ಯಾವುದೇ ಜಾತಿಯ ಬಗ್ಗೆ ಹೇಳಿಕೆ ನೀಡಿಲ್ಲ: ರಂಭಾಪುರಿ ಶ್ರೀ ಸ್ಪಷ್ಟನೆ

Kannadaprabha News   | Kannada Prabha
Published : Jul 29, 2025, 07:14 AM IST
Rambhapuri Swamiji

ಸಾರಾಂಶ

ನಮ್ಮ ಸಂಸ್ಕೃತಿ, ಪರಂಪರೆ, ಆದರ್ಶಗಳ ಬಗ್ಗೆ ಮಾತನಾಡಿದ್ದೇವೆ. ಇದರ ಹೊರತು, ಅನ್ಯ, ಬೇರೆ ಯಾವುದೇ ಜಾತಿಗಳ ಕುರಿತಂತೆ ಯಾವುದೇ ಹೇಳಿಕೆಯನ್ನೂ ನೀಡಿಲ್ಲ

  ದಾವಣಗೆರೆ :  ನಮ್ಮ ಸಂಸ್ಕೃತಿ, ಪರಂಪರೆ, ಆದರ್ಶಗಳ ಬಗ್ಗೆ ಮಾತನಾಡಿದ್ದೇವೆ. ಇದರ ಹೊರತು, ಅನ್ಯ, ಬೇರೆ ಯಾವುದೇ ಜಾತಿಗಳ ಕುರಿತಂತೆ ಯಾವುದೇ ಹೇಳಿಕೆಯನ್ನೂ ನೀಡಿಲ್ಲ ಎಂದು ರಂಭಾಪುರಿ ಪೀಠದ ಡಾ। ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಭದ್ರಾವತಿಯಲ್ಲಿ ತಾಲೂಕು ಘಟಕ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ನಮ್ಮ ಸಂಸ್ಕೃತಿ ಬಗ್ಗೆ ಮಾತನಾಡಿದ್ದೇನೆ. ಹಿಂದುಳಿದ, ದಲಿತ ಮಠಾಧೀಶರು ಅದನ್ನೇ ತಪ್ಪುಗ್ರಹಿಕೆ ಮಾಡಿಕೊಂಡು, ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿರುವುದಕ್ಕೆ ವಿಷಾದಿಸುತ್ತೇವೆ. ತಮ್ಮ ಭಾಷಣದಲ್ಲಿ ಅವರವರ ಸಮುದಾಯದ ವಿಚಾರದಲ್ಲಿ ಯಾವುದೇ ಹಸ್ತಕ್ಷೇಪವಾಗಲೀ, ಅಲ್ಲಸಲ್ಲದ ಮಾತುಗಳಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತೇವೆ ಎಂದು ತಿಳಿಸಿದ್ದಾರೆ.

ಜಾತಿಯ ಮಠಗಳಿಂದ ಕಲುಷಿತ ವಾತಾವರಣ ಈ ಹೇಳಿಕೆ ಹಿನ್ನೆಲೆಯಲ್ಲಿ ದಲಿತ ಹಿಂದುಳಿದ ಮಠಾಧೀಶರು ಸುದ್ದಿಗೋಷ್ಠಿ ಮಾಡಿರುವುದು ನೋವಿನ ಸಂಗತಿ. ತಾವು ಅನ್ಯ, ಬೇರೆ ಯಾವುದೇ ಜಾತಿ ಕುರಿತು ಹೇಳಿಕೆ ನೀಡಿಲ್ಲವೆಂದು ರಂಭಾಪುರಿ ಶ್ರೀ ಪತ್ರಿಕಾ ಹೇಳಿಕೆಯಲ್ಲಿ ಪುನರುಚ್ಚರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!