
ಸಿ.ಎ.ಇಟ್ನಾಳಮಠ
ಅಥಣಿ (ಮೇ. 8): ಸ್ಥಳೀಯ ಮಟ್ಟದ ಮಾಹಿತಿಗಳನ್ನು ಮೇಲಧಿಕಾರಿಗಳ ಮೂಲಕ ಸರ್ಕಾರಕ್ಕೆ ನೀಡುವ ಸಲುವಾಗಿ ರಾಜ್ಯಾದ್ಯಂತ ಸೇವೆ ಸಲ್ಲಿಸುತ್ತಿರುವ 65 ಸಾವಿರಕ್ಕೂ ಅಧಿಕ ಅಂಗನವಾಡಿ ಶಿಕ್ಷಕರಿಯರಿಗೆ (anganwadi teachers) ಒದಗಿಸಲಾಗಿದ್ದ ಮೊಬೈಲ್ ಸೇವೆಗಳು (Moblise Service) ರಿಚಾರ್ಜ್ (Recharge) ಮಾಡದ ಹಿನ್ನೆಲೆಯಲ್ಲಿ 3 ತಿಂಗಳಿಂದ ಸಂಪೂರ್ಣ ಸ್ತಬ್ಧಗೊಂಡಿವೆ.
2021 ಡಿಸೆಂಬರ್ ತಿಂಗಳಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ (Women and Child development) ಅಂಗನವಾಡಿ ಶಿಕ್ಷಕಿಯರಿಗೆ ಮೊಬೈಲ್ ಒದಗಿಸಲಾಗಿತ್ತು. ಅಲ್ಲದೆ, ಪ್ರತಿಯೊಬ್ಬ ಶಿಕ್ಷಕಿಯರಿಗೆ ನೀಡಲಾಗಿದ್ದ ಮೊಬೈಲ್ಗೆ ಮೇಲಧಿಕಾರಿಗಳೇ ಪ್ರಿಪೇಡ್ ಕರೆನ್ಸಿ ಹಾಕಿಸುವ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದರು. ಆದರೆ, ಕಳೆದ ಮೂರ್ನಾಲ್ಕು ತಿಂಗಳಿಂದ ಕರೆನ್ಸಿಯನ್ನು ಮೊಬೈಲ್ಗೆ ಹಾಕಿಯೇ ಇಲ್ಲ.
ಏಕೆ ನೀಡಲಾಗಿತ್ತು ಮೊಬೈಲ್?: ರಾಜ್ಯ ಸರ್ಕಾರಕ್ಕೆ ಸ್ಥಳೀಯ ಮಟ್ಟದ ಅದರಲ್ಲೂ ತಳಮಟ್ಟದಲ್ಲಿರುವ ಮಾಹಿತಿ ಪಡೆದುಕೊಳ್ಳಲು ಇರುವುದು ಇದೇ ಅಂಗನವಾಡಿ ಶಿಕ್ಷಕಿಯರು. ಅವರು ನಿತ್ಯ ಸರ್ಕಾರಕ್ಕೆ ಸ್ಥಳೀಯ ಮಟ್ಟದ ಮಾಹಿತಿಯನ್ನು ಮೊಬೈಲ್ ಮೂಲಕ ತಮ್ಮ ಮೇಲಧಿಕಾರಿಗಳಿಗೆ ತಿಳಿಸಬೇಕು. ನಿತ್ಯ ಮಕ್ಕಳ ಹಾಜರಾತಿ, ಬಾಣಂತಿಯರ ಆರೋಗ್ಯದ ಸ್ಥಿತಿಗತಿ, ಗ್ರಾಮದಲ್ಲಿ ಶಿಶು ಮರಣ ಬಾಣಂತಿ, ಪ್ರತಿ ತಿಂಗಳು ಹುಟ್ಟಿದ ಮಗುವಿನ ಆರೋಗ್ಯದ ಸ್ಥಿತಿ ಒಳಗೊಂಡು ಎಲ್ಲ ಮಾಹಿತಿಯನ್ನು ಒದಗಿಸಲು ರಾಜ್ಯ ಸರ್ಕಾರ ಮೊಬೈಲ್ ಒದಗಿಸಿತ್ತು. ಇದರಿಂದ ಹೆಚ್ಚು ಅನುಕೂಲ ಕೂಡ ಆಗಿತ್ತು. ಈಗ ಮೊಬೈಲ್ ಸ್ಥಗಿತವಾಗಿರುವುದರಿಂದ ಮಾಹಿತಿ ಹಂಚಿಕೊಳ್ಳಲು ಕಷ್ಟವಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಮೊಬೈಲ್ಗೂ ಮೊದಲು ಪರಿಸ್ಥಿತಿ ಹೇಗಿತ್ತು?: ಈ ಸೌಲಭ್ಯ ಮೊಬೈಲ್ ಸೌಲಭ್ಯ ಇಲ್ಲದ ವೇಳೆ ಪ್ರತಿ ಹದಿನೈದು ದಿನಕ್ಕೊಮ್ಮೆ ತಾಲೂಕು ಮತ್ತು ವಿಭಾಗದ ಮಟ್ಟದ ಕಂದಾಯ ಅಧಿಕಾರಿಗಳು ಪ್ರತಿ ಅಂಗನವಾಡಿ ವ್ಯಾಪ್ತಿಯಲ್ಲಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ಸಭೆ ಮಾಡಿ ಮಾಹಿತಿ ಸಂಗ್ರಹಿಸುತ್ತಿದ್ದರು. ಮೊಬೈಲ್ ಒದಗಿಸಿರುವುದು ಬಜೆಟ್ ಘೋಷಣೆ ಯೋಜನೆ ಆಗಿರಲಿಲ್ಲ. ಅಧಿಕಾರಿಗಳ ಮಟ್ಟದಲ್ಲಿ ಕೈಗೊಂಡ ನಿರ್ಣಯವಾಗಿತ್ತು ಎಂದು ಮೂಲಗಳು ಹೇಳಿವೆ.
"ಮೊಬೈಲ್ ಸೇವೆ ಸ್ಥಗಿತವಾಗಿದ್ದು ಸತ್ಯ. ಇದರ ಬಗ್ಗೆ ನಮ್ಮ ಮೇಲಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಹೆಚ್ಚಿನ ವಿವರ ನಮಗೆ ಗೊತ್ತಿಲ್ಲ' ಎಂದು ಬೆಳಗಾವಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕ ಎ.ಎಂ.ಬಸವರಾಜ ಹೇಳಿದ್ದಾರೆ.
Udupi Anganwadi Recruitment 2022: ಅಂಗನವಾಡಿ ಕೇಂದ್ರದ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (basavaraj bommai) ತಮ್ಮ ಚೊಚ್ಚಲ ಬಜೆಟ್ ನಲ್ಲಿ, ನಿರೀಕ್ಷೆಯಂತೆಯೇ ಅಂಗನವಾಡಿ ಕಾರ್ಯಕರ್ತೆಯರು (Anganwadi Workers)ಮತ್ತು ಅಂಗನವಾಡಿ ಸಹಾಯಕಿಯರ (Anganwadi helper) ವೇತನ ಹಾಗೂ ಭತ್ಯೆಯನ್ನು ಹೆಚ್ಚಳ ಮಾಡಿದ್ದರು. ಮಾತ್ರವಲ್ಲ ಆಶಾ ಕಾರ್ಯಕರ್ತರು (asha workers), ಗ್ರಾಮ ಸಹಾಯಕರು ಮತ್ತು ಬಿಸಿಯೂಟ ತಯಾರಕರಿಗೂ ಗೌರವ ಧನ ಹೆಚ್ಚಿಸಲಾಗಿದೆ. 20 ವರ್ಷಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆಯರಿಗೆ 1,500 ರೂ. 15 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದವರಿಗೆ 1,200 ರೂ. ಹಾಗೂ 15 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ 1,000 ರೂ. ಗೌರವಧನ ಹೆಚ್ಚಳ ಮಾಡಲಾಗಿದೆ.
Uttara Kannada Anganwadi Recruitment 2022: ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ
ವೇತನ ಹಾಗೂ ಭತ್ಯೆ ಹೆಚ್ಚಿಸುವುದು ಸೇರಿದಂತೆ ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಪ್ರತಿಭಟನೆ ನಡೆಸಿದ್ದರು. ರಾಜ್ಯ ಸರ್ಕಾರದ ನಿಯಮಾವಳಿ ಪ್ರಕಾರ ಅಂಗನವಾಡಿ ಕಾರ್ಯಕರ್ತೆಯರಿಗೆ 18 ಸಾವಿರ ರು.ಕನಿಷ್ಠ ವೇತನ ಕೊಡಬೇಕು. ಆದರೆ, ಈಗಲೂ 10 ಸಾವಿರ ರೂ.ಗಳಿಗೆ ದುಡಿಸಲಾಗುತ್ತಿದೆ. ರಾಜ್ಯದಲ್ಲಿ 62 ಸಾವಿರ ಅಂಗನವಾಡಿಗಳಲ್ಲಿ 1.24 ಲಕ್ಷ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕಾರ್ಯನಿರ್ವಹಿಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ