಿದ್ಯಾರ್ಥಿಗಳಿಗೆ ಸಾಮೂಹಿಕ ಕೇಶಮುಂಡನ ಮಾಡುವುದಾಗಿ ಬೆಂಗಳೂರಿನ ಸವಿತಾ ಸಮಾಜ ಯುವ ವೇದಿಕೆ ಸಿದ್ಧಲಿಂಗ ಸ್ವಾಮೀಜಿಗೆ ಮನವಿ ಸಲ್ಲಿಸಿತ್ತು. ಶ್ರೀಗಳು ಕೂಡಾ ಒಪ್ಪಿಗೆ ನೀಡಿದ್ದರು.
ಆದರೆ ಮಾತೆ ಮಹಾದೇವಿ ಅವರು ಸಾಮೂಹಿಕ ಕೇಶಮುಂಡನ ಲಿಂಗಾಯತ, ವೀರಶೈವ ಸಮಾಜಕ್ಕೆ ವಿರುದ್ಧವಾದದ್ದು ಎಂದು ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕೇವಲ ಹೇರ್ಕಟ್ ಮಾಡಲು ಒಪ್ಪಿಗೆ ನೀಡಿದ್ದಾಗಿ ಸ್ವಾಮೀಜಿ ಸ್ಪಷ್ಟನೆ ನೀಡಿದ್ದರು.
ಡಾ.ಶಿವಕುಮಾರ ಸ್ವಾಮೀಜಿಗಳ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಕಳೆದ ವಾರ ನಡೆಯಬೇಕಿದ್ದ ಹೇರ್ಕಟಿಂಗ್ ಅನ್ನು ಮುಂದೂಡಲಾಗಿತ್ತು. ಮಂಗಳವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 4.30ರ ತನಕ ಮಠದ ವಿದ್ಯಾರ್ಥಿಗಳಿಗೆ ಹೇರ್ಕಟಿಂಗ್ ನಡೆಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ